ಮನರಂಜನೆ

ದಿ ಡೆವಿಲ್‍ ಚಿತ್ರದ ಮೊದಲ ಹಾಡು ಆ.24ರಂದು ಬಿಡುಗಡೆ

ದರ್ಶನ್ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೇ ನೆಮ್ದಿಯಾಗ್‍ ಇರ್ಬೇಕ್‍…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಮೂಲಕ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಲಿವೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಹಾಡು ಆಗಸ್ಟ್ 15ರಂದು ಬಿಡುಗಡೆಯಾಗಬೇಕಿತ್ತು. ಆದರೆ, ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್‍ ಬಂಧನವಾದ ಹಿನ್ನೆಲೆಯಲ್ಲಿ ಹಾಡು ಬಿಡುಗಡೆಯನ್ನು ಮುಂದೂಡಲಾಯ್ತು. ಈಗ ಹಾಡು ಕೊನೆಗೂ ಆಗಸ್ಟ್.24ರಂದು ಬಿಡುಗಡೆಯಾಗುತ್ತಿದೆ.

ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ದರ್ಶನ್‍ ತಮ್ಮ ಭಾಗದ ಕೆಲಸವನ್ನು ಸಂಪೂರ್ಣವಾಗಿ ಮುಗಿಸಿಕೊಟ್ಟಿದ್ದು, ಬಿಡುಗಡೆಯಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಗಿದ್ದು, ಮೂಲಗಳ ಪ್ರಕಾರ, ಅ.23ರಂದು ಚಿತ್ರ ಬಿಡುಗಡೆಯಾಗಲಿದೆಯಂತೆ.

‘ದಿ ಡೆವಿಲ್’ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಮಿಕ್ಕಂತೆ ತುಳಸಿ,‌ ಅಚ್ಯುತ್ ‍ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು , ಶೋಭರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತ ಅಜನೀಶ್ ಲೋಕನಾಥ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

8 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

9 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

9 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

9 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

9 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

9 hours ago