ಮನರಂಜನೆ

ದಿ ಡೆವಿಲ್‍ ಚಿತ್ರದ ಮೊದಲ ಹಾಡು ಆ.24ರಂದು ಬಿಡುಗಡೆ

ದರ್ಶನ್ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೇ ನೆಮ್ದಿಯಾಗ್‍ ಇರ್ಬೇಕ್‍…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಮೂಲಕ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಲಿವೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಹಾಡು ಆಗಸ್ಟ್ 15ರಂದು ಬಿಡುಗಡೆಯಾಗಬೇಕಿತ್ತು. ಆದರೆ, ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್‍ ಬಂಧನವಾದ ಹಿನ್ನೆಲೆಯಲ್ಲಿ ಹಾಡು ಬಿಡುಗಡೆಯನ್ನು ಮುಂದೂಡಲಾಯ್ತು. ಈಗ ಹಾಡು ಕೊನೆಗೂ ಆಗಸ್ಟ್.24ರಂದು ಬಿಡುಗಡೆಯಾಗುತ್ತಿದೆ.

ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ದರ್ಶನ್‍ ತಮ್ಮ ಭಾಗದ ಕೆಲಸವನ್ನು ಸಂಪೂರ್ಣವಾಗಿ ಮುಗಿಸಿಕೊಟ್ಟಿದ್ದು, ಬಿಡುಗಡೆಯಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಗಿದ್ದು, ಮೂಲಗಳ ಪ್ರಕಾರ, ಅ.23ರಂದು ಚಿತ್ರ ಬಿಡುಗಡೆಯಾಗಲಿದೆಯಂತೆ.

‘ದಿ ಡೆವಿಲ್’ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಮಿಕ್ಕಂತೆ ತುಳಸಿ,‌ ಅಚ್ಯುತ್ ‍ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು , ಶೋಭರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತ ಅಜನೀಶ್ ಲೋಕನಾಥ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

8 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

9 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

9 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

9 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

9 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

9 hours ago