ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ.
818 ಕೋಟಿ ರೂ. ಗಳಿಕೆ ಮಾಡುವ ಮೂಲಕ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರಗಳ ಪೈಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ. ಇದಕ್ಕೂ ಮೊದಲು ಈ ಸ್ಥಾನದಲ್ಲಿ ವಿಕ್ಕಿ ಕೌಶಾಲ್ ಅಭಿನಯದ ‘ಛಾವ’ ಚಿತ್ರವಿತ್ತು. ನಂತರದ ಸ್ಥಾನಗಳಲ್ಲಿ ‘ಸೈಯ್ಯಾರ’, ‘ಕೂಲಿ’ ಮತ್ತು ‘ವಾರ್ 2’ ಚಿತ್ರಗಳಿದ್ದವು. ಈಗ ಆ ಎಲ್ಲಾ ಚಿತ್ರಗಳನ್ನು ಹಿಂದಿಕ್ಕೆ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದ್ದು, 1000 ಕೋಟಿ ರೂ. ಕ್ಲಬ್ ಸೇರುವ ಮುನ್ಸೂಚನೆ ನೀಡಿದೆ.
ಇದನ್ನು ಓದಿ: 11 ದಿನಗಳಲ್ಲಿ 655 ಕೋಟಿ ರೂ. ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’
ಇದಕ್ಕೂ ಮೊದಲು ಕನ್ನಡದಿಂದ ‘ಕೆಜಿಎಫ್ – ಚಾಪ್ಟರ್ 2’ ಚಿತ್ರವು 1000 ಕೋಟಿ ರೂ. ಕ್ಲಬ್ ಸೇರಿತ್ತು. ಈಗ ‘ಕಾಂತಾರ – ಚಾಪ್ಟರ್ 1’ ಸಹ ಸಾವಿರ ಕೋಟಿ ಕ್ಲಬ್ ಸೇರುವ ಹತ್ತಿರದಲ್ಲಿದೆ. ಈ ಎರಡೂ ಚಿತ್ರಗಳನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಂಸ್.
‘ಕಾಂತಾರ’ ಚಿತ್ರವು ಕರ್ನಾಟಕ ರಾಜ್ಯವೊಂದರಲ್ಲೇ 250 ಕೋಟಿ ರೂ. ಗಳಿಕೆ ಮಾಡುವ ಮೂಲಕ, ಕನ್ನಡದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮೊದಲು ‘ಕೆಜಿಎಫ್ – ಚಾಪ್ಟರ್ 1’ ಮತ್ತು ‘ಕಾಂತಾರ’ ಚಿತ್ರಗಳು ಹೆಚ್ಚು ಗಳಿಕೆ ಮಾಡಿದ್ದರೂ, ಯಾವುದೂ 200 ಕೋಟಿ ರೂ. ಗಳಿಕೆ ಮಾಡಿರಲಿಲ್ಲ. ಈಗ ಆ ಎರಡೂ ಚಿತ್ರಗಳನ್ನೂ ಹಿಂದಿಕ್ಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ.
‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…