ಮನರಂಜನೆ

ಪ್ರೇತಾತ್ಮಗಳ ದೈವ ಈ ‘ದೈಜಿ’: ಹುಟ್ಟುಹಬ್ಬದ ಸಂಭ್ರಮದಲ್ಲಿ ರಮೇಶ್‍ ಅರವಿಂದ್‍

ರಮೇಶ್‍ ಅರವಿಂದ್‍, ಬುಧವಾರವಷ್ಟೇ (ಸೆ. 10) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ದೈಜಿ’ ತಂಡ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ರಮೇಶ್‍ ಅರವಿಂದ್‍ಗೆ ಶುಭ ಕೋರಿದ್ದಾರೆ. ರಮೇಶ್‍ ಇಷ್ಟು ವರ್ಷಗಳ ಚಿತ್ರಜೀವನದಲ್ಲಿ ಹಾರರ್ ಚಿತ್ರಗಳಲ್ಲಿ ನಟಿಸಿದ್ದು ವಿರಳ. ಈಗ ಬಹಳ ದಿನಗಳ ನಂತರ ಅವರು ‘ದೈಜಿ’ ಎಂಬ ಹಾರರ್ ಚಿತ್ರದಲ್ಲಿ ನಟಿಸಿದ್ದಾರೆ.

‘ದೈಜಿ’ ಎಂದರೆ ಪ್ರೇತಾತ್ಮಗಳ ದೈವವಂತೆ. ‘ಶಿವಾಜಿ ಸುರತ್ಕಲ್‍’ ಚಿತ್ರಗಳನ್ನು ನಿರ್ದೇಶಿಸಿದ್ದ ಆಕಾಶ್‍ ಶ್ರೀವತ್ಸ ಈ ಚಿತ್ರ ನಿರ್ದೇಶಿಸಿದರೆ, ರವಿ ಕಶ್ಯಪ್‍ ನಿರ್ಮಿಸುತ್ತಿದ್ದಾರೆ. ತಮ್ಮ ಜೀವನದಲ್ಲಿ ನಡೆದ ಕೆಲವು ನೈಜ ಘಟನೆಗಳನ್ನು ಆಧರಿಸಿ ಅವರು ಈ ಚಿತ್ರದ ಕಥೆ ಸಹ ರಚಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್‍, ‘ನಾನು ಈ ಚಿತ್ರದಲ್ಲಿ ಸು ಫ್ರಮ್‍ ಸೋ, ರಾಧಿಕಾ ಭೂ ಫ್ರಮ್‍ ಸೋ, ದಿಗಂತ್‍ ಗ ಫ್ರಮ್‍ ಸ ಸೌ ಆಗಿ ನಟಿಸಿದ್ದೇವೆ. ಅಂದರೆ ಸೂರ್ಯ ಫ್ರಮ್‍ ಸೌಥಾಂಪ್ಟನ್‍ ಇಂಗ್ಲೆಂಡ್‍, ಭೂಮಿಕಾ ಫ್ರಮ್‍ ಸೌಥಾಂಪ್ಟನ್‍ ಇಂಗ್ಲೆಂಡ್‍ ಮತ್ತು ಗಗನ್ ಫ್ರಮ್‍ ಸೌತ್‍ ಕೆನರಾ. ನಾವು ಮೂವರು ಈ ಚಿತ್ರದಲ್ಲಿ ಅನಿವಾಸಿ ಭಾರತೀಯರಾಗಿ ಕಾಣಿಸಿಕೊಂಡಿದ್ದೇವೆ. ಇದು ಅವರ ನಡುವೆ ನಡೆಯುವ ಒಂದು ಹಾರರ್ ಕಥೆ. ‘ಪ್ರೇಮದ ಕಾಣಿಕೆ’ ಚಿತ್ರದ ಒಂದು ಹಾಡಿನಲ್ಲಿ ‘ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು …’ ಎಂಬ ಸಾಲು ಬರುತ್ತದೆ. ಹುಟ್ಟು, ಸಾವು ಕೊನೆಯಾದರೆ, ಮಧ್ಯದಲ್ಲಿರುವುದು ಏನು? ಮಧ್ಯದಲ್ಲಿರುವುದು ಒಂದೇ ವಿಷಯ, ಅದು ಪ್ರೀತಿ. ಆ ಪ್ರೀತಿ ಬೇರೆಬೇರೆ ರೀತಿಯದ್ದಾಗಿರುತ್ತದೆ.

ಇದನ್ನು ಓದಿ: ಲಾಭದಾಯಕ ಉದ್ಯಮವಾಗುತ್ತಿರುವ ಖಾಸಗಿ ಚಲನಚಿತ್ರ ಪ್ರಶಸ್ತಿ ಪರಂಪರೆಯ ನಡುವೆ 

ಒಂದು ವೇಳೆ ಸಾವು ಎನ್ನುವುದು ಕೊನೆಯಲ್ಲದಿದ್ದರೆ, ಅದರ ಆಚೆ ಇನ್ನೇನಾದರೂ ಇದ್ದರೆ? ಅಲ್ಲಿಗೆ ಹೋದವರು ವರದಿ ತಂದವರಿಲ್ಲ ಎಂದು ಡಿವಿಜಿಯವರು ಹೇಳಿದಂತೆ, ಅಲ್ಲೇನಿದೆ ಎಂದು ಯಾರಿಗೂ ಗೊತ್ತಿಲ್ಲ. ಸಾವಿನ ಆಚೆ ದುಷ್ಟಶಕ್ತಿ ಇದ್ದು, ಪ್ರೀತಿ ಕಿತ್ತುಕೊಳ್ಳುವುದಕ್ಕೆ ಪ್ರಯತ್ನಿಸಿದರೆ ಏನಾಗುತ್ತದೆ ಎಂಬುದು ಎಲ್ಲಾ ಹಾರರ್ ಸಿನಿಮಾಗಳ ಅಡಿಪಾಯ. ನಾನು ಇದುವರೆಗೂ ನೋಡಿರದ ಹಾರರ್ ಸಿನಿಮಾಗಳ ಪೈಕಿ ಯಾವೊಂದೂ ಚಿತ್ರದಲ್ಲಿ ಬರದ ವಿಷಯವನ್ನು ಈ ಚಿತ್ರದಲ್ಲಿ ಆಕಾಶ್ ಶ್ರೀವತ್ಸ ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಕಥಾವಸ್ತು ಬಹಳ ಇಷ್ಟವಾಗಿ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿದೆ’ ಎಂದರು ರಮೇಶ್ ‍ಅರವಿಂದ್‍.

ನಾವು ಭಯಪಡುವಂತದ್ದೇನೂ ಇಲ್ಲ ಎನ್ನುವ ರಮೇಶ್‍, ‘ನಾವು ಅರ್ಥ ಮಾಡಿಕೊಳ್ಳಬೇಕಾದ ಹಲವು ವಿಷಯಗಳಿವೆ. ಅರ್ಥವಾಗುವವರೆಗೂ ಅದರ ಬಗ್ಗೆ ಭಯವಿದ್ದೇ ಇರುತ್ತದೆ. ಅದು ಎಲ್ಲಾ ವಿಷಯಗಳಿಗೂ ಅನ್ವಯವಾಗುತ್ತದೆ. ಸಿನಿಮಾ, ವ್ಯಾಪಾರ ಎಲ್ಲದರ ಬಗ್ಗೆ ಭಯ ಸಹಜ. ದೆವ್ವ, ಭೂತದ ಬಗ್ಗೆ ಭಯವಾದರೆ, ಅದು ನಮಗೆ ಅರ್ಥವಾಗಿಲ್ಲ ಅಷ್ಟೇ. ಅರ್ಥವಾಗದ ಎಲ್ಲಾ ವಿಷಯಗಳಿಗೂ ಉತ್ತರ ದೇವರು ಎಂದು ಡಿವಿಜಿ ಹೇಳುತ್ತಾರೆ. ಅದು ಸತ್ಯ’ ಎಂದರು.

ರಮೇಶ್‍ ಜೊತೆಗೆ ರಾಧಿಕಾ ನಾರಾಯಣ್‍, ದಿಗಂತ್‍, ಅವಿನಾಶ್‍, ‘ಸಿದ್ಲಿಂಗು’ ಶ್ರೀಧರ್, ಗಿರಿರಾಜ್‍ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಚಿತ್ರದ ಶೇ. 60ರಷ್ಟು ಚಿತ್ರೀಕರಣ ಮುಗಿದಿದೆ. ಈ ಚಿತ್ರದ ಟೀಸರ್ ಬಿಡುಗಡೆ ಮಾಡುವುದರ ಜೊತೆಗೆ ರಮೇಶ್‍ ಅರವಿಂದ್‍ ಅವರ ಹುಟ್ಟುಹಬ್ಬವನ್ನು ಚಿತ್ರತಂಡ ಆಚರಿಸಿತು.

ಆಂದೋಲನ ಡೆಸ್ಕ್

Recent Posts

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

13 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

4 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

4 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

4 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

4 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

4 hours ago