ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ.
ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ ಇತ್ತೀಚೆಗೆ ’ಮಣಿಕಂಠ’ ಮುಹೂರ್ತ ನಡೆಯಿತು. ತಂಡಕ್ಕೆ ಶುಭ ಹಾರೈಸಲು ಕಾಶಿಯಿಂದ ಸಾಕ್ಷಾತ್ ಎಂಟು ನಾಗಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು. ಈ ಚಿತ್ರವನ್ನು ಅಶ್ವಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ಅಶ್ವಿನಿ ಸಂತೋಷ್ ಸಿಂಹ ನಿರ್ಮಾಣ ಮಾಡುವುದರ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಸಂತೋಷ್ ಸಿಂಹ, ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಅಲ್ಲದೆ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಇಬ್ಬರು ಮಕ್ಕಳು ಬಣ್ಣ ಹಚ್ಚುತ್ತಿದ್ದು, ಒಂದು ರೀತಿಯಲ್ಲಿ ಇಡೀ ಕುಟುಂಬ ಚಿತ್ರದಲ್ಲಿ ತೊಡಗಿಕೊಂಡಿದೆ.
ಪೂಜೆ ನಂತರ ಮಾತನಾಡಿದ ನಟ-ನಿರ್ದೇಶಕ ಸಂತೋಷ್ ಸಿಂಹ, ‘ಮಣಿಕಂಠನು ಪ್ರತಿಯೊಬ್ಬರ ಜೀವನದಲ್ಲಿ ಆವರಿಸಿಕೊಂಡು ಪವಾಡ ಮಾಡಿದ್ದಾನೆ. ಅದನ್ನು ಅನುಭವಿಸಿದಾಗ ಮಾತ್ರ ತಿಳಿಯುತ್ತದೆ. ಹುಡುಕುತ್ತಾ ಹೋದರೆ ಮುಗಿಯುವುದಿಲ್ಲ. 25 ವರ್ಷ ದೊಡ್ಡಪಾದಕ್ಕೆ ಹೋಗಿ ಭಕ್ತಿಯಿಂದ ಸ್ವಾಮಿ ದರ್ಶನ ಮಾಡಿದ್ದೇನೆ. ನನ್ನ ಬದುಕಲ್ಲಿ ನಡೆದಂತ ಸತ್ಯ ಘಟನೆಗಳು, ಸ್ವಾಮಿಯ ಪವಾಡಗಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಭಕ್ತಿ, ಪವಾಡಗಳ ಜೊತೆಗೆ ತಾಯಿ ಸೆಂಟಿಮೆಂಟ್, ಪ್ರೀತಿ ಎಲ್ಲವೂ ಇರುತ್ತದೆ’ ಎಂದರು.
‘ಮಣಿಕಂಠ’ ಚಿತ್ರದಲ್ಲಿ ಜೀವನ್ ಸಿಂಹ, ತನುಶ್ರೀ ಸಿಂಹ, ಬಿ.ಎಸ್.ಮಂಜುಳಾ, ವೈಷ್ಣವಿ ಎಸ್.ಡಿ, ಶರತ್ ಎಸ್.ಎಂ.ಮಮತಾ, ಶಿವಣ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚೇತನ್ಕುಮಾರ್ ಸಾಹಿತ್ಯ ರಚಿಸಿರುವ ಐದು ಗೀತೆಗಳಿಗೆ ಸ್ವರೂಪ್ ಆರ್ ಸಂಗೀತ ಸಂಯೋಜಿಸುತಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು, ಶಬರಿಮಲೆ, ಪಂಪ, ದೊಡ್ಡಪಾದ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…