ಮನರಂಜನೆ

ನೆತ್ತರು ಹರಿಸಿದ ‘ರಿಪ್ಪನ್‍ ಸ್ವಾಮಿ’: ವಿಭಿನ್ನ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ

ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್‍ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು ಕಥೆ ಹೇಳಿದ್ದಾರೆ. ಆ ಕಥೆ ‘ರಿಪ್ಪನ್‍ ಸ್ವಾಮಿ’ ಹೆಸರಿನಲ್ಲಿ ಚಿತ್ರವಾಗಿದ್ದು, ಆಗಸ್ಟ್.29ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

‘ರಿಪ್ಪನ್‍ ಸ್ವಾಮಿ’ ಕುರಿತು ಮಾತನಾಡುವ ವಿಜಯ್ ರಾಘವೇಂದ್ರ, ‘ಈ ಪಾತ್ರವನ್ನು ನಾನೇ ಮಾಡಬೇಕು ಎಂದು ಕಿಶೋರ್ ಸುಮಾರು ಎರಡು ವರ್ಷಗಳ ಕಾಲ ಕಾದಿದ್ದಾರೆ. ನನಗಾಗಿ ಕಾಯಬೇಡಿ, ಬೇರೆಯವರಿಂದ ಮಾಡಿಸಿ ಎಂದಿದ್ದೆ. ‘ಯಾರಿಗೋ ಮಾಡೋದಾಗಿದ್ರೆ ನಾನು ಯಾಕೆ ನಿಮಗಾಗಿ ಎರಡು ವರ್ಷ ಕಾಯಬೇಕಿತ್ತು, ಈ ಕಥೆಗೆ ನೀವೇ ಬೇಕು ಎಂದು ನನ್ನಿಂದ ಈ ಪಾತ್ರ ಮಾಡಿಸಿದ್ದಾರೆ. ‘ಮಾಲ್ಗುಡಿ ಡೇಸ್‍’ ಚಿತ್ರೀಕರಣ ಸಂದರ್ಭದಲ್ಲಿ ಒಳ್ಳೆಯವನಾಗಿ ಆಗಿ ಸಾಕಾಗಿದೆ. ಸ್ವಲ್ಪ ಬೇರೆ ತರಹದ ಪಾತ್ರ ಮಾಡ್ಬೇಕು ಅಂತ ಅವರಿಗೆ ಹೇಳಿದ್ದೆ. ಯಾವುದೇ ಪಾತ್ರ ಮಾಡಿದ್ರು ಚೆನ್ನಾಗಿ ಮಾಡಿದ್ದೀಯಾ ಅಂತ ಅನ್ನಿಸಿಕೊಳ್ಳಬೇಕು ಎಂಬುದೇ ನನ್ನ ಆಸೆ. ಇದರಲ್ಲೂ ಅದು ಸಾಧ್ಯವಾಗಿದೆ’ ಎಂದರು.

ನಿರ್ದೇಶಕ ಕಿಶೋರ್ ಮೂಡಬಿದ್ರೆ ಮಾತನಾಡಿ, ‘ಮಾಲ್ಗುಡಿ ಡೇಸ್’ ಸಿನಿಮಾದ ಸಮಯದಲ್ಲಿ ಚರ್ಚೆಯಾಗಿತ್ತು. ನನ್ನ ಬಳಿ ಒಂದು ಕಥೆ ಇತ್ತು. ಅದನ್ನು ಬೆಳೆಸಿ ಈ ಚಿತ್ರ ಮಾಡಿದ್ದೇವೆ. ಮೊದಲು ಸಿನಿಮಾ ಮಾತನಾಡಬೇಕು. ಆ ನಂತರ ನಾವು ಮಾತನಾಡಿದರೆ ಚೆಂದ. ನಮ್ಮಲ್ಲಿ ಸಾಕಷ್ಟು ಜನ ನಿರ್ಮಾಪಕರಿದ್ದಾರೆ. ಅವರೆಲ್ಲರ ಸಹಾಯದಿಂದ ಇಂದು ‘ರಿಪ್ಪನ್ ಸ್ವಾಮಿ’ ಆಗಿದೆ ಎಂದರು.

ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಕೈಜೋಡಿಸಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

12 mins ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

28 mins ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

37 mins ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

1 hour ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

2 hours ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

2 hours ago