ಮನರಂಜನೆ

ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ.

818 ಕೋಟಿ ರೂ. ಗಳಿಕೆ ಮಾಡುವ ಮೂಲಕ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರಗಳ ಪೈಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ. ಇದಕ್ಕೂ ಮೊದಲು ಈ ಸ್ಥಾನದಲ್ಲಿ ವಿಕ್ಕಿ ಕೌಶಾಲ್‍ ಅಭಿನಯದ ‘ಛಾವ’ ಚಿತ್ರವಿತ್ತು. ನಂತರದ ಸ್ಥಾನಗಳಲ್ಲಿ ‘ಸೈಯ್ಯಾರ’, ‘ಕೂಲಿ’ ಮತ್ತು ‘ವಾರ್ 2’ ಚಿತ್ರಗಳಿದ್ದವು. ಈಗ ಆ ಎಲ್ಲಾ ಚಿತ್ರಗಳನ್ನು ಹಿಂದಿಕ್ಕೆ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದ್ದು, 1000 ಕೋಟಿ ರೂ. ಕ್ಲಬ್‍ ಸೇರುವ ಮುನ್ಸೂಚನೆ ನೀಡಿದೆ.

ಇದನ್ನು ಓದಿ: 11 ದಿನಗಳಲ್ಲಿ 655 ಕೋಟಿ ರೂ. ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’

ಇದಕ್ಕೂ ಮೊದಲು ಕನ್ನಡದಿಂದ ‘ಕೆಜಿಎಫ್‍ – ಚಾಪ್ಟರ್ 2’ ಚಿತ್ರವು 1000 ಕೋಟಿ ರೂ. ಕ್ಲಬ್‍ ಸೇರಿತ್ತು. ಈಗ ‘ಕಾಂತಾರ – ಚಾಪ್ಟರ್ 1’ ಸಹ ಸಾವಿರ ಕೋಟಿ ಕ್ಲಬ್‍ ಸೇರುವ ಹತ್ತಿರದಲ್ಲಿದೆ. ಈ ಎರಡೂ ಚಿತ್ರಗಳನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಂಸ್‍.

‘ಕಾಂತಾರ’ ಚಿತ್ರವು ಕರ್ನಾಟಕ ರಾಜ್ಯವೊಂದರಲ್ಲೇ 250 ಕೋಟಿ ರೂ. ಗಳಿಕೆ ಮಾಡುವ ಮೂಲಕ, ಕನ್ನಡದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮೊದಲು ‘ಕೆಜಿಎಫ್‍ – ಚಾಪ್ಟರ್ 1’ ಮತ್ತು ‘ಕಾಂತಾರ’ ಚಿತ್ರಗಳು ಹೆಚ್ಚು ಗಳಿಕೆ ಮಾಡಿದ್ದರೂ, ಯಾವುದೂ 200 ಕೋಟಿ ರೂ. ಗಳಿಕೆ ಮಾಡಿರಲಿಲ್ಲ. ಈಗ ಆ ಎರಡೂ ಚಿತ್ರಗಳನ್ನೂ ಹಿಂದಿಕ್ಕಿ ‘ಕಾಂತಾರ – ಚಾಪ್ಟರ್‍ 1’ ಮೊದಲ ಸ್ಥಾನಕ್ಕೇರಿದೆ.

‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

4 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

5 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

7 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

7 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

8 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

8 hours ago