ಮನರಂಜನೆ

ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ನ ಮುಹೂರ್ತ

ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ.

ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ ಇತ್ತೀಚೆಗೆ ’ಮಣಿಕಂಠ’ ಮುಹೂರ್ತ ನಡೆಯಿತು. ತಂಡಕ್ಕೆ ಶುಭ ಹಾರೈಸಲು ಕಾಶಿಯಿಂದ ಸಾಕ್ಷಾತ್ ಎಂಟು ನಾಗಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು. ಈ ಚಿತ್ರವನ್ನು ಅಶ್ವಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ಅಶ್ವಿನಿ ಸಂತೋಷ್‌ ಸಿಂಹ ನಿರ್ಮಾಣ ಮಾಡುವುದರ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಸಂತೋಷ್ ಸಿಂಹ, ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಅಲ್ಲದೆ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಇಬ್ಬರು ಮಕ್ಕಳು ಬಣ್ಣ ಹಚ್ಚುತ್ತಿದ್ದು, ಒಂದು ರೀತಿಯಲ್ಲಿ ಇಡೀ ಕುಟುಂಬ ಚಿತ್ರದಲ್ಲಿ ತೊಡಗಿಕೊಂಡಿದೆ.

ಪೂಜೆ ನಂತರ ಮಾತನಾಡಿದ ನಟ-ನಿರ್ದೇಶಕ ಸಂತೋಷ್‍ ಸಿಂಹ, ‘ಮಣಿಕಂಠನು ಪ್ರತಿಯೊಬ್ಬರ ಜೀವನದಲ್ಲಿ ಆವರಿಸಿಕೊಂಡು ಪವಾಡ ಮಾಡಿದ್ದಾನೆ. ಅದನ್ನು ಅನುಭವಿಸಿದಾಗ ಮಾತ್ರ ತಿಳಿಯುತ್ತದೆ. ಹುಡುಕುತ್ತಾ ಹೋದರೆ ಮುಗಿಯುವುದಿಲ್ಲ. 25 ವರ್ಷ ದೊಡ್ಡಪಾದಕ್ಕೆ ಹೋಗಿ ಭಕ್ತಿಯಿಂದ ಸ್ವಾಮಿ ದರ್ಶನ ಮಾಡಿದ್ದೇನೆ. ನನ್ನ ಬದುಕಲ್ಲಿ ನಡೆದಂತ ಸತ್ಯ ಘಟನೆಗಳು, ಸ್ವಾಮಿಯ ಪವಾಡಗಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಭಕ್ತಿ, ಪವಾಡಗಳ ಜೊತೆಗೆ ತಾಯಿ ಸೆಂಟಿಮೆಂಟ್, ಪ್ರೀತಿ ಎಲ್ಲವೂ ಇರುತ್ತದೆ’ ಎಂದರು.

‘ಮಣಿಕಂಠ’ ಚಿತ್ರದಲ್ಲಿ ಜೀವನ್‌ ಸಿಂಹ, ತನುಶ್ರೀ ಸಿಂಹ, ಬಿ.ಎಸ್.ಮಂಜುಳಾ, ವೈಷ್ಣವಿ ಎಸ್.ಡಿ, ಶರತ್ ಎಸ್.ಎಂ.ಮಮತಾ, ಶಿವಣ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚೇತನ್‌ಕುಮಾರ್ ಸಾಹಿತ್ಯ ರಚಿಸಿರುವ ಐದು ಗೀತೆಗಳಿಗೆ ಸ್ವರೂಪ್ ಆರ್ ಸಂಗೀತ ಸಂಯೋಜಿಸುತಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು, ಶಬರಿಮಲೆ, ಪಂಪ, ದೊಡ್ಡಪಾದ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

6 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

8 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

9 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

10 hours ago