ಮನರಂಜನೆ

ನಿಜಜೀವನದ ದಂಪತಿಯೇ ನಾಯಕ-ನಾಯಕಿ: ಶರಧಿ ಕಿರುಚಿತ್ರ ಬಿಡುಗಡೆ

ವಿಶ್ವದಲ್ಲೇ ಮೊದಲು ಎನ್ನುವಂತೆ ನಿಜಜೀವನದ ಅಂಧ ದಂಪತಿ, ಇದೀಗ ಕಿರುಚಿತ್ರವೊಂದರಲ್ಲಿ ಜೊತೆಯಾಗಿ ನಟಿಸಿದ್ದು, ಆ ಕಿರುಚಿತ್ರ ಇದೀಗ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ‘ಶರತ್ ಮತ್ತು ಶರಧಿ’ ಹೆಸರಿನ ಈ ಕಿರುಚಿತ್ರವನ್ನು ’ಏಪ್ರಿಲ್‌ನ ಹಿಮಬಿಂದು’ ಚಿತ್ರ ನಿರ್ದೇಶಿಸಿದ್ದ ಎಂ. ಜಗದೀಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿ, ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಟಾಕ್‌ಗುರು ಕ್ರಿಯೇಶನ್ಸ್ ಅಡಿಯಲ್ಲಿ ಗಣೇಶ್ ಬಿ.ಎಂ ಈ ಕಿರುಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಹಿರಿಯ ನಟ ದತ್ತಣ್ಣ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನು ಓದಿ : ಕಿರುಚಿತ್ರ ‘ಅಮೃತಾಂಜನ್’ ಈಗ ಸಿನಿಮಾ ಆಯ್ತು …

‘ಶರತ್‍ ಮತ್ತು ಶರಧಿ’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಜಗದೀಶ್‍, ‘ಮದುವೆಯೊಂದರಲ್ಲಿ ಅಂಧ ದಂಪತಿಯನ್ನು ಭೇಟಿ ಮಾಡುವ ಸಂದರ್ಭ ಬಂತು. ಆಗ ಯಾಕೆ ಅಂಧ ದಂಪತಿಯ ಜೀವನದ ಕುರಿತು ಚಿತ್ರ ಮಾಡಬಾರದು ಎಂಬ ಯೋಚನೆ ಬಂತು. ಆಗ ವೀರೇಶ್‍ ಮತ್ತು ಅಶ್ವಿನಿ ಅವರನ್ನು ಭೇಟಿ ಮಾಡಿದೆ. ಅವರು ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿದರು. ಒಂದು ಸನ್ನಿವೇಶದಲ್ಲಿ ನಾವು ಕರೆಂಟ್ ಬಿಲ್ ದುಡ್ಡು ಉಳಿಸಬಹುದು ಎಂಬ ಸಂಭಾಷಣೆ ಇತ್ತು. ಅಶ್ವಿನಿ ಅವರು, ‘ಇದನ್ನು ತೆಗೆದುಬಿಡಿ. ನಮಗೆ ಕತ್ತಲೆ ಇರಬಹುದು. ನಮ್ಮ ಮನೆಯಲ್ಲಿ ಕತ್ತಲಿರಬಾರದು. ಹಾಗೆನಾದರೂ ಇದ್ದರೆ ರಸ್ತೆಯಲ್ಲಿ ಕತ್ತಲೆ ಮನೆ ಆಂತ ಆಗೋಗುತ್ತೆ’ ಎಂದು ಹೇಳಿದರು. ಇಬ್ಬರೂ ಬದುಕನ್ನು ಸಕರಾತ್ಮಕವಾಗಿ ನೋಡುತ್ತಿದ್ದಾರೆ. ಇನ್ನು, ದತ್ತಣ್ಣ ಕಿರುಚಿತ್ರ ಒಪ್ಪಿಕೊಳ್ಳುವುದಿಲ್ಲ. ಆದರೆ, ವಿಷಯಗಳು ಚೆನ್ನಾಗಿರುವುದರಿಂದ ಯಾವುದೇ ಸಂಭಾವನೆ ಪಡೆಯದೆ ನಟಿಸಿ ಪ್ರೋತ್ಸಾಹ ಕೊಟ್ಟರು’ ಎಂದರು.

ಹಿರಿಯ ನಟ ದತ್ತಣ್ಣ ಮಾತನಾಡಿ, ‘ವೀರೇಶ್ ಹಾಗೂ ಅಶ್ವಿನಿ ಎಲ್ಲರ ಮಧ್ಯೆ ಸುಖದಿಂದ ಬದುಕಿನ ಪಯಣ ಸಾಗಿಸುತ್ತಿದ್ದಾರೆ. ನಮಗೂ ಅವರಿಗೂ ದೊಡ್ಡ ವ್ಯತ್ಯಾಸ ಏನು ಇಲ್ಲ. ಸಮಾಜ ಕೂಡ ಅವರನ್ನು ಬೇರೆ ರೀತಿಯಲ್ಲಿ ನೋಡಬೇಕಾದ ಅಗತ್ಯ ಇಲ್ಲ. ನಾವು ವಿಭಿನ್ನವಾಗಿ ಸಬಲರಾಗಿದ್ದೇವೆ. ನಾವು ಅಂಗವಿಕಲರಲ್ಲ ಎಂಬ ಅರ್ಥಪೂರ್ಣ ಸಂದೇಶ ಹೇಳಿದ್ದಾರೆ. ನಿರ್ದೇಶಕರು ಹೇಳಿದಂತೆ ಅರ್ಥೈಸಿಕೊಂಡು ದಂಪತಿಗಳು ಕ್ಯಾಮರಾ ಮುಂದೆ ಅಭಿನಯಿಸಿದ್ದಾರೆ. ಇಂತಹ ಚಿತ್ರಕ್ಕೆ ಮಾನ್ಯತೆ ಸಿಗಬೇಕು’ ಎಂದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago