ಮನರಂಜನೆ

ನಿಜಜೀವನದ ದಂಪತಿಯೇ ನಾಯಕ-ನಾಯಕಿ: ಶರಧಿ ಕಿರುಚಿತ್ರ ಬಿಡುಗಡೆ

ವಿಶ್ವದಲ್ಲೇ ಮೊದಲು ಎನ್ನುವಂತೆ ನಿಜಜೀವನದ ಅಂಧ ದಂಪತಿ, ಇದೀಗ ಕಿರುಚಿತ್ರವೊಂದರಲ್ಲಿ ಜೊತೆಯಾಗಿ ನಟಿಸಿದ್ದು, ಆ ಕಿರುಚಿತ್ರ ಇದೀಗ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ‘ಶರತ್ ಮತ್ತು ಶರಧಿ’ ಹೆಸರಿನ ಈ ಕಿರುಚಿತ್ರವನ್ನು ’ಏಪ್ರಿಲ್‌ನ ಹಿಮಬಿಂದು’ ಚಿತ್ರ ನಿರ್ದೇಶಿಸಿದ್ದ ಎಂ. ಜಗದೀಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿ, ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಟಾಕ್‌ಗುರು ಕ್ರಿಯೇಶನ್ಸ್ ಅಡಿಯಲ್ಲಿ ಗಣೇಶ್ ಬಿ.ಎಂ ಈ ಕಿರುಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಹಿರಿಯ ನಟ ದತ್ತಣ್ಣ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನು ಓದಿ : ಕಿರುಚಿತ್ರ ‘ಅಮೃತಾಂಜನ್’ ಈಗ ಸಿನಿಮಾ ಆಯ್ತು …

‘ಶರತ್‍ ಮತ್ತು ಶರಧಿ’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಜಗದೀಶ್‍, ‘ಮದುವೆಯೊಂದರಲ್ಲಿ ಅಂಧ ದಂಪತಿಯನ್ನು ಭೇಟಿ ಮಾಡುವ ಸಂದರ್ಭ ಬಂತು. ಆಗ ಯಾಕೆ ಅಂಧ ದಂಪತಿಯ ಜೀವನದ ಕುರಿತು ಚಿತ್ರ ಮಾಡಬಾರದು ಎಂಬ ಯೋಚನೆ ಬಂತು. ಆಗ ವೀರೇಶ್‍ ಮತ್ತು ಅಶ್ವಿನಿ ಅವರನ್ನು ಭೇಟಿ ಮಾಡಿದೆ. ಅವರು ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿದರು. ಒಂದು ಸನ್ನಿವೇಶದಲ್ಲಿ ನಾವು ಕರೆಂಟ್ ಬಿಲ್ ದುಡ್ಡು ಉಳಿಸಬಹುದು ಎಂಬ ಸಂಭಾಷಣೆ ಇತ್ತು. ಅಶ್ವಿನಿ ಅವರು, ‘ಇದನ್ನು ತೆಗೆದುಬಿಡಿ. ನಮಗೆ ಕತ್ತಲೆ ಇರಬಹುದು. ನಮ್ಮ ಮನೆಯಲ್ಲಿ ಕತ್ತಲಿರಬಾರದು. ಹಾಗೆನಾದರೂ ಇದ್ದರೆ ರಸ್ತೆಯಲ್ಲಿ ಕತ್ತಲೆ ಮನೆ ಆಂತ ಆಗೋಗುತ್ತೆ’ ಎಂದು ಹೇಳಿದರು. ಇಬ್ಬರೂ ಬದುಕನ್ನು ಸಕರಾತ್ಮಕವಾಗಿ ನೋಡುತ್ತಿದ್ದಾರೆ. ಇನ್ನು, ದತ್ತಣ್ಣ ಕಿರುಚಿತ್ರ ಒಪ್ಪಿಕೊಳ್ಳುವುದಿಲ್ಲ. ಆದರೆ, ವಿಷಯಗಳು ಚೆನ್ನಾಗಿರುವುದರಿಂದ ಯಾವುದೇ ಸಂಭಾವನೆ ಪಡೆಯದೆ ನಟಿಸಿ ಪ್ರೋತ್ಸಾಹ ಕೊಟ್ಟರು’ ಎಂದರು.

ಹಿರಿಯ ನಟ ದತ್ತಣ್ಣ ಮಾತನಾಡಿ, ‘ವೀರೇಶ್ ಹಾಗೂ ಅಶ್ವಿನಿ ಎಲ್ಲರ ಮಧ್ಯೆ ಸುಖದಿಂದ ಬದುಕಿನ ಪಯಣ ಸಾಗಿಸುತ್ತಿದ್ದಾರೆ. ನಮಗೂ ಅವರಿಗೂ ದೊಡ್ಡ ವ್ಯತ್ಯಾಸ ಏನು ಇಲ್ಲ. ಸಮಾಜ ಕೂಡ ಅವರನ್ನು ಬೇರೆ ರೀತಿಯಲ್ಲಿ ನೋಡಬೇಕಾದ ಅಗತ್ಯ ಇಲ್ಲ. ನಾವು ವಿಭಿನ್ನವಾಗಿ ಸಬಲರಾಗಿದ್ದೇವೆ. ನಾವು ಅಂಗವಿಕಲರಲ್ಲ ಎಂಬ ಅರ್ಥಪೂರ್ಣ ಸಂದೇಶ ಹೇಳಿದ್ದಾರೆ. ನಿರ್ದೇಶಕರು ಹೇಳಿದಂತೆ ಅರ್ಥೈಸಿಕೊಂಡು ದಂಪತಿಗಳು ಕ್ಯಾಮರಾ ಮುಂದೆ ಅಭಿನಯಿಸಿದ್ದಾರೆ. ಇಂತಹ ಚಿತ್ರಕ್ಕೆ ಮಾನ್ಯತೆ ಸಿಗಬೇಕು’ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಶಿಷ್ಯ ವೇತನಕ್ಕೆ ಒತ್ತಾಯಿಸಿ ಸಂಶೋಧಕರ ಅಹೋರಾತ್ರಿ ಧರಣಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…

5 hours ago

ಚಾಮರಾಜನಗರ | ಬಾಗಳಿ ಸಮೀಪ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…

5 hours ago

ಅಮೆರಿಕ-ಇರಾನ್ ಶಾಂತಿ ಒಪ್ಪಂದ : ಕಚ್ಚಾ ತೈಲ ಬೆಲೆ ಭಾರೀ ಇಳಿಕೆ

ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…

6 hours ago

ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಮೋಹನ್‌ ಭಾಗವತ್‌ಗೆ ಪ್ರಿಯಾಂಕ್‌ ಖರ್ಗೆ ಪತ್ರ ; ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಬೆಂಗಳೂರು : ಆರ್‌ಎಸ್‌ಎಸ್‌ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…

8 hours ago

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

10 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

12 hours ago