ಮನರಂಜನೆ

ರಾಣ ಹೊಸ ಚಿತ್ರ ‘ಏಳುಮಲೆ’; ಟೈಟಲ್‍ ಟೀಸರ್‌ ಅನಾವರಣ

ರಕ್ಷಿತಾ ಸಹೋದರ ರಾಣ ಪುನೀತ್‍ ರಂಗಸ್ವಾಮಿ ನಿರ್ದೇಶನದ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆಯೇ ಪ್ರಾರಂಭವಾಗಿ, ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಚಿತ್ರದ ಹೆಸರನ್ನು ಚಿತ್ರತಂಡ ಘೋಷಿಸಿರಲಿಲ್ಲ. ಇತ್ತೀಚೆಗೆ ಚಿತ್ರದ ಟೈಟಲ್‍ ಟೀಸರ್‌ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಏಳುಮಲೆ’ ಎಂದು ಹೆಸರಿಡಲಾಗಿದೆ.

ಒರಾಯನ್‍ ಮಾಲ್‍ನ ಪಿವಿಆರ್‌ ಚಿತ್ರಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಶಿವರಾಜಕುಮಾರ್‌ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇನ್ನು, ‘ಜೋಗಿ’ ಪ್ರೇಮ್‍ ಸಹ ಈ ಸಂದರ್ಭದಲ್ಲಿ ಹಾಜರಿದ್ದರು. ಈ ಚಿತ್ರವನ್ನು ತರುಣ್‍ ಸುಧೀರ್‌ ಮತ್ತು ಅಟ್ಲಾಂಟ ನಾಗೇಂದ್ರ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ರಾಣಗೆ ನಾಯಕಿಯಾಗಿ ‘ಮಹಾನಟಿ’ ಖ್ಯಾತಿಯ ಪ್ರಿಯಾಂಕಾ ನಟಿಸುತ್ತಿದ್ದಾರೆ.

ತರುಣ್‌ ಸುಧೀರ್‌ ಮಾತನಾಡಿ, ‘ಚಿತ್ರರಂಗ ಅನ್ನೋದು ಗೋಲ್ಡ್‌ ಮೈನಿಂಗ್.‌ ಕೆಲವೊಮ್ಮೆ ಬೇಗ ಚಿನ್ನ ಸಿಗುತ್ತದೆ. ಕೆಲವೊಮ್ಮೆ ತಡವಾಗಿ ಚಿನ್ನ ಸಿಗುತ್ತದೆ. ಇವತ್ತು ಟೈಟಲ್‌ ಟೀಸರ್‌ ಲಾಂಚ್‌ ಮಾಡುತ್ತಿದ್ದೇವೆ. ಒಂದೊಳ್ಳೆಯ ಮೊತ್ತಕ್ಕೆ ಆನಂದ್ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. ಒಂದೊಳ್ಳೆಯ ವಿಷಯ ಇರುವ ಸಿನಿಮಾ ಅಂದರೆ, ಅದಕ್ಕೆ ಬೆಲೆ ಇದ್ದೇ ಇರುತ್ತದೆ’ ಎಂದರು.

ನಿರ್ದೇಶಕ ಪುನೀತ್ ರಂಗಸ್ವಾಮಿ ಮಾತನಾಡಿ, ‘ಇದು ಸಂಘರ್ಷದ ಕಥೆಯಲ್ಲ. ಇದೊಂದು ಪ್ರೇಮಕಥೆ. ಆ ಕಾಲಘಟ್ಟದಲ್ಲಿ ನಡೆದ ಕಥೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ’ ಎಂದು ತಿಳಿಸಿದರು.

ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದ್ದು, ಚಾಮರಾಜನಗರ, ಸೇಲಂ, ಈರೋಡ್‌ ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರದಲ್ಲಿ ರಾಣ ಮತ್ತು ಪ್ರಿಯಾಂಕಾ ಆಚಾರ್‌ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್‌ ಸಂಕಲನ, ಡಿ. ಇಮ್ಮನ್‌ ಸಂಗೀತ ಚಿತ್ರಕ್ಕಿದೆ.

‘ಏಳುಮಲೆ’ ಚಿತ್ರವು ಕನ್ನಡವಲ್ಲದೆ, ತಮಿಳು ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

14 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

15 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

16 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

17 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

17 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

18 hours ago