ಮನರಂಜನೆ

ನಿಜಜೀವನದ ಪ್ರೇಮಿಗಳಿಂದ ಬಿಡುಗಡೆಯಾಯ್ತು ‘ಜೈ’ ಚಿತ್ರದ ಪ್ರೇಮಗೀತೆ

ಪ್ರೀತಿಯ ಹಾಡಾದ್ದರಿಂದ, ಅದನ್ನು ವಿಶೇಷವಾಗಿ ಬಿಡುಗಡೆ ಮಾಡಬೇಕು, ಸಾಧ್ಯವಾದರೆ ನಿಜಜೀವನದ ಪ್ರೇಮಿಗಳಿಂದ ಬಿಡುಗಡೆ ಮಾಡಿಸಬೇಕು ಎಂಬುದು ರೂಪೇಶ್‍ ಶೆಟ್ಟಿ ಆಸೆ ಆಗಿತ್ತಂತೆ. ಅದರಂತೆ ಅವರು ಗುರುಕಿರಣ್‍, ನಿರಂಜನ್ ದೇಶಪಾಂಡೆ, ವಿನಯ್ ಗೌಡ, ರೂಪೇಶ್ ರಾಜಣ್ಣ ಮತ್ತು ಆರ್ಯವರ್ಧನ್ ಗುರೂಜಿ ದಂಪತಿಗಳಿಗೆ ಹಾಡು ಬಿಡುಗಡೆ ಮಾಡಿಕೊಡಲು ಮನವಿ ಮಾಡಿದ್ದಾರೆ. ರೂಪೇಶ್‍ ಮನವಿಗೆ ಪುರಸ್ಕರಿಸಿದ ಈ ಐದು ದಂಪತಿಗಳು ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ರೂಪೇಶ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಜೈ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಈ ಮೊದಲು ಚಿತ್ರದ ಒಂದು ಹಾಡನ್ನು ಕೆಲವು ದಿನಗಳ ಹಿಂದೆ ಶ್ರೀಮುರಳಿ ಬಿಡುಗಡೆ ಮಾಡಿದ್ದರು. ಇದೀಗ ‘ಲವ್‍’ ಎಂಬ ಪ್ರೇಮಮಯ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ರಜತ್‍ ಹೆಗ್ಡೆ ಹಾಡಿದ್ದಾರೆ.

ಇದನ್ನು ಓದಿ: ʼಕಾಟನ್‌ ಕ್ಯಾಂಡಿʼ ಸಾಂಗ್‌ ವಿವಾದ: ಕಾನೂನು ಸಮರಕ್ಕೆ ಸಿದ್ಧ ಎಂದ ರ‍್ಯಾಪರ್ ಚಂದನ್‌ ಶೆಟ್ಟಿ

‘ಜೈ’ ಚಿತ್ರವು ಕನ್ನಡ ಮತ್ತು ತುಳುವಿನಲ್ಲಿ ಬಿಡುಗಡೆಯಾಗುತ್ತಿದೆ. ಈ ಹಾಡಿಗೆ ತುಳು ಭಾಷೆಯಲ್ಲಿ ರೂಪೇಶ್ ಶೆಟ್ಟಿ ಸಾಹಿತ್ಯ ಬರೆದಿದ್ದು, ಕನ್ನಡದಲ್ಲಿ ಕೀರ್ತನ್ ಭಂಡಾರಿ ಅವರು ಬರೆದಿದ್ದಾರೆ. ಹಾಗಂತ ಇದು ತರ್ಜುಮೆ ಅಲ್ಲವಂತೆ. ‘ಹಾಡಿನ ವಿಚಾರಧಾರೆಯನ್ನು ಮುಂದಿಟ್ಟುಕೊಂಡು, ಆ ಭಾವನೆ, ಆ ಅರ್ಥವನ್ನು ಇ ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

‘ಜೈ’ ಚಿತ್ರದಲ್ಲಿ ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ನಟಿಸಿದ್ದು, ಇದು ಅದ್ವಿತಿ ಅಭಿನಯದ ಮೊದಲ ತುಳು ಚಿತ್ರ. ಈ ಚಿತ್ರದಲ್ಲಿ ಅದ್ವಿತಿ, ಪತ್ರಕರ್ತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರೂಪೇಶ್‍ ಮತ್ತು ಅದ್ವಿತಿ ಜೊತೆಗೆ ಸುನೀಲ್‍ ಶೆಟ್ಟಿ, ನವೀನ್ ‍ಪಡೀಲ್‍ ಮುಂತಾದವರು ನಟಿಸಿದ್ದಾರೆ. ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

5 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

5 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

6 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago