ಮನರಂಜನೆ

ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ನ ಮುಹೂರ್ತ

ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ.

ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ ಇತ್ತೀಚೆಗೆ ’ಮಣಿಕಂಠ’ ಮುಹೂರ್ತ ನಡೆಯಿತು. ತಂಡಕ್ಕೆ ಶುಭ ಹಾರೈಸಲು ಕಾಶಿಯಿಂದ ಸಾಕ್ಷಾತ್ ಎಂಟು ನಾಗಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು. ಈ ಚಿತ್ರವನ್ನು ಅಶ್ವಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ಅಶ್ವಿನಿ ಸಂತೋಷ್‌ ಸಿಂಹ ನಿರ್ಮಾಣ ಮಾಡುವುದರ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಸಂತೋಷ್ ಸಿಂಹ, ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಅಲ್ಲದೆ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಇಬ್ಬರು ಮಕ್ಕಳು ಬಣ್ಣ ಹಚ್ಚುತ್ತಿದ್ದು, ಒಂದು ರೀತಿಯಲ್ಲಿ ಇಡೀ ಕುಟುಂಬ ಚಿತ್ರದಲ್ಲಿ ತೊಡಗಿಕೊಂಡಿದೆ.

ಪೂಜೆ ನಂತರ ಮಾತನಾಡಿದ ನಟ-ನಿರ್ದೇಶಕ ಸಂತೋಷ್‍ ಸಿಂಹ, ‘ಮಣಿಕಂಠನು ಪ್ರತಿಯೊಬ್ಬರ ಜೀವನದಲ್ಲಿ ಆವರಿಸಿಕೊಂಡು ಪವಾಡ ಮಾಡಿದ್ದಾನೆ. ಅದನ್ನು ಅನುಭವಿಸಿದಾಗ ಮಾತ್ರ ತಿಳಿಯುತ್ತದೆ. ಹುಡುಕುತ್ತಾ ಹೋದರೆ ಮುಗಿಯುವುದಿಲ್ಲ. 25 ವರ್ಷ ದೊಡ್ಡಪಾದಕ್ಕೆ ಹೋಗಿ ಭಕ್ತಿಯಿಂದ ಸ್ವಾಮಿ ದರ್ಶನ ಮಾಡಿದ್ದೇನೆ. ನನ್ನ ಬದುಕಲ್ಲಿ ನಡೆದಂತ ಸತ್ಯ ಘಟನೆಗಳು, ಸ್ವಾಮಿಯ ಪವಾಡಗಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಭಕ್ತಿ, ಪವಾಡಗಳ ಜೊತೆಗೆ ತಾಯಿ ಸೆಂಟಿಮೆಂಟ್, ಪ್ರೀತಿ ಎಲ್ಲವೂ ಇರುತ್ತದೆ’ ಎಂದರು.

‘ಮಣಿಕಂಠ’ ಚಿತ್ರದಲ್ಲಿ ಜೀವನ್‌ ಸಿಂಹ, ತನುಶ್ರೀ ಸಿಂಹ, ಬಿ.ಎಸ್.ಮಂಜುಳಾ, ವೈಷ್ಣವಿ ಎಸ್.ಡಿ, ಶರತ್ ಎಸ್.ಎಂ.ಮಮತಾ, ಶಿವಣ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚೇತನ್‌ಕುಮಾರ್ ಸಾಹಿತ್ಯ ರಚಿಸಿರುವ ಐದು ಗೀತೆಗಳಿಗೆ ಸ್ವರೂಪ್ ಆರ್ ಸಂಗೀತ ಸಂಯೋಜಿಸುತಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು, ಶಬರಿಮಲೆ, ಪಂಪ, ದೊಡ್ಡಪಾದ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಸೆರೆ ಹಿಡಿದ ಹುಲಿಗಳನ್ನು ಬಿಆರ್‌ಟಿ ಅರಣ್ಯಕ್ಕೆ ಬಿಡದಂತೆ ಸಂಸದ ಸುನೀಲ್‌ ಬೋಸ್‌ ಸೂಚನೆ

ಮಹಾದೇಶ್‌ ಎಂ ಗೌಡ  ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…

8 mins ago

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…

1 hour ago

ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…

2 hours ago

ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ಪ್ರಕ್ರಿಯೆ ಆರಂಭ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌ ಫ್ಲೈಓವರ್‌…

2 hours ago

ಮಡಿಕೇರಿ| ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್‌…

2 hours ago

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…

3 hours ago