ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ.
818 ಕೋಟಿ ರೂ. ಗಳಿಕೆ ಮಾಡುವ ಮೂಲಕ ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರಗಳ ಪೈಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ. ಇದಕ್ಕೂ ಮೊದಲು ಈ ಸ್ಥಾನದಲ್ಲಿ ವಿಕ್ಕಿ ಕೌಶಾಲ್ ಅಭಿನಯದ ‘ಛಾವ’ ಚಿತ್ರವಿತ್ತು. ನಂತರದ ಸ್ಥಾನಗಳಲ್ಲಿ ‘ಸೈಯ್ಯಾರ’, ‘ಕೂಲಿ’ ಮತ್ತು ‘ವಾರ್ 2’ ಚಿತ್ರಗಳಿದ್ದವು. ಈಗ ಆ ಎಲ್ಲಾ ಚಿತ್ರಗಳನ್ನು ಹಿಂದಿಕ್ಕೆ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದ್ದು, 1000 ಕೋಟಿ ರೂ. ಕ್ಲಬ್ ಸೇರುವ ಮುನ್ಸೂಚನೆ ನೀಡಿದೆ.
ಇದನ್ನು ಓದಿ: 11 ದಿನಗಳಲ್ಲಿ 655 ಕೋಟಿ ರೂ. ಗಳಿಕೆ ಮಾಡಿದ ‘ಕಾಂತಾರ – ಚಾಪ್ಟರ್ 1’
ಇದಕ್ಕೂ ಮೊದಲು ಕನ್ನಡದಿಂದ ‘ಕೆಜಿಎಫ್ – ಚಾಪ್ಟರ್ 2’ ಚಿತ್ರವು 1000 ಕೋಟಿ ರೂ. ಕ್ಲಬ್ ಸೇರಿತ್ತು. ಈಗ ‘ಕಾಂತಾರ – ಚಾಪ್ಟರ್ 1’ ಸಹ ಸಾವಿರ ಕೋಟಿ ಕ್ಲಬ್ ಸೇರುವ ಹತ್ತಿರದಲ್ಲಿದೆ. ಈ ಎರಡೂ ಚಿತ್ರಗಳನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಂಸ್.
‘ಕಾಂತಾರ’ ಚಿತ್ರವು ಕರ್ನಾಟಕ ರಾಜ್ಯವೊಂದರಲ್ಲೇ 250 ಕೋಟಿ ರೂ. ಗಳಿಕೆ ಮಾಡುವ ಮೂಲಕ, ಕನ್ನಡದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮೊದಲು ‘ಕೆಜಿಎಫ್ – ಚಾಪ್ಟರ್ 1’ ಮತ್ತು ‘ಕಾಂತಾರ’ ಚಿತ್ರಗಳು ಹೆಚ್ಚು ಗಳಿಕೆ ಮಾಡಿದ್ದರೂ, ಯಾವುದೂ 200 ಕೋಟಿ ರೂ. ಗಳಿಕೆ ಮಾಡಿರಲಿಲ್ಲ. ಈಗ ಆ ಎರಡೂ ಚಿತ್ರಗಳನ್ನೂ ಹಿಂದಿಕ್ಕಿ ‘ಕಾಂತಾರ – ಚಾಪ್ಟರ್ 1’ ಮೊದಲ ಸ್ಥಾನಕ್ಕೇರಿದೆ.
‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…