raghavendra rippan swami
ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು ಕಥೆ ಹೇಳಿದ್ದಾರೆ. ಆ ಕಥೆ ‘ರಿಪ್ಪನ್ ಸ್ವಾಮಿ’ ಹೆಸರಿನಲ್ಲಿ ಚಿತ್ರವಾಗಿದ್ದು, ಆಗಸ್ಟ್.29ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
‘ರಿಪ್ಪನ್ ಸ್ವಾಮಿ’ ಕುರಿತು ಮಾತನಾಡುವ ವಿಜಯ್ ರಾಘವೇಂದ್ರ, ‘ಈ ಪಾತ್ರವನ್ನು ನಾನೇ ಮಾಡಬೇಕು ಎಂದು ಕಿಶೋರ್ ಸುಮಾರು ಎರಡು ವರ್ಷಗಳ ಕಾಲ ಕಾದಿದ್ದಾರೆ. ನನಗಾಗಿ ಕಾಯಬೇಡಿ, ಬೇರೆಯವರಿಂದ ಮಾಡಿಸಿ ಎಂದಿದ್ದೆ. ‘ಯಾರಿಗೋ ಮಾಡೋದಾಗಿದ್ರೆ ನಾನು ಯಾಕೆ ನಿಮಗಾಗಿ ಎರಡು ವರ್ಷ ಕಾಯಬೇಕಿತ್ತು, ಈ ಕಥೆಗೆ ನೀವೇ ಬೇಕು ಎಂದು ನನ್ನಿಂದ ಈ ಪಾತ್ರ ಮಾಡಿಸಿದ್ದಾರೆ. ‘ಮಾಲ್ಗುಡಿ ಡೇಸ್’ ಚಿತ್ರೀಕರಣ ಸಂದರ್ಭದಲ್ಲಿ ಒಳ್ಳೆಯವನಾಗಿ ಆಗಿ ಸಾಕಾಗಿದೆ. ಸ್ವಲ್ಪ ಬೇರೆ ತರಹದ ಪಾತ್ರ ಮಾಡ್ಬೇಕು ಅಂತ ಅವರಿಗೆ ಹೇಳಿದ್ದೆ. ಯಾವುದೇ ಪಾತ್ರ ಮಾಡಿದ್ರು ಚೆನ್ನಾಗಿ ಮಾಡಿದ್ದೀಯಾ ಅಂತ ಅನ್ನಿಸಿಕೊಳ್ಳಬೇಕು ಎಂಬುದೇ ನನ್ನ ಆಸೆ. ಇದರಲ್ಲೂ ಅದು ಸಾಧ್ಯವಾಗಿದೆ’ ಎಂದರು.
ನಿರ್ದೇಶಕ ಕಿಶೋರ್ ಮೂಡಬಿದ್ರೆ ಮಾತನಾಡಿ, ‘ಮಾಲ್ಗುಡಿ ಡೇಸ್’ ಸಿನಿಮಾದ ಸಮಯದಲ್ಲಿ ಚರ್ಚೆಯಾಗಿತ್ತು. ನನ್ನ ಬಳಿ ಒಂದು ಕಥೆ ಇತ್ತು. ಅದನ್ನು ಬೆಳೆಸಿ ಈ ಚಿತ್ರ ಮಾಡಿದ್ದೇವೆ. ಮೊದಲು ಸಿನಿಮಾ ಮಾತನಾಡಬೇಕು. ಆ ನಂತರ ನಾವು ಮಾತನಾಡಿದರೆ ಚೆಂದ. ನಮ್ಮಲ್ಲಿ ಸಾಕಷ್ಟು ಜನ ನಿರ್ಮಾಪಕರಿದ್ದಾರೆ. ಅವರೆಲ್ಲರ ಸಹಾಯದಿಂದ ಇಂದು ‘ರಿಪ್ಪನ್ ಸ್ವಾಮಿ’ ಆಗಿದೆ ಎಂದರು.
ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಕೈಜೋಡಿಸಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತ ಸಂಯೋಜಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…