ಮನರಂಜನೆ

ಹೀರೋ ಆಗಿದ್ದು ಜೀವನದಲ್ಲಿ ಸಿಕ್ಕ ಬೋನಸ್ ಎಂದ ನಾಗಭೂಷಣ್‍

ನಾಗಭೂಷಣ್‍ ಅಭಿನಯದ ‘ಟಗರು ಪಲ್ಯ’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾಗಿವೆ. ಚಿತ್ರ ಯಶಸ್ವಿಯಾದರೂ ನಾಗಭೂಷಣ್‍, ‘ವಿದ್ಯಾಪತಿ’ ಎಂಬ ಚಿತ್ರದಲ್ಲಿ ನಟಿಸಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರದಲ್ಲೂ ನಟಿಸಿಲ್ಲ. ಇಷ್ಟಕ್ಕೂ ನಾಗಭೂಷಣ್‍ ಯಾಕೆ ಸಿನಿಮಾಗಳಲ್ಲಿ ನಟಿಸುತ್ತಿಲ್ಲ? ಈ ಪ್ರಶ್ನೆ ಮುಂದಿಟ್ಟರೆ, ನನ್ನ ಜೊತೆಗೆ ಸಿನಿಮಾ ಮಾಡಲು ಯಾರು ಬರ್ತಾರೆ? ಎಂದು ಪ್ರಶ್ನಿಸುತ್ತಾರೆ.

‘ವಿದ್ಯಾಪತಿ’ ಚಿತ್ರವು ಏಪ್ರಿಲ್‍.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ. ಧ್ರುವ ಸರ್ಜಾ ಟ್ರೇಲರ್‍ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಾಗಭೂಷಣ್‍, ‘ನಾನು ಚಿತ್ರರಂಗಕ್ಕೆ ಹೀರೋ ಆಗಬೇಕು ಎಂದು ಬಂದವನು ಅಲ್ಲ. ಒಳ್ಳೆಯ ಸಿನಿಮಾಗಳಲ್ಲಿ ಸಣ್ಣ ಸಣ್ಣ ಪಾತ್ರಗಳನ್ನು ಮಾಡಿಕೊಂಡು ಹೋಗಬೇಕು ಎಂದುಕೊಂಡಿದ್ದೆ. ಇದು ನನಗೆ ಜೀವನದಲ್ಲಿ ಸಿಕ್ಕ ಬೋನಸ್. ನನ್ನ ನಂಬಿ ನಿರ್ದೇಶಕರು ‘ವಿದ್ಯಾಪತಿ’ ಚಿತ್ರ ಕೊಟ್ಟರು. ನೀವು ಡಾಲಿ ಪಿಕ್ಚರ್ಸ್ ಬಿಟ್ಟು ಬೇರೆ ಕಡೆ ಯಾಕೆ ಸಿನಿಮಾ ಮಾಡಲ್ಲ ಎಂದು ಕೆಲವರು ಕೇಳುತ್ತಾರೆ. ಆದರೆ, ನನಗೆ ಸಿನಿಮಾ ಮಾಡಲು ಯಾರು ಮುಂದೆ ಬರುತ್ತಾರೆ? ಅದನ್ನು ನನ್ನ ಗೆಳೆಯ ಧನಂಜಯ್ ಮಾಡಿದ್ದಾನೆ’ ಎಂದು ಭಾವುಕರಾದರು.

ಧ್ರುವ ಸರ್ಜಾ ಮಾತನಾಡಿ, ‘ಚಿತ್ರರಂಗದಲ್ಲಿ ದುಡಿದ ದುಡ್ಡನ್ನು ಚಿತ್ರರಂಗಕ್ಕೆ ಹಾಕುತ್ತಿದ್ದಾರೆ. ನಮ್ಮ ಪೀಳಿಗೆಯ ರವಿಚಂದ್ರನ್‍ ಅವರು ಹೊಸಬರನ್ನು ಮುಂದಿಟ್ಟುಕೊಂಡು ಚಿತ್ರ ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಸು ಮತ್ತು ವ್ಯಕ್ತಿತ್ವ ಇರುವ ವ್ಯಕ್ತಿ. ಅವರಿಗೆ ಒಳ್ಳೆಯದಾಗಬೇಕು’ ಎಂದರು.

’ವಿದ್ಯಾಪತಿ’ ಫ್ಯಾಮಿಲಿ ನೋಡುವ ಸಿನಿಮಾ ಎನ್ನುವ ಧನಂಜಯ್‍, ‘ಕುಟುಂಬ ಸಮೇತರಾಗಿ ಮಕ್ಕಳ ಜೊತೆ ಬಂದು ಎಲ್ಲರೂ ಚಿತ್ರ ನೋಡಬಹುದು. ಪ್ರೇಕ್ಷಕರು ಕೈ ಹಿಡಿಯುವುದು ಮುಖ್ಯ. ಅವರ ಪ್ರೀತಿ ಯಾವಾಗಲೂ ಇರಲಿ. ಧ್ರುವ ಮೊದಲ ಸಿನಿಮಾದಿಂದಲೇ ಸೂಪರ್ ಸ್ಟಾರ್. ‘ಪೊಗರು’ ಚಿತ್ರದಲ್ಲಿ ಜೊತೆಯಲ್ಲಿ ಕೆಲಸ ಮಾಡಿದ್ದೆ. ಅವರು ಬಂದು ಟ್ರೇಲರ್‍ ಬಿಡುಗಡೆ ಮಾಡಿದ್ದು ಖುಷಿಯಾಗಿದೆ’ ಎಂದರು.

‘ವಿದ್ಯಾಪತಿ’ ಚಿತ್ರವನ್ನು ಇಶಾಂ ಹಾಗೂ ಹಸೀಂ ಖಾನ್ ನಿರ್ದೇಶನ ಮಾಡಿದ್ದಾರೆ. ಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನೂ ಅವರೇ ಹೊತ್ತಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಡಾಸ್ಮೋಡ್ ಅವರ ಸಂಗೀತ ಈ ಚಿತ್ರಕ್ಕಿದೆ. ಚಿತ್ರದಲ್ಲಿ ನಾಗಭೂಷಣ್‍, ಮಲೈಕಾ ವಸುಪಾಲ್‍, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

56 mins ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

1 hour ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

2 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

2 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

3 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

3 hours ago