ಮನರಂಜನೆ

ಹೀರೋ ಆಗಿದ್ದು ಜೀವನದಲ್ಲಿ ಸಿಕ್ಕ ಬೋನಸ್ ಎಂದ ನಾಗಭೂಷಣ್‍

ನಾಗಭೂಷಣ್‍ ಅಭಿನಯದ ‘ಟಗರು ಪಲ್ಯ’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾಗಿವೆ. ಚಿತ್ರ ಯಶಸ್ವಿಯಾದರೂ ನಾಗಭೂಷಣ್‍, ‘ವಿದ್ಯಾಪತಿ’ ಎಂಬ ಚಿತ್ರದಲ್ಲಿ ನಟಿಸಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರದಲ್ಲೂ ನಟಿಸಿಲ್ಲ. ಇಷ್ಟಕ್ಕೂ ನಾಗಭೂಷಣ್‍ ಯಾಕೆ ಸಿನಿಮಾಗಳಲ್ಲಿ ನಟಿಸುತ್ತಿಲ್ಲ? ಈ ಪ್ರಶ್ನೆ ಮುಂದಿಟ್ಟರೆ, ನನ್ನ ಜೊತೆಗೆ ಸಿನಿಮಾ ಮಾಡಲು ಯಾರು ಬರ್ತಾರೆ? ಎಂದು ಪ್ರಶ್ನಿಸುತ್ತಾರೆ.

‘ವಿದ್ಯಾಪತಿ’ ಚಿತ್ರವು ಏಪ್ರಿಲ್‍.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ. ಧ್ರುವ ಸರ್ಜಾ ಟ್ರೇಲರ್‍ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಾಗಭೂಷಣ್‍, ‘ನಾನು ಚಿತ್ರರಂಗಕ್ಕೆ ಹೀರೋ ಆಗಬೇಕು ಎಂದು ಬಂದವನು ಅಲ್ಲ. ಒಳ್ಳೆಯ ಸಿನಿಮಾಗಳಲ್ಲಿ ಸಣ್ಣ ಸಣ್ಣ ಪಾತ್ರಗಳನ್ನು ಮಾಡಿಕೊಂಡು ಹೋಗಬೇಕು ಎಂದುಕೊಂಡಿದ್ದೆ. ಇದು ನನಗೆ ಜೀವನದಲ್ಲಿ ಸಿಕ್ಕ ಬೋನಸ್. ನನ್ನ ನಂಬಿ ನಿರ್ದೇಶಕರು ‘ವಿದ್ಯಾಪತಿ’ ಚಿತ್ರ ಕೊಟ್ಟರು. ನೀವು ಡಾಲಿ ಪಿಕ್ಚರ್ಸ್ ಬಿಟ್ಟು ಬೇರೆ ಕಡೆ ಯಾಕೆ ಸಿನಿಮಾ ಮಾಡಲ್ಲ ಎಂದು ಕೆಲವರು ಕೇಳುತ್ತಾರೆ. ಆದರೆ, ನನಗೆ ಸಿನಿಮಾ ಮಾಡಲು ಯಾರು ಮುಂದೆ ಬರುತ್ತಾರೆ? ಅದನ್ನು ನನ್ನ ಗೆಳೆಯ ಧನಂಜಯ್ ಮಾಡಿದ್ದಾನೆ’ ಎಂದು ಭಾವುಕರಾದರು.

ಧ್ರುವ ಸರ್ಜಾ ಮಾತನಾಡಿ, ‘ಚಿತ್ರರಂಗದಲ್ಲಿ ದುಡಿದ ದುಡ್ಡನ್ನು ಚಿತ್ರರಂಗಕ್ಕೆ ಹಾಕುತ್ತಿದ್ದಾರೆ. ನಮ್ಮ ಪೀಳಿಗೆಯ ರವಿಚಂದ್ರನ್‍ ಅವರು ಹೊಸಬರನ್ನು ಮುಂದಿಟ್ಟುಕೊಂಡು ಚಿತ್ರ ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಸು ಮತ್ತು ವ್ಯಕ್ತಿತ್ವ ಇರುವ ವ್ಯಕ್ತಿ. ಅವರಿಗೆ ಒಳ್ಳೆಯದಾಗಬೇಕು’ ಎಂದರು.

’ವಿದ್ಯಾಪತಿ’ ಫ್ಯಾಮಿಲಿ ನೋಡುವ ಸಿನಿಮಾ ಎನ್ನುವ ಧನಂಜಯ್‍, ‘ಕುಟುಂಬ ಸಮೇತರಾಗಿ ಮಕ್ಕಳ ಜೊತೆ ಬಂದು ಎಲ್ಲರೂ ಚಿತ್ರ ನೋಡಬಹುದು. ಪ್ರೇಕ್ಷಕರು ಕೈ ಹಿಡಿಯುವುದು ಮುಖ್ಯ. ಅವರ ಪ್ರೀತಿ ಯಾವಾಗಲೂ ಇರಲಿ. ಧ್ರುವ ಮೊದಲ ಸಿನಿಮಾದಿಂದಲೇ ಸೂಪರ್ ಸ್ಟಾರ್. ‘ಪೊಗರು’ ಚಿತ್ರದಲ್ಲಿ ಜೊತೆಯಲ್ಲಿ ಕೆಲಸ ಮಾಡಿದ್ದೆ. ಅವರು ಬಂದು ಟ್ರೇಲರ್‍ ಬಿಡುಗಡೆ ಮಾಡಿದ್ದು ಖುಷಿಯಾಗಿದೆ’ ಎಂದರು.

‘ವಿದ್ಯಾಪತಿ’ ಚಿತ್ರವನ್ನು ಇಶಾಂ ಹಾಗೂ ಹಸೀಂ ಖಾನ್ ನಿರ್ದೇಶನ ಮಾಡಿದ್ದಾರೆ. ಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನೂ ಅವರೇ ಹೊತ್ತಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಡಾಸ್ಮೋಡ್ ಅವರ ಸಂಗೀತ ಈ ಚಿತ್ರಕ್ಕಿದೆ. ಚಿತ್ರದಲ್ಲಿ ನಾಗಭೂಷಣ್‍, ಮಲೈಕಾ ವಸುಪಾಲ್‍, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago