ಮನರಂಜನೆ

ಸೋನು ನಿಗಮ್ ಹಾಡಿದ ಹಾಡನ್ನು ಬೇರೆಯವರಿಂದ ಹಾಡಿಸಲು ನಿರ್ಧಾರ …

ಕನ್ನಡ ಮತ್ತು ಕನ್ನಡಿಗರ ವಿರುದ್ಧ ಬಾಲಿವುಡ್‍ ಗಾಯಕ ಸೋನು ನಿಗಮ್‍ ಆಡಿದ ಅವಹೇಳನಕಾರಿ ಮಾತನ್ನು ವಿರೋಧಿಸಿ, ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡವು ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ …’ ಎಂಬ ಸೋನು ನಿಗಮ್‍ ಹಾಡಿದ ಹಾಡನ್ನು ಬೇರೆಯವರಿಂದ ಹಾಡಿಸಲು ತೀರ್ಮಾನಿಸಿತ್ತು. ಈಗ ‘ನಿದ್ರಾದೇವಿ Next Door’ ಹಾಡನ್ನು ಬೇರೆಯವರಿಂದ ಹಾಡಿಸಲು ತೀರ್ಮಾನಿಸಿದೆ.

‘ನಿದ್ರಾದೇವಿ Next Door’ ಚಿತ್ರಕ್ಕಾಗಿ ಸೋನು ನಿಗಮ್‍ ಹಾಡಿದ್ದ ‘ನೀ ನನ್ನ’ ಎಂಬ ಹಾಡನ್ನು ಇತ್ತೀಚೆಗೆ ನಟ ಗಣೇಶ್‍ ಬಿಡುಗಡೆ ಮಾಡಿದರು. ಹಾಡು ಬಿಡುಗಡೆಯಾದ ಸ್ವಲ್ಪ ಸಮಯದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೇರೆಯವರಿಂದ ಹಾಡಿಸಲು ಚಿತ್ರತಂಡ ತೀರ್ಮಾನಿಸಿದೆ. ಯೂಟ್ಯೂಬ್‍ನಲ್ಲಿರುವ ಹಾಡು ಸದ್ಯ ಸೋನು ಧ್ವನಿಯಲ್ಲಿದ್ದು, ಆದಷ್ಟು ಬೇಗ ಬೇರೆಯವರಿಂದ ಹಾಡಿಸಲು ಚಿತ್ರತಂಡ ಮುಂದಾಗಿದೆ.

ಈ ಕುರಿತು ಮಾತನಾಡಿರುವ ನಿರ್ಮಾಪಕ ಜಯರಾಮ ದೇವಸಮುದ್ರ, ’ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ನೀ ನನ್ನ …’ ಹಾಡನ್ನು ರಾಘವೇಂದ್ರ ಕಾಮತ್ ಅವರು ಬರೆದಿದ್ದಾರೆ. ಸೋನು ನಿಗಂ ಹಾಡಿದ್ದಾರೆ. ಆರು ತಿಂಗಳ ಹಿಂದೆಯೇ ಈ ಹಾಡು ಸಿದ್ದವಾಗಿತ್ತು. ಆನಂತರ ಸೋನು ನಿಗಂ ಅವರ ವಿವಾದ ನಡೆದಿದ್ದು. ನಮಗೆ ಎಲ್ಲದಕ್ಕಿಂತ ಭಾಷೆ ಮುಖ್ಯ. ಆ ನಿಟ್ಟಿನಲ್ಲಿ ಸೋನು ನಿಗಂ ಅವರ ಧ್ವನಿಯಲ್ಲಿ ಬಂದಿರುವ ಈ ಹಾಡನ್ನು ಚಿತ್ರದಲ್ಲಿ ಬಳಸಿಕೊಳ್ಳುವುದಿಲ್ಲ. ಬೇರೆ ಗಾಯಕರಿಂದ ಈ ಹಾಡನ್ನು ಹಾಡಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಹಾಡು ಬಿಡುಗಡೆ ಮಾಡಿದ ಗಣೇಶ್‍, ‘ಭಾಷೆಯಿಂದ ನಾವೇ ಹೊರತು.‌ ನಮ್ಮಿಂದ ಭಾಷೆ ಅಲ್ಲ. ಹಾಗಾಗಿ, ಬಹಳ‌ ಸೊಗಸಾಗಿ ಮೂಡಿ ಬಂದಿರುವ ಈ ಹಾಡನ್ನು ನಿರ್ಮಾಪಕರು, ಕನ್ನಡ ಗಾಯಕರಿಂದಲೇ ಪುನಃ ಹಾಡಿಸುತ್ತಾರೆ ಎಂಬ ಭರವಸೆ ನನಗಿದೆ’ ಎಂದು ಗಣೇಶ್‍ ಸಹ ಹೇಳಿದರು.

‘ನಿದ್ರಾದೇವಿ next door’ ಸಿನಿಮಾದಲ್ಲಿ ಪ್ರವೀಣ್ ಶೆಟ್ಟಿಗೆ ಜೋಡಿಯಾಗಿ ರಿಷಿಕಾ ನಟಿಸಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವನ್ನು ಸುರಾಗ್‍ ಸಾಗರ್‍ ನಿರ್ದೇಶನ ಮಾಡಿದ್ದು, ಸುರಮ್‍ ಮೂವೀಸ್‍ ಪ್ರೊಡಕ್ಷನ್ ಬ್ಯಾನರ್‍ ಅಡಿಯಲ್ಲಿ ಜಯರಾಮ್‍ ದೇವಸಮುದ್ರ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

52 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

58 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

18 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

20 hours ago