raghavendra rippan swami
ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು ಕಥೆ ಹೇಳಿದ್ದಾರೆ. ಆ ಕಥೆ ‘ರಿಪ್ಪನ್ ಸ್ವಾಮಿ’ ಹೆಸರಿನಲ್ಲಿ ಚಿತ್ರವಾಗಿದ್ದು, ಆಗಸ್ಟ್.29ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
‘ರಿಪ್ಪನ್ ಸ್ವಾಮಿ’ ಕುರಿತು ಮಾತನಾಡುವ ವಿಜಯ್ ರಾಘವೇಂದ್ರ, ‘ಈ ಪಾತ್ರವನ್ನು ನಾನೇ ಮಾಡಬೇಕು ಎಂದು ಕಿಶೋರ್ ಸುಮಾರು ಎರಡು ವರ್ಷಗಳ ಕಾಲ ಕಾದಿದ್ದಾರೆ. ನನಗಾಗಿ ಕಾಯಬೇಡಿ, ಬೇರೆಯವರಿಂದ ಮಾಡಿಸಿ ಎಂದಿದ್ದೆ. ‘ಯಾರಿಗೋ ಮಾಡೋದಾಗಿದ್ರೆ ನಾನು ಯಾಕೆ ನಿಮಗಾಗಿ ಎರಡು ವರ್ಷ ಕಾಯಬೇಕಿತ್ತು, ಈ ಕಥೆಗೆ ನೀವೇ ಬೇಕು ಎಂದು ನನ್ನಿಂದ ಈ ಪಾತ್ರ ಮಾಡಿಸಿದ್ದಾರೆ. ‘ಮಾಲ್ಗುಡಿ ಡೇಸ್’ ಚಿತ್ರೀಕರಣ ಸಂದರ್ಭದಲ್ಲಿ ಒಳ್ಳೆಯವನಾಗಿ ಆಗಿ ಸಾಕಾಗಿದೆ. ಸ್ವಲ್ಪ ಬೇರೆ ತರಹದ ಪಾತ್ರ ಮಾಡ್ಬೇಕು ಅಂತ ಅವರಿಗೆ ಹೇಳಿದ್ದೆ. ಯಾವುದೇ ಪಾತ್ರ ಮಾಡಿದ್ರು ಚೆನ್ನಾಗಿ ಮಾಡಿದ್ದೀಯಾ ಅಂತ ಅನ್ನಿಸಿಕೊಳ್ಳಬೇಕು ಎಂಬುದೇ ನನ್ನ ಆಸೆ. ಇದರಲ್ಲೂ ಅದು ಸಾಧ್ಯವಾಗಿದೆ’ ಎಂದರು.
ನಿರ್ದೇಶಕ ಕಿಶೋರ್ ಮೂಡಬಿದ್ರೆ ಮಾತನಾಡಿ, ‘ಮಾಲ್ಗುಡಿ ಡೇಸ್’ ಸಿನಿಮಾದ ಸಮಯದಲ್ಲಿ ಚರ್ಚೆಯಾಗಿತ್ತು. ನನ್ನ ಬಳಿ ಒಂದು ಕಥೆ ಇತ್ತು. ಅದನ್ನು ಬೆಳೆಸಿ ಈ ಚಿತ್ರ ಮಾಡಿದ್ದೇವೆ. ಮೊದಲು ಸಿನಿಮಾ ಮಾತನಾಡಬೇಕು. ಆ ನಂತರ ನಾವು ಮಾತನಾಡಿದರೆ ಚೆಂದ. ನಮ್ಮಲ್ಲಿ ಸಾಕಷ್ಟು ಜನ ನಿರ್ಮಾಪಕರಿದ್ದಾರೆ. ಅವರೆಲ್ಲರ ಸಹಾಯದಿಂದ ಇಂದು ‘ರಿಪ್ಪನ್ ಸ್ವಾಮಿ’ ಆಗಿದೆ ಎಂದರು.
ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಕೈಜೋಡಿಸಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತ ಸಂಯೋಜಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…