ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ ನಡೆದಿದೆ.
ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮವೂ ಸಹ ಒಂದು ರೀತಿ ವಿಜಯ್ ಅವರಿಗೆ ಚಿತ್ರರಂಗದಿಂದ ವಿದಾಯ ಕೊಡುವಂತೆಯೇ ಇತ್ತು. ತಮಿಳಿನ ಖ್ಯಾತ ಯುವ ನಿರ್ದೇಶಕರುಗಳಾದ ಅಟ್ಲಿ, ಲೋಕೇಶ್ ಕನಗರಾಜ್ ಇನ್ನೂ ಕೆಲವರು ಕಾರ್ಯಕ್ರಮದಲ್ಲಿ ಹಾಜರಿದ್ದು, ವಿಜಯ್ ಅವರನ್ನು ಕೊಂಡಾಡಿದರು.
ಕೊನೆಯಲ್ಲಿ ವಿಜಯ್ ಸಹ ತುಸು ಭಾವುಕವಾಗಿಯೇ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಜನ ನಾಯಗನ್ ನನ್ನ ಕೊನೆಯ ಸಿನಿಮಾ, ಇದನ್ನು ಹೇಳುವುದೇ ನನಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ ಬೇರೆ ಆಯ್ಕೆ ಇಲ್ಲ. ‘ಅಭಿಮಾನಿಗಳು ಕೇಳುತ್ತಿದ್ದಾರೆ, ನೀವೇಕೆ ಸಿನಿಮಾ ಬಿಟ್ಟು ಹೋಗುತ್ತಿದ್ದೀರಿ ಎಂದು, ನಾನು ಬೀಚ್ ಬದಿ ಸಣ್ಣ ಮನೆ ಕಟ್ಟಿಕೊಳ್ಳೋಣ ಎಂದುಕೊಂಡೆ, ಆದರೆ ಅಭಿಮಾನಿಗಳು ದೊಡ್ಡ ಕೋಟೆಯನ್ನೇ ಕಟ್ಟಿಕೊಟ್ಟಿದ್ದೀರಿ. ನಾನು ನಟನೆಗೆ ಬಂದಾಗಿನಿಂದ ಈಗಿನ ವರೆಗೂ ಅಭಿಮಾನಿಗಳು ನನ್ನ ಜೊತೆಗೆ ಇದ್ದೀರಿ, ನನಗೆ ಬೆಂಬಲಿಸಿದ್ದೀರಿ, ನನಗೆ ಬೇಕಾದ ಎಲ್ಲವನ್ನೂ ನೀಡಿದ್ದೀರಿ, ಆದರೆ ಮುಂದಿನ ನನ್ನ ಜೀವನದ 30 ವರ್ಷಗಳನ್ನು ನಾನು ಅಭಿಮಾನಿಗಳಿಗಾಗಿ ಕಳೆಯಬೇಕು ಎಂದುಕೊಂಡಿದ್ದೀನಿ’ ಎಂದಿದ್ದಾರೆ ವಿಜಯ್.
ಇದನ್ನು ಓದಿ: ರಾಷ್ಟ್ರಪಿತನ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ
ನನಗಾಗಿ ತಮ್ಮ ಎಲ್ಲವನ್ನೂ ಕೊಟ್ಟಿರುವ ಅಭಿಮಾನಿಗಳಿಗಾಗಿ ನಾನು ನನ್ನ ಪ್ರೀತಿಯ ಸಿನಿಮಾವನ್ನು ಬಿಟ್ಟುಕೊಡುತ್ತಿದ್ದೀನಿ. ಈ ವಿಜಯ್ ಕೇವಲ ಒಳ್ಳೆಯದು ಹೇಳಲು ಬಂದವನಲ್ಲ. ಒಳ್ಳೆಯತನವನ್ನು ಸ್ಥಾಪಿಸಲು ಬಂದವ. ಇದು ನನ್ನ ಕೊನೆಯ ಸಿನಿಮಾ ಆಗಿರಬಹುದು, ಆದರೆ ಇದರ ಅಂತ್ಯದ ಬಳಿಕ ಹೊಸ ಅಧ್ಯಾಯವೇ ಆರಂಭ ಆಗಲಿದೆ’ ಎಂದಿದ್ದಾರೆ ದಳಪತಿ ವಿಜಯ್.
ಶೀಘ್ರವೇ ಅಭಿಮಾನಿಗಳ ಮುಂದೆ ಸಿನಿಮಾ ಬರಲಿದೆ. ಈ ಬಾರಿ ಒಂಟಿಯಾಗಿ ಬರಲಿದ್ದೇವಾ? ಜಂಟಿಯಾಗಿ ಬರಲಿದ್ದೇವ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆ ಕುತೂಹಲ ಹಾಗೆಯೇ ಇರಲಿ ಎಂದಿರುವ ವಿಜಯ್, ಇಷ್ಟು ವರ್ಷ ಒಂಟಿಯಾಗಿಯೇ ಹೋರಾಡಿದ್ದೇವೆ’ ಎಂದೂ ಸಹ ಹೇಳಿದ್ದಾರೆ. ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಲಿದೆ.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…