ಮನರಂಜನೆ

ಕನ್ನಡಕ್ಕೆ ‘ಕಲ್ಕಿ 2898 AD’ ಚಿತ್ರದ ಸಂಗೀತ ನಿರ್ದೇಶಕ…

ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್‍ ನಾರಾಯಣ್‍ ಇದೀಗ ಕನ್ನಡಕ್ಕೆ ಬಂದಿದ್ದಾರೆ. ವಿನೋದ್‍ ಪ್ರಭಾಕರ್ ಅಭಿನಯದಲ್ಲಿ ಕೆ.ಎಂ. ಚೈತನ್ಯ ನಿರ್ದೇಶಿಸುತ್ತಿರುವ ‘ಬಲರಾಮನ ದಿನಗಳು’ ಚಿತ್ರಕ್ಕೆ ಅವರು ಸಂಗೀತ ಸಂಯೋಜಿಸುತ್ತಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ‘ಬಲರಾಮನ ದಿನಗಳು’ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿತ್ತು. ಈಗ ಅಕ್ಟೋಬರ್ನಲ್ಲಿ ಚಿತ್ರೀಕರಣ ಶುರುವಾಗಲಿದೆ. ಅದಕ್ಕೂ ಮುನ್ನ ಚಿತ್ರತಂಡಕ್ಕೆ ಸಂತೋಷ್‍ ನಾರಾಯಣ್‍ ಸೇರ್ಪಡೆಯಾಗಿದ್ದು, ಇತ್ತೀಚೆಗೆ ಅವರನ್ನು ಅಧಿಕೃತವಾಗಿ ಚಿತ್ರತಂಡಕ್ಕೆ ಬರಮಾಡಿಕೊಳ್ಳಲಾಗಿದೆ.

ಇದುವರೆಗೂ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 50 ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಸಂತೋಷ್‍ ನಾರಾಯಣ್‍ ಅವರಿಗೆ ಸಂಗೀತ ನಿರ್ದೇಶಕರಾಗಿ ‘ಬಲರಾಮನ ದಿನಗಳು’ 51ನೇ ಚಿತ್ರವಾಗಿದೆ. ಈ ಚಿತ್ರದ ಕುರಿತು ಮಾತನಾಡಿದ ಅವರು, ‘ನನ್ನ ತಾಯಿ ಬಡಕುಟುಂಬದಿಂದ ಬಂದವರು. ಅವರನ್ನು ಪೋಷಿಸಿ, ಬೆಳೆಸಿದ್ದು ಅವರ ಪಕ್ಕದ ಮನೆಯಲ್ಲಿದ್ದ ಕನ್ನಡದವರು. ನನ್ನ ತಾಯಿ ಚೆನ್ನಾಗಿ ಕನ್ನಡ ಮಾತಾಡುತ್ತಾರೆ. ಕನ್ನಡದವರ ಪ್ರೀತಿಯಿಂದ ಇವತ್ತು ನಾನು ನಿಮ್ಮ ಎದುರು ಇಲ್ಲಿ ಬಂದು ನಿಂತಿದ್ದೇನೆ. ಇದಕ್ಕೂ ಮೊದಲು ರಘು ದೀಕ್ಷಿತ್‍ ಸಂಗೀತ ನಿರ್ದೇಶನದಲ್ಲಿ ಒಂದು ಚಿತ್ರಕ್ಕೆ ಪ್ರೋಗ್ರಾಮಿಂಗ್ ಮಾಡಿದ್ದೆ. ಈಗ ಮೊದಲ ಬಾರಿಗೆ ಕನ್ನಡ ಚಿತ್ರವೊಂದಕ್ಕೆ ಸಂಗೀತ ಸಂಯೋಜಿಸುತ್ತಿದ್ದೇನೆ. ಚಿತ್ರದ ಸಂಗೀತ ಎಲ್ಲರಿಗೂ ಇಷ್ಟವಾಗುತ್ತದೆ ಎಂದು ನಂಬಿದ್ದೇನೆ’ ಎಂದರು.

ವಿನೋದ್‍ ಪ್ರಭಾಕರ್‍ ಮಾತನಾಡಿ, ‘ಸಂತೋಷ್‍ ನಾರಾಯಣ್‍ ಯಾರು ಎಂದು ಬಹಳಷ್ಟು ಜನರಿಗೆ ಗೊತ್ತಿಲ್ಲದಿರಬಹುದು, ಜನ ಅವರ ಮುಖ ನೋಡದಿರಬಹುದು. ಆದರೆ, ಗ್ಯಾಂಗ್‍ಸ್ಟರ್‍ ಸಿನಿಮಾ ಅಂತ ಬಂದರೆ, ಅವರು ನೆನಪಾಗ್ತಾರೆ. ಅವರ ಸಂಗೀತ ನೆನಪಿಗೆ ಬರುತ್ತದೆ. ಸಂತೋಷ್‍ ಅವರನ್ನು ಕರೆತರುವುದು ಅಷ್ಟು ಸುಲಭವಾಗಿರಲಿಲ್ಲ. ಬಹಳ ಕಷ್ಟಪಟ್ಟು ಅವರನ್ನು ಕರೆದುಕೊಂಡು ಬಂದಿದ್ದೇವೆ. ‘ಕಲ್ಕಿ’ ಬಿಡುಗಡೆಗೂ ಮೊದಲೇ, ಮೇ ತಿಂಗಳಲ್ಲಿ ಅವರನ್ನು ಮಾತನಾಡಿಸಿದ್ದೆವು. ಅವರಿಗೆ ಚಿತ್ರಕಥೆ ರೀಡಿಂಗ್‍ ಕೊಡುತ್ತಿದ್ದಂತೆಯೇ ಒಪ್ಪಿಕೊಂಡರು’ ಎಂದರು.

ಇದು ನೈಜ ಘಟನೆಯನ್ನಾಧರಿಸಿದ ಚಿತ್ರವಲ್ಲ ಎನ್ನುವ ಚೈತನ್ಯ, ‘ಇದು 80-90ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಇದೊಂದು ಕಾಲ್ಪನಿಕ ಕಥೆ. ವಿನೋದ್‍ ಪ್ರಭಾಕರ್‍ ಅವರ ಜೊತೆಗೆ ಕೆಲಸ ಮಾಡುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ’ ಎಂದರು.

‘ಬಲರಾಮನ ದಿನಗಳು’ ಚಿತ್ರವನ್ನು ಪದ್ಮಾವತಿ ಫಿಲಂಸ್ ಬ್ಯಾನರ್‍ನಡಿ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ವೈರಮುಡಿ ಬ್ರಹ್ಮೋತ್ಸವಕ್ಕೆ ಕ್ಷಣಗಣನೆ : ವೈರಮುಡಿ ಆಭರಣ ತಲೆಮೇಲೆ ಹೊತ್ತು ತಂದ ಡಿಸಿ, ಎಸ್‌ಪಿ

ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…

10 mins ago

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಶಿಕ್ಷಕಿ!

ಎಚ್‌.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…

58 mins ago

ದೇಶದಲ್ಲಿ ಸಾಕಷ್ಟು ತೈಲ ದಾಸ್ತಾನು : ವಾಣಿಜ್ಯ ಅನಿಲ ಪೂರೈಕೆಯಲ್ಲಿ ಶೇ.70%ಕ್ಕೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…

1 hour ago

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…

2 hours ago

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

3 hours ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

5 hours ago