ಮನರಂಜನೆ

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ ನಡೆದಿದೆ.

ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮವೂ ಸಹ ಒಂದು ರೀತಿ ವಿಜಯ್ ಅವರಿಗೆ ಚಿತ್ರರಂಗದಿಂದ ವಿದಾಯ ಕೊಡುವಂತೆಯೇ ಇತ್ತು. ತಮಿಳಿನ ಖ್ಯಾತ ಯುವ ನಿರ್ದೇಶಕರುಗಳಾದ ಅಟ್ಲಿ, ಲೋಕೇಶ್ ಕನಗರಾಜ್ ಇನ್ನೂ ಕೆಲವರು ಕಾರ್ಯಕ್ರಮದಲ್ಲಿ ಹಾಜರಿದ್ದು, ವಿಜಯ್ ಅವರನ್ನು ಕೊಂಡಾಡಿದರು.

ಕೊನೆಯಲ್ಲಿ ವಿಜಯ್ ಸಹ ತುಸು ಭಾವುಕವಾಗಿಯೇ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಜನ ನಾಯಗನ್ ನನ್ನ ಕೊನೆಯ ಸಿನಿಮಾ, ಇದನ್ನು ಹೇಳುವುದೇ ನನಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ ಬೇರೆ ಆಯ್ಕೆ ಇಲ್ಲ. ‘ಅಭಿಮಾನಿಗಳು ಕೇಳುತ್ತಿದ್ದಾರೆ, ನೀವೇಕೆ ಸಿನಿಮಾ ಬಿಟ್ಟು ಹೋಗುತ್ತಿದ್ದೀರಿ ಎಂದು, ನಾನು ಬೀಚ್ ಬದಿ ಸಣ್ಣ ಮನೆ ಕಟ್ಟಿಕೊಳ್ಳೋಣ ಎಂದುಕೊಂಡೆ, ಆದರೆ ಅಭಿಮಾನಿಗಳು ದೊಡ್ಡ ಕೋಟೆಯನ್ನೇ ಕಟ್ಟಿಕೊಟ್ಟಿದ್ದೀರಿ. ನಾನು ನಟನೆಗೆ ಬಂದಾಗಿನಿಂದ ಈಗಿನ ವರೆಗೂ ಅಭಿಮಾನಿಗಳು ನನ್ನ ಜೊತೆಗೆ ಇದ್ದೀರಿ, ನನಗೆ ಬೆಂಬಲಿಸಿದ್ದೀರಿ, ನನಗೆ ಬೇಕಾದ ಎಲ್ಲವನ್ನೂ ನೀಡಿದ್ದೀರಿ, ಆದರೆ ಮುಂದಿನ ನನ್ನ ಜೀವನದ 30 ವರ್ಷಗಳನ್ನು ನಾನು ಅಭಿಮಾನಿಗಳಿಗಾಗಿ ಕಳೆಯಬೇಕು ಎಂದುಕೊಂಡಿದ್ದೀನಿ’ ಎಂದಿದ್ದಾರೆ ವಿಜಯ್.

ಇದನ್ನು ಓದಿ: ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ನನಗಾಗಿ ತಮ್ಮ ಎಲ್ಲವನ್ನೂ ಕೊಟ್ಟಿರುವ ಅಭಿಮಾನಿಗಳಿಗಾಗಿ ನಾನು ನನ್ನ ಪ್ರೀತಿಯ ಸಿನಿಮಾವನ್ನು ಬಿಟ್ಟುಕೊಡುತ್ತಿದ್ದೀನಿ. ಈ ವಿಜಯ್ ಕೇವಲ ಒಳ್ಳೆಯದು ಹೇಳಲು ಬಂದವನಲ್ಲ. ಒಳ್ಳೆಯತನವನ್ನು ಸ್ಥಾಪಿಸಲು ಬಂದವ. ಇದು ನನ್ನ ಕೊನೆಯ ಸಿನಿಮಾ ಆಗಿರಬಹುದು, ಆದರೆ ಇದರ ಅಂತ್ಯದ ಬಳಿಕ ಹೊಸ ಅಧ್ಯಾಯವೇ ಆರಂಭ ಆಗಲಿದೆ’ ಎಂದಿದ್ದಾರೆ ದಳಪತಿ ವಿಜಯ್.

ಶೀಘ್ರವೇ ಅಭಿಮಾನಿಗಳ ಮುಂದೆ ಸಿನಿಮಾ ಬರಲಿದೆ. ಈ ಬಾರಿ ಒಂಟಿಯಾಗಿ ಬರಲಿದ್ದೇವಾ? ಜಂಟಿಯಾಗಿ ಬರಲಿದ್ದೇವ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆ ಕುತೂಹಲ ಹಾಗೆಯೇ ಇರಲಿ ಎಂದಿರುವ ವಿಜಯ್, ಇಷ್ಟು ವರ್ಷ ಒಂಟಿಯಾಗಿಯೇ ಹೋರಾಡಿದ್ದೇವೆ’ ಎಂದೂ ಸಹ ಹೇಳಿದ್ದಾರೆ. ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

7 mins ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

22 mins ago

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

58 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

3 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

4 hours ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

4 hours ago