ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ.
ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ ಇತ್ತೀಚೆಗೆ ’ಮಣಿಕಂಠ’ ಮುಹೂರ್ತ ನಡೆಯಿತು. ತಂಡಕ್ಕೆ ಶುಭ ಹಾರೈಸಲು ಕಾಶಿಯಿಂದ ಸಾಕ್ಷಾತ್ ಎಂಟು ನಾಗಸಾಧುಗಳು ಆಗಮಿಸಿದ್ದು ವಿಶೇಷವಾಗಿತ್ತು. ಈ ಚಿತ್ರವನ್ನು ಅಶ್ವಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ಅಶ್ವಿನಿ ಸಂತೋಷ್ ಸಿಂಹ ನಿರ್ಮಾಣ ಮಾಡುವುದರ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಸಂತೋಷ್ ಸಿಂಹ, ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಅಲ್ಲದೆ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಇಬ್ಬರು ಮಕ್ಕಳು ಬಣ್ಣ ಹಚ್ಚುತ್ತಿದ್ದು, ಒಂದು ರೀತಿಯಲ್ಲಿ ಇಡೀ ಕುಟುಂಬ ಚಿತ್ರದಲ್ಲಿ ತೊಡಗಿಕೊಂಡಿದೆ.
ಪೂಜೆ ನಂತರ ಮಾತನಾಡಿದ ನಟ-ನಿರ್ದೇಶಕ ಸಂತೋಷ್ ಸಿಂಹ, ‘ಮಣಿಕಂಠನು ಪ್ರತಿಯೊಬ್ಬರ ಜೀವನದಲ್ಲಿ ಆವರಿಸಿಕೊಂಡು ಪವಾಡ ಮಾಡಿದ್ದಾನೆ. ಅದನ್ನು ಅನುಭವಿಸಿದಾಗ ಮಾತ್ರ ತಿಳಿಯುತ್ತದೆ. ಹುಡುಕುತ್ತಾ ಹೋದರೆ ಮುಗಿಯುವುದಿಲ್ಲ. 25 ವರ್ಷ ದೊಡ್ಡಪಾದಕ್ಕೆ ಹೋಗಿ ಭಕ್ತಿಯಿಂದ ಸ್ವಾಮಿ ದರ್ಶನ ಮಾಡಿದ್ದೇನೆ. ನನ್ನ ಬದುಕಲ್ಲಿ ನಡೆದಂತ ಸತ್ಯ ಘಟನೆಗಳು, ಸ್ವಾಮಿಯ ಪವಾಡಗಳನ್ನು ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಭಕ್ತಿ, ಪವಾಡಗಳ ಜೊತೆಗೆ ತಾಯಿ ಸೆಂಟಿಮೆಂಟ್, ಪ್ರೀತಿ ಎಲ್ಲವೂ ಇರುತ್ತದೆ’ ಎಂದರು.
‘ಮಣಿಕಂಠ’ ಚಿತ್ರದಲ್ಲಿ ಜೀವನ್ ಸಿಂಹ, ತನುಶ್ರೀ ಸಿಂಹ, ಬಿ.ಎಸ್.ಮಂಜುಳಾ, ವೈಷ್ಣವಿ ಎಸ್.ಡಿ, ಶರತ್ ಎಸ್.ಎಂ.ಮಮತಾ, ಶಿವಣ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚೇತನ್ಕುಮಾರ್ ಸಾಹಿತ್ಯ ರಚಿಸಿರುವ ಐದು ಗೀತೆಗಳಿಗೆ ಸ್ವರೂಪ್ ಆರ್ ಸಂಗೀತ ಸಂಯೋಜಿಸುತಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು, ಶಬರಿಮಲೆ, ಪಂಪ, ದೊಡ್ಡಪಾದ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…