ಮನರಂಜನೆ

‘ಖದೀಮ’ನ ಲವ್‍ ಸ್ಟೋರಿ; ಜಿಮ್‍ ತರಬೇತುದಾರ ಹೀರೋ ಆದಾಗ

ಕಳೆದ ವರ್ಷ ‘ಅಪ್ಪಾ ಐ ಲವ್‍ ಯು’ ಚಿತ್ರದಲ್ಲಿ ಸಂಜಯ್‍ ಎಂಬ ಜಿಮ್‍ ಟ್ರೈನರ್‍, ನಾಯಕನಾಗಿ ಅಭಿನಯಿಸಿದ್ದರು. ಈ ಶುಕ್ರವಾರ (ಏಪ್ರಿಲ್‍ 18) ಬಿಡುಗಡೆಯಾಗುತ್ತಿರುವ ‘ಖದೀಮ’ ಎಂಬ ಹೊಸ ಚಿತ್ರದಲ್ಲೂ ಚಂದನ್‍ ಎಂಬ ಜಿಮ್‍ ಟ್ರೈನರ್‍ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

‘ಖದೀಮ’ ಚಿತ್ರವನ್ನು ಶಿವೇಶು ಪ್ರೊಡಕ್ಷನ್ ಅಡಿಯಲ್ಲಿ ಅನಿವಾಸಿ ಭಾರತೀಯ ಟಿ. ಸಿವಕುಮಾರನ್ ನಿರ್ಮಿಸುತ್ತಿದ್ದು, ಯಶಸ್ವಿನಿ ಆರ್ ಸಹ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಸಾಯಿ ಪ್ರದೀಪ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ನಾಯಕನಾಗಿ ಚಂದನ್, ನಾಯಕಿಯಾಗಿ ಅನುಷಾ ಕೃಷ್ಣ ಅಭಿನಯಸಿದ್ದಾರೆ.

ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸಾಯಿ ಪ್ರದೀಪ್‍, ‘ಸಣ್ಣ ಪುಟ್ಟ ಕಳ್ಳತನ ಮಾಡಿಕೊಂಡಿದ್ದ ಯುವಕನೊಬ್ಬ ಪ್ರೀತಿಯಲ್ಲಿ ಬಿದ್ದಾಗ, ಆತನ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತದೆ. ಮುಂದೆ ಅವನ ಜೀವನದಲ್ಲಿ ಏನೆಲ್ಲಾ ಆಗುತ್ತದೆ, ಅವನಿಂದ ಸಮಾಜಕ್ಕೆ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕಥೆ. ಬೆಂಗಳೂರು ಸಿಟಿ ಮಾರ್ಕೆಟ್‌ನಲ್ಲಿ ಇಲ್ಲಿಯವರೆಗೂ ಮಚ್ಚು, ಲಾಂಗ್‌ಗಳ ಸದ್ದು ಪರದೆ ಮೇಲೆ ಆರ್ಭಟಿಸಿತ್ತು. ನಮ್ಮ ಸಿನಿಮಾದಲ್ಲಿ ಇದೆಲ್ಲಾವನ್ನು ಪಕ್ಕಕ್ಕೆ ಇಟ್ಟು, ಪ್ರೀತಿಯ ಅಂಶವನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಇದೇ ಪ್ರದೇಶದಲ್ಲಿ ಚಿತ್ರದ ಶೇ. 60ರಷ್ಟು ಚಿತ್ರೀಕರಣ ಮಾಡಿದ್ದೇವೆ. ಅದು ನಿಜಕ್ಕೂ ಸವಾಲಿನ ಕೆಲಸವಾಗಿತ್ತು’ ಎಂದರು.

ಜಿಮ್ ತರಭೇತಿದಾರನಾಗಿದ್ದ ಚಂದನ್‍ಗೆ ಗೆಳೆಯರು ಹೀರೋ ಆಗು ಅಂತ ಹುರಿದುಂಬಿಸಿದರಂತೆ. ‘ಆಗ ಮೊದಲು ನಿರ್ಮಾಪಕರನ್ನು ಹಿಡಿದೆ. ಅದೇ ಮೊದಲ ಸಾಧನೆ ಎನ್ನಬಹುದು. ನಟನೆಯ ಅನುಭವ ಇಲ್ಲದಿದ್ದರೂ, ದೇವರ ದಯೆಯಿಂದ ಸೆಟ್‌ನಲ್ಲಿ ನಿರ್ದೇಶಕರು ಹೇಳಿಕೊಟ್ಟಂತೆ ಮಾಡುತ್ತಿದ್ದೆ. ಒಂದು ರೀತಿಯಲ್ಲಿ ಅವರೇ ನನಗೆ ಗುರುಗಳು’ ಎಂದರು.

ನಿಜ ಜೀವನದಲ್ಲಿ ರಂಗಕರ್ಮಿಯಾಗಿರುವ ನಾಯಕಿ ಅನುಷಾ ಕೃಷ್ಣ ಚಿತ್ರದಲ್ಲೂ ಅದೇ ಪಾತ್ರವನ್ನು ಮಾಡಿದ್ದಾರಂತೆ. ಚಿತ್ರದಲ್ಲಿ ಚಂದನ್‍ ಮತ್ತು ಅನುಷಾ ಜೊತೆಗೆ ಶೋಭರಾಜ್, ಗಿರಿಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ವಿ. ಮನೋಹರ್, ಯಶ್‌ ಶೆಟ್ಟಿ, ಮಿಮಿಕ್ರಿ ದಯಾನಂದ್, ಶಿವಕುಮಾರ್‌ ಆರಾಧ್ಯ ಮುಂತಾದವರು ನಟಿಸಿದ್ದಾರೆ.

‘ಖದೀಮ’ ಚಿತ್ರಕ್ಕೆ ನಾಗಾರ್ಜುನ ಅವರ ಛಾಯಾಗ್ರಣ, ಶಶಾಂಕ್‍ ಶೇಷಗಿರಿ ಸಂಗೀತವಿದೆ. ಸಂಗೀತದ ಜೊತೆಗೆ ಶಶಾಂಕ್‍ ಒಂದು ಹಾಡನ್ನು ಹಾಡುವುದರ ಜೊತೆಗೆ, ಚಿತ್ರದಲ್ಲೊಂದು ಚಿಕ್ಕ ಪಾತ್ರವನ್ನೂ ಮಾಡಿದ್ದಾರಂತೆ.

ಆಂದೋಲನ ಡೆಸ್ಕ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

10 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

11 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

11 hours ago