ಮನರಂಜನೆ

ದಿ ಡೆವಿಲ್‍ ಚಿತ್ರದ ಮೊದಲ ಹಾಡು ಆ.24ರಂದು ಬಿಡುಗಡೆ

ದರ್ಶನ್ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೇ ನೆಮ್ದಿಯಾಗ್‍ ಇರ್ಬೇಕ್‍…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಮೂಲಕ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಲಿವೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಹಾಡು ಆಗಸ್ಟ್ 15ರಂದು ಬಿಡುಗಡೆಯಾಗಬೇಕಿತ್ತು. ಆದರೆ, ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್‍ ಬಂಧನವಾದ ಹಿನ್ನೆಲೆಯಲ್ಲಿ ಹಾಡು ಬಿಡುಗಡೆಯನ್ನು ಮುಂದೂಡಲಾಯ್ತು. ಈಗ ಹಾಡು ಕೊನೆಗೂ ಆಗಸ್ಟ್.24ರಂದು ಬಿಡುಗಡೆಯಾಗುತ್ತಿದೆ.

ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ದರ್ಶನ್‍ ತಮ್ಮ ಭಾಗದ ಕೆಲಸವನ್ನು ಸಂಪೂರ್ಣವಾಗಿ ಮುಗಿಸಿಕೊಟ್ಟಿದ್ದು, ಬಿಡುಗಡೆಯಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಗಿದ್ದು, ಮೂಲಗಳ ಪ್ರಕಾರ, ಅ.23ರಂದು ಚಿತ್ರ ಬಿಡುಗಡೆಯಾಗಲಿದೆಯಂತೆ.

‘ದಿ ಡೆವಿಲ್’ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಮಿಕ್ಕಂತೆ ತುಳಸಿ,‌ ಅಚ್ಯುತ್ ‍ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು , ಶೋಭರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತ ಅಜನೀಶ್ ಲೋಕನಾಥ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

13 mins ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

23 mins ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

1 hour ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

1 hour ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

2 hours ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

2 hours ago