ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ.
818 ಕೋಟಿ ರೂ. ಗಳಿಕೆ ಮಾಡುವ ಮೂಲಕ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರಗಳ ಪೈಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ. ಇದಕ್ಕೂ ಮೊದಲು ಈ ಸ್ಥಾನದಲ್ಲಿ ವಿಕ್ಕಿ ಕೌಶಾಲ್ ಅಭಿನಯದ ‘ಛಾವ’ ಚಿತ್ರವಿತ್ತು. ನಂತರದ ಸ್ಥಾನಗಳಲ್ಲಿ ‘ಸೈಯ್ಯಾರ’, ‘ಕೂಲಿ’ ಮತ್ತು ‘ವಾರ್ 2’ ಚಿತ್ರಗಳಿದ್ದವು. ಈಗ ಆ ಎಲ್ಲಾ ಚಿತ್ರಗಳನ್ನು ಹಿಂದಿಕ್ಕೆ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದ್ದು, 1000 ಕೋಟಿ ರೂ. ಕ್ಲಬ್ ಸೇರುವ ಮುನ್ಸೂಚನೆ ನೀಡಿದೆ.
ಇದನ್ನು ಓದಿ: 11 ದಿನಗಳಲ್ಲಿ 655 ಕೋಟಿ ರೂ. ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’
ಇದಕ್ಕೂ ಮೊದಲು ಕನ್ನಡದಿಂದ ‘ಕೆಜಿಎಫ್ – ಚಾಪ್ಟರ್ 2’ ಚಿತ್ರವು 1000 ಕೋಟಿ ರೂ. ಕ್ಲಬ್ ಸೇರಿತ್ತು. ಈಗ ‘ಕಾಂತಾರ – ಚಾಪ್ಟರ್ 1’ ಸಹ ಸಾವಿರ ಕೋಟಿ ಕ್ಲಬ್ ಸೇರುವ ಹತ್ತಿರದಲ್ಲಿದೆ. ಈ ಎರಡೂ ಚಿತ್ರಗಳನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಂಸ್.
‘ಕಾಂತಾರ’ ಚಿತ್ರವು ಕರ್ನಾಟಕ ರಾಜ್ಯವೊಂದರಲ್ಲೇ 250 ಕೋಟಿ ರೂ. ಗಳಿಕೆ ಮಾಡುವ ಮೂಲಕ, ಕನ್ನಡದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮೊದಲು ‘ಕೆಜಿಎಫ್ – ಚಾಪ್ಟರ್ 1’ ಮತ್ತು ‘ಕಾಂತಾರ’ ಚಿತ್ರಗಳು ಹೆಚ್ಚು ಗಳಿಕೆ ಮಾಡಿದ್ದರೂ, ಯಾವುದೂ 200 ಕೋಟಿ ರೂ. ಗಳಿಕೆ ಮಾಡಿರಲಿಲ್ಲ. ಈಗ ಆ ಎರಡೂ ಚಿತ್ರಗಳನ್ನೂ ಹಿಂದಿಕ್ಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ.
‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…