ಮನರಂಜನೆ

ಸೋನು ನಿಗಮ್ ಹಾಡಿದ ಹಾಡನ್ನು ಬೇರೆಯವರಿಂದ ಹಾಡಿಸಲು ನಿರ್ಧಾರ …

ಕನ್ನಡ ಮತ್ತು ಕನ್ನಡಿಗರ ವಿರುದ್ಧ ಬಾಲಿವುಡ್‍ ಗಾಯಕ ಸೋನು ನಿಗಮ್‍ ಆಡಿದ ಅವಹೇಳನಕಾರಿ ಮಾತನ್ನು ವಿರೋಧಿಸಿ, ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡವು ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ …’ ಎಂಬ ಸೋನು ನಿಗಮ್‍ ಹಾಡಿದ ಹಾಡನ್ನು ಬೇರೆಯವರಿಂದ ಹಾಡಿಸಲು ತೀರ್ಮಾನಿಸಿತ್ತು. ಈಗ ‘ನಿದ್ರಾದೇವಿ Next Door’ ಹಾಡನ್ನು ಬೇರೆಯವರಿಂದ ಹಾಡಿಸಲು ತೀರ್ಮಾನಿಸಿದೆ.

‘ನಿದ್ರಾದೇವಿ Next Door’ ಚಿತ್ರಕ್ಕಾಗಿ ಸೋನು ನಿಗಮ್‍ ಹಾಡಿದ್ದ ‘ನೀ ನನ್ನ’ ಎಂಬ ಹಾಡನ್ನು ಇತ್ತೀಚೆಗೆ ನಟ ಗಣೇಶ್‍ ಬಿಡುಗಡೆ ಮಾಡಿದರು. ಹಾಡು ಬಿಡುಗಡೆಯಾದ ಸ್ವಲ್ಪ ಸಮಯದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೇರೆಯವರಿಂದ ಹಾಡಿಸಲು ಚಿತ್ರತಂಡ ತೀರ್ಮಾನಿಸಿದೆ. ಯೂಟ್ಯೂಬ್‍ನಲ್ಲಿರುವ ಹಾಡು ಸದ್ಯ ಸೋನು ಧ್ವನಿಯಲ್ಲಿದ್ದು, ಆದಷ್ಟು ಬೇಗ ಬೇರೆಯವರಿಂದ ಹಾಡಿಸಲು ಚಿತ್ರತಂಡ ಮುಂದಾಗಿದೆ.

ಈ ಕುರಿತು ಮಾತನಾಡಿರುವ ನಿರ್ಮಾಪಕ ಜಯರಾಮ ದೇವಸಮುದ್ರ, ’ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ನೀ ನನ್ನ …’ ಹಾಡನ್ನು ರಾಘವೇಂದ್ರ ಕಾಮತ್ ಅವರು ಬರೆದಿದ್ದಾರೆ. ಸೋನು ನಿಗಂ ಹಾಡಿದ್ದಾರೆ. ಆರು ತಿಂಗಳ ಹಿಂದೆಯೇ ಈ ಹಾಡು ಸಿದ್ದವಾಗಿತ್ತು. ಆನಂತರ ಸೋನು ನಿಗಂ ಅವರ ವಿವಾದ ನಡೆದಿದ್ದು. ನಮಗೆ ಎಲ್ಲದಕ್ಕಿಂತ ಭಾಷೆ ಮುಖ್ಯ. ಆ ನಿಟ್ಟಿನಲ್ಲಿ ಸೋನು ನಿಗಂ ಅವರ ಧ್ವನಿಯಲ್ಲಿ ಬಂದಿರುವ ಈ ಹಾಡನ್ನು ಚಿತ್ರದಲ್ಲಿ ಬಳಸಿಕೊಳ್ಳುವುದಿಲ್ಲ. ಬೇರೆ ಗಾಯಕರಿಂದ ಈ ಹಾಡನ್ನು ಹಾಡಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಹಾಡು ಬಿಡುಗಡೆ ಮಾಡಿದ ಗಣೇಶ್‍, ‘ಭಾಷೆಯಿಂದ ನಾವೇ ಹೊರತು.‌ ನಮ್ಮಿಂದ ಭಾಷೆ ಅಲ್ಲ. ಹಾಗಾಗಿ, ಬಹಳ‌ ಸೊಗಸಾಗಿ ಮೂಡಿ ಬಂದಿರುವ ಈ ಹಾಡನ್ನು ನಿರ್ಮಾಪಕರು, ಕನ್ನಡ ಗಾಯಕರಿಂದಲೇ ಪುನಃ ಹಾಡಿಸುತ್ತಾರೆ ಎಂಬ ಭರವಸೆ ನನಗಿದೆ’ ಎಂದು ಗಣೇಶ್‍ ಸಹ ಹೇಳಿದರು.

‘ನಿದ್ರಾದೇವಿ next door’ ಸಿನಿಮಾದಲ್ಲಿ ಪ್ರವೀಣ್ ಶೆಟ್ಟಿಗೆ ಜೋಡಿಯಾಗಿ ರಿಷಿಕಾ ನಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವನ್ನು ಸುರಾಗ್‍ ಸಾಗರ್‍ ನಿರ್ದೇಶನ ಮಾಡಿದ್ದು, ಸುರಮ್‍ ಮೂವೀಸ್‍ ಪ್ರೊಡಕ್ಷನ್ ಬ್ಯಾನರ್‍ ಅಡಿಯಲ್ಲಿ ಜಯರಾಮ್‍ ದೇವಸಮುದ್ರ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago