ರಮೇಶ್ ಅರವಿಂದ್, ಬುಧವಾರವಷ್ಟೇ (ಸೆ. 10) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ದೈಜಿ’ ತಂಡ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ರಮೇಶ್ ಅರವಿಂದ್ಗೆ ಶುಭ ಕೋರಿದ್ದಾರೆ. ರಮೇಶ್ ಇಷ್ಟು ವರ್ಷಗಳ ಚಿತ್ರಜೀವನದಲ್ಲಿ ಹಾರರ್ ಚಿತ್ರಗಳಲ್ಲಿ ನಟಿಸಿದ್ದು ವಿರಳ. ಈಗ ಬಹಳ ದಿನಗಳ ನಂತರ ಅವರು ‘ದೈಜಿ’ ಎಂಬ ಹಾರರ್ ಚಿತ್ರದಲ್ಲಿ ನಟಿಸಿದ್ದಾರೆ.
‘ದೈಜಿ’ ಎಂದರೆ ಪ್ರೇತಾತ್ಮಗಳ ದೈವವಂತೆ. ‘ಶಿವಾಜಿ ಸುರತ್ಕಲ್’ ಚಿತ್ರಗಳನ್ನು ನಿರ್ದೇಶಿಸಿದ್ದ ಆಕಾಶ್ ಶ್ರೀವತ್ಸ ಈ ಚಿತ್ರ ನಿರ್ದೇಶಿಸಿದರೆ, ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ತಮ್ಮ ಜೀವನದಲ್ಲಿ ನಡೆದ ಕೆಲವು ನೈಜ ಘಟನೆಗಳನ್ನು ಆಧರಿಸಿ ಅವರು ಈ ಚಿತ್ರದ ಕಥೆ ಸಹ ರಚಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್, ‘ನಾನು ಈ ಚಿತ್ರದಲ್ಲಿ ಸು ಫ್ರಮ್ ಸೋ, ರಾಧಿಕಾ ಭೂ ಫ್ರಮ್ ಸೋ, ದಿಗಂತ್ ಗ ಫ್ರಮ್ ಸ ಸೌ ಆಗಿ ನಟಿಸಿದ್ದೇವೆ. ಅಂದರೆ ಸೂರ್ಯ ಫ್ರಮ್ ಸೌಥಾಂಪ್ಟನ್ ಇಂಗ್ಲೆಂಡ್, ಭೂಮಿಕಾ ಫ್ರಮ್ ಸೌಥಾಂಪ್ಟನ್ ಇಂಗ್ಲೆಂಡ್ ಮತ್ತು ಗಗನ್ ಫ್ರಮ್ ಸೌತ್ ಕೆನರಾ. ನಾವು ಮೂವರು ಈ ಚಿತ್ರದಲ್ಲಿ ಅನಿವಾಸಿ ಭಾರತೀಯರಾಗಿ ಕಾಣಿಸಿಕೊಂಡಿದ್ದೇವೆ. ಇದು ಅವರ ನಡುವೆ ನಡೆಯುವ ಒಂದು ಹಾರರ್ ಕಥೆ. ‘ಪ್ರೇಮದ ಕಾಣಿಕೆ’ ಚಿತ್ರದ ಒಂದು ಹಾಡಿನಲ್ಲಿ ‘ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು …’ ಎಂಬ ಸಾಲು ಬರುತ್ತದೆ. ಹುಟ್ಟು, ಸಾವು ಕೊನೆಯಾದರೆ, ಮಧ್ಯದಲ್ಲಿರುವುದು ಏನು? ಮಧ್ಯದಲ್ಲಿರುವುದು ಒಂದೇ ವಿಷಯ, ಅದು ಪ್ರೀತಿ. ಆ ಪ್ರೀತಿ ಬೇರೆಬೇರೆ ರೀತಿಯದ್ದಾಗಿರುತ್ತದೆ.
ಇದನ್ನು ಓದಿ: ಲಾಭದಾಯಕ ಉದ್ಯಮವಾಗುತ್ತಿರುವ ಖಾಸಗಿ ಚಲನಚಿತ್ರ ಪ್ರಶಸ್ತಿ ಪರಂಪರೆಯ ನಡುವೆ
ಒಂದು ವೇಳೆ ಸಾವು ಎನ್ನುವುದು ಕೊನೆಯಲ್ಲದಿದ್ದರೆ, ಅದರ ಆಚೆ ಇನ್ನೇನಾದರೂ ಇದ್ದರೆ? ಅಲ್ಲಿಗೆ ಹೋದವರು ವರದಿ ತಂದವರಿಲ್ಲ ಎಂದು ಡಿವಿಜಿಯವರು ಹೇಳಿದಂತೆ, ಅಲ್ಲೇನಿದೆ ಎಂದು ಯಾರಿಗೂ ಗೊತ್ತಿಲ್ಲ. ಸಾವಿನ ಆಚೆ ದುಷ್ಟಶಕ್ತಿ ಇದ್ದು, ಪ್ರೀತಿ ಕಿತ್ತುಕೊಳ್ಳುವುದಕ್ಕೆ ಪ್ರಯತ್ನಿಸಿದರೆ ಏನಾಗುತ್ತದೆ ಎಂಬುದು ಎಲ್ಲಾ ಹಾರರ್ ಸಿನಿಮಾಗಳ ಅಡಿಪಾಯ. ನಾನು ಇದುವರೆಗೂ ನೋಡಿರದ ಹಾರರ್ ಸಿನಿಮಾಗಳ ಪೈಕಿ ಯಾವೊಂದೂ ಚಿತ್ರದಲ್ಲಿ ಬರದ ವಿಷಯವನ್ನು ಈ ಚಿತ್ರದಲ್ಲಿ ಆಕಾಶ್ ಶ್ರೀವತ್ಸ ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಕಥಾವಸ್ತು ಬಹಳ ಇಷ್ಟವಾಗಿ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿದೆ’ ಎಂದರು ರಮೇಶ್ ಅರವಿಂದ್.
ನಾವು ಭಯಪಡುವಂತದ್ದೇನೂ ಇಲ್ಲ ಎನ್ನುವ ರಮೇಶ್, ‘ನಾವು ಅರ್ಥ ಮಾಡಿಕೊಳ್ಳಬೇಕಾದ ಹಲವು ವಿಷಯಗಳಿವೆ. ಅರ್ಥವಾಗುವವರೆಗೂ ಅದರ ಬಗ್ಗೆ ಭಯವಿದ್ದೇ ಇರುತ್ತದೆ. ಅದು ಎಲ್ಲಾ ವಿಷಯಗಳಿಗೂ ಅನ್ವಯವಾಗುತ್ತದೆ. ಸಿನಿಮಾ, ವ್ಯಾಪಾರ ಎಲ್ಲದರ ಬಗ್ಗೆ ಭಯ ಸಹಜ. ದೆವ್ವ, ಭೂತದ ಬಗ್ಗೆ ಭಯವಾದರೆ, ಅದು ನಮಗೆ ಅರ್ಥವಾಗಿಲ್ಲ ಅಷ್ಟೇ. ಅರ್ಥವಾಗದ ಎಲ್ಲಾ ವಿಷಯಗಳಿಗೂ ಉತ್ತರ ದೇವರು ಎಂದು ಡಿವಿಜಿ ಹೇಳುತ್ತಾರೆ. ಅದು ಸತ್ಯ’ ಎಂದರು.
ರಮೇಶ್ ಜೊತೆಗೆ ರಾಧಿಕಾ ನಾರಾಯಣ್, ದಿಗಂತ್, ಅವಿನಾಶ್, ‘ಸಿದ್ಲಿಂಗು’ ಶ್ರೀಧರ್, ಗಿರಿರಾಜ್ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಚಿತ್ರದ ಶೇ. 60ರಷ್ಟು ಚಿತ್ರೀಕರಣ ಮುಗಿದಿದೆ. ಈ ಚಿತ್ರದ ಟೀಸರ್ ಬಿಡುಗಡೆ ಮಾಡುವುದರ ಜೊತೆಗೆ ರಮೇಶ್ ಅರವಿಂದ್ ಅವರ ಹುಟ್ಟುಹಬ್ಬವನ್ನು ಚಿತ್ರತಂಡ ಆಚರಿಸಿತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…