ಮನರಂಜನೆ

ದಿ ಡೆವಿಲ್‍ ಚಿತ್ರದ ಮೊದಲ ಹಾಡು ಆ.24ರಂದು ಬಿಡುಗಡೆ

ದರ್ಶನ್ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೇ ನೆಮ್ದಿಯಾಗ್‍ ಇರ್ಬೇಕ್‍…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಮೂಲಕ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಲಿವೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಹಾಡು ಆಗಸ್ಟ್ 15ರಂದು ಬಿಡುಗಡೆಯಾಗಬೇಕಿತ್ತು. ಆದರೆ, ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್‍ ಬಂಧನವಾದ ಹಿನ್ನೆಲೆಯಲ್ಲಿ ಹಾಡು ಬಿಡುಗಡೆಯನ್ನು ಮುಂದೂಡಲಾಯ್ತು. ಈಗ ಹಾಡು ಕೊನೆಗೂ ಆಗಸ್ಟ್.24ರಂದು ಬಿಡುಗಡೆಯಾಗುತ್ತಿದೆ.

ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ದರ್ಶನ್‍ ತಮ್ಮ ಭಾಗದ ಕೆಲಸವನ್ನು ಸಂಪೂರ್ಣವಾಗಿ ಮುಗಿಸಿಕೊಟ್ಟಿದ್ದು, ಬಿಡುಗಡೆಯಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಗಿದ್ದು, ಮೂಲಗಳ ಪ್ರಕಾರ, ಅ.23ರಂದು ಚಿತ್ರ ಬಿಡುಗಡೆಯಾಗಲಿದೆಯಂತೆ.

‘ದಿ ಡೆವಿಲ್’ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಮಿಕ್ಕಂತೆ ತುಳಸಿ,‌ ಅಚ್ಯುತ್ ‍ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು , ಶೋಭರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತ ಅಜನೀಶ್ ಲೋಕನಾಥ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

3 hours ago