ಮನರಂಜನೆ

‘ಖದೀಮ’ನ ಲವ್‍ ಸ್ಟೋರಿ; ಜಿಮ್‍ ತರಬೇತುದಾರ ಹೀರೋ ಆದಾಗ

ಕಳೆದ ವರ್ಷ ‘ಅಪ್ಪಾ ಐ ಲವ್‍ ಯು’ ಚಿತ್ರದಲ್ಲಿ ಸಂಜಯ್‍ ಎಂಬ ಜಿಮ್‍ ಟ್ರೈನರ್‍, ನಾಯಕನಾಗಿ ಅಭಿನಯಿಸಿದ್ದರು. ಈ ಶುಕ್ರವಾರ (ಏಪ್ರಿಲ್‍ 18) ಬಿಡುಗಡೆಯಾಗುತ್ತಿರುವ ‘ಖದೀಮ’ ಎಂಬ ಹೊಸ ಚಿತ್ರದಲ್ಲೂ ಚಂದನ್‍ ಎಂಬ ಜಿಮ್‍ ಟ್ರೈನರ್‍ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

‘ಖದೀಮ’ ಚಿತ್ರವನ್ನು ಶಿವೇಶು ಪ್ರೊಡಕ್ಷನ್ ಅಡಿಯಲ್ಲಿ ಅನಿವಾಸಿ ಭಾರತೀಯ ಟಿ. ಸಿವಕುಮಾರನ್ ನಿರ್ಮಿಸುತ್ತಿದ್ದು, ಯಶಸ್ವಿನಿ ಆರ್ ಸಹ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಸಾಯಿ ಪ್ರದೀಪ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ನಾಯಕನಾಗಿ ಚಂದನ್, ನಾಯಕಿಯಾಗಿ ಅನುಷಾ ಕೃಷ್ಣ ಅಭಿನಯಸಿದ್ದಾರೆ.

ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸಾಯಿ ಪ್ರದೀಪ್‍, ‘ಸಣ್ಣ ಪುಟ್ಟ ಕಳ್ಳತನ ಮಾಡಿಕೊಂಡಿದ್ದ ಯುವಕನೊಬ್ಬ ಪ್ರೀತಿಯಲ್ಲಿ ಬಿದ್ದಾಗ, ಆತನ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತದೆ. ಮುಂದೆ ಅವನ ಜೀವನದಲ್ಲಿ ಏನೆಲ್ಲಾ ಆಗುತ್ತದೆ, ಅವನಿಂದ ಸಮಾಜಕ್ಕೆ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕಥೆ. ಬೆಂಗಳೂರು ಸಿಟಿ ಮಾರ್ಕೆಟ್‌ನಲ್ಲಿ ಇಲ್ಲಿಯವರೆಗೂ ಮಚ್ಚು, ಲಾಂಗ್‌ಗಳ ಸದ್ದು ಪರದೆ ಮೇಲೆ ಆರ್ಭಟಿಸಿತ್ತು. ನಮ್ಮ ಸಿನಿಮಾದಲ್ಲಿ ಇದೆಲ್ಲಾವನ್ನು ಪಕ್ಕಕ್ಕೆ ಇಟ್ಟು, ಪ್ರೀತಿಯ ಅಂಶವನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಇದೇ ಪ್ರದೇಶದಲ್ಲಿ ಚಿತ್ರದ ಶೇ. 60ರಷ್ಟು ಚಿತ್ರೀಕರಣ ಮಾಡಿದ್ದೇವೆ. ಅದು ನಿಜಕ್ಕೂ ಸವಾಲಿನ ಕೆಲಸವಾಗಿತ್ತು’ ಎಂದರು.

ಜಿಮ್ ತರಭೇತಿದಾರನಾಗಿದ್ದ ಚಂದನ್‍ಗೆ ಗೆಳೆಯರು ಹೀರೋ ಆಗು ಅಂತ ಹುರಿದುಂಬಿಸಿದರಂತೆ. ‘ಆಗ ಮೊದಲು ನಿರ್ಮಾಪಕರನ್ನು ಹಿಡಿದೆ. ಅದೇ ಮೊದಲ ಸಾಧನೆ ಎನ್ನಬಹುದು. ನಟನೆಯ ಅನುಭವ ಇಲ್ಲದಿದ್ದರೂ, ದೇವರ ದಯೆಯಿಂದ ಸೆಟ್‌ನಲ್ಲಿ ನಿರ್ದೇಶಕರು ಹೇಳಿಕೊಟ್ಟಂತೆ ಮಾಡುತ್ತಿದ್ದೆ. ಒಂದು ರೀತಿಯಲ್ಲಿ ಅವರೇ ನನಗೆ ಗುರುಗಳು’ ಎಂದರು.

ನಿಜ ಜೀವನದಲ್ಲಿ ರಂಗಕರ್ಮಿಯಾಗಿರುವ ನಾಯಕಿ ಅನುಷಾ ಕೃಷ್ಣ ಚಿತ್ರದಲ್ಲೂ ಅದೇ ಪಾತ್ರವನ್ನು ಮಾಡಿದ್ದಾರಂತೆ. ಚಿತ್ರದಲ್ಲಿ ಚಂದನ್‍ ಮತ್ತು ಅನುಷಾ ಜೊತೆಗೆ ಶೋಭರಾಜ್, ಗಿರಿಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ವಿ. ಮನೋಹರ್, ಯಶ್‌ ಶೆಟ್ಟಿ, ಮಿಮಿಕ್ರಿ ದಯಾನಂದ್, ಶಿವಕುಮಾರ್‌ ಆರಾಧ್ಯ ಮುಂತಾದವರು ನಟಿಸಿದ್ದಾರೆ.

‘ಖದೀಮ’ ಚಿತ್ರಕ್ಕೆ ನಾಗಾರ್ಜುನ ಅವರ ಛಾಯಾಗ್ರಣ, ಶಶಾಂಕ್‍ ಶೇಷಗಿರಿ ಸಂಗೀತವಿದೆ. ಸಂಗೀತದ ಜೊತೆಗೆ ಶಶಾಂಕ್‍ ಒಂದು ಹಾಡನ್ನು ಹಾಡುವುದರ ಜೊತೆಗೆ, ಚಿತ್ರದಲ್ಲೊಂದು ಚಿಕ್ಕ ಪಾತ್ರವನ್ನೂ ಮಾಡಿದ್ದಾರಂತೆ.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

8 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

11 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

12 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

13 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

13 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

13 hours ago