ಮನರಂಜನೆ

ನಿಜಜೀವನದ ಪ್ರೇಮಿಗಳಿಂದ ಬಿಡುಗಡೆಯಾಯ್ತು ‘ಜೈ’ ಚಿತ್ರದ ಪ್ರೇಮಗೀತೆ

ಪ್ರೀತಿಯ ಹಾಡಾದ್ದರಿಂದ, ಅದನ್ನು ವಿಶೇಷವಾಗಿ ಬಿಡುಗಡೆ ಮಾಡಬೇಕು, ಸಾಧ್ಯವಾದರೆ ನಿಜಜೀವನದ ಪ್ರೇಮಿಗಳಿಂದ ಬಿಡುಗಡೆ ಮಾಡಿಸಬೇಕು ಎಂಬುದು ರೂಪೇಶ್‍ ಶೆಟ್ಟಿ ಆಸೆ ಆಗಿತ್ತಂತೆ. ಅದರಂತೆ ಅವರು ಗುರುಕಿರಣ್‍, ನಿರಂಜನ್ ದೇಶಪಾಂಡೆ, ವಿನಯ್ ಗೌಡ, ರೂಪೇಶ್ ರಾಜಣ್ಣ ಮತ್ತು ಆರ್ಯವರ್ಧನ್ ಗುರೂಜಿ ದಂಪತಿಗಳಿಗೆ ಹಾಡು ಬಿಡುಗಡೆ ಮಾಡಿಕೊಡಲು ಮನವಿ ಮಾಡಿದ್ದಾರೆ. ರೂಪೇಶ್‍ ಮನವಿಗೆ ಪುರಸ್ಕರಿಸಿದ ಈ ಐದು ದಂಪತಿಗಳು ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ರೂಪೇಶ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಜೈ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಈ ಮೊದಲು ಚಿತ್ರದ ಒಂದು ಹಾಡನ್ನು ಕೆಲವು ದಿನಗಳ ಹಿಂದೆ ಶ್ರೀಮುರಳಿ ಬಿಡುಗಡೆ ಮಾಡಿದ್ದರು. ಇದೀಗ ‘ಲವ್‍’ ಎಂಬ ಪ್ರೇಮಮಯ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ರಜತ್‍ ಹೆಗ್ಡೆ ಹಾಡಿದ್ದಾರೆ.

ಇದನ್ನು ಓದಿ: ʼಕಾಟನ್‌ ಕ್ಯಾಂಡಿʼ ಸಾಂಗ್‌ ವಿವಾದ: ಕಾನೂನು ಸಮರಕ್ಕೆ ಸಿದ್ಧ ಎಂದ ರ‍್ಯಾಪರ್ ಚಂದನ್‌ ಶೆಟ್ಟಿ

‘ಜೈ’ ಚಿತ್ರವು ಕನ್ನಡ ಮತ್ತು ತುಳುವಿನಲ್ಲಿ ಬಿಡುಗಡೆಯಾಗುತ್ತಿದೆ. ಈ ಹಾಡಿಗೆ ತುಳು ಭಾಷೆಯಲ್ಲಿ ರೂಪೇಶ್ ಶೆಟ್ಟಿ ಸಾಹಿತ್ಯ ಬರೆದಿದ್ದು, ಕನ್ನಡದಲ್ಲಿ ಕೀರ್ತನ್ ಭಂಡಾರಿ ಅವರು ಬರೆದಿದ್ದಾರೆ. ಹಾಗಂತ ಇದು ತರ್ಜುಮೆ ಅಲ್ಲವಂತೆ. ‘ಹಾಡಿನ ವಿಚಾರಧಾರೆಯನ್ನು ಮುಂದಿಟ್ಟುಕೊಂಡು, ಆ ಭಾವನೆ, ಆ ಅರ್ಥವನ್ನು ಇ ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

‘ಜೈ’ ಚಿತ್ರದಲ್ಲಿ ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ನಟಿಸಿದ್ದು, ಇದು ಅದ್ವಿತಿ ಅಭಿನಯದ ಮೊದಲ ತುಳು ಚಿತ್ರ. ಈ ಚಿತ್ರದಲ್ಲಿ ಅದ್ವಿತಿ, ಪತ್ರಕರ್ತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರೂಪೇಶ್‍ ಮತ್ತು ಅದ್ವಿತಿ ಜೊತೆಗೆ ಸುನೀಲ್‍ ಶೆಟ್ಟಿ, ನವೀನ್ ‍ಪಡೀಲ್‍ ಮುಂತಾದವರು ನಟಿಸಿದ್ದಾರೆ. ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago