ಮನರಂಜನೆ

ಕನ್ನಡಕ್ಕೆ ‘ಕಲ್ಕಿ 2898 AD’ ಚಿತ್ರದ ಸಂಗೀತ ನಿರ್ದೇಶಕ…

ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್‍ ನಾರಾಯಣ್‍ ಇದೀಗ ಕನ್ನಡಕ್ಕೆ ಬಂದಿದ್ದಾರೆ. ವಿನೋದ್‍ ಪ್ರಭಾಕರ್ ಅಭಿನಯದಲ್ಲಿ ಕೆ.ಎಂ. ಚೈತನ್ಯ ನಿರ್ದೇಶಿಸುತ್ತಿರುವ ‘ಬಲರಾಮನ ದಿನಗಳು’ ಚಿತ್ರಕ್ಕೆ ಅವರು ಸಂಗೀತ ಸಂಯೋಜಿಸುತ್ತಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ‘ಬಲರಾಮನ ದಿನಗಳು’ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿತ್ತು. ಈಗ ಅಕ್ಟೋಬರ್ನಲ್ಲಿ ಚಿತ್ರೀಕರಣ ಶುರುವಾಗಲಿದೆ. ಅದಕ್ಕೂ ಮುನ್ನ ಚಿತ್ರತಂಡಕ್ಕೆ ಸಂತೋಷ್‍ ನಾರಾಯಣ್‍ ಸೇರ್ಪಡೆಯಾಗಿದ್ದು, ಇತ್ತೀಚೆಗೆ ಅವರನ್ನು ಅಧಿಕೃತವಾಗಿ ಚಿತ್ರತಂಡಕ್ಕೆ ಬರಮಾಡಿಕೊಳ್ಳಲಾಗಿದೆ.

ಇದುವರೆಗೂ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 50 ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಸಂತೋಷ್‍ ನಾರಾಯಣ್‍ ಅವರಿಗೆ ಸಂಗೀತ ನಿರ್ದೇಶಕರಾಗಿ ‘ಬಲರಾಮನ ದಿನಗಳು’ 51ನೇ ಚಿತ್ರವಾಗಿದೆ. ಈ ಚಿತ್ರದ ಕುರಿತು ಮಾತನಾಡಿದ ಅವರು, ‘ನನ್ನ ತಾಯಿ ಬಡಕುಟುಂಬದಿಂದ ಬಂದವರು. ಅವರನ್ನು ಪೋಷಿಸಿ, ಬೆಳೆಸಿದ್ದು ಅವರ ಪಕ್ಕದ ಮನೆಯಲ್ಲಿದ್ದ ಕನ್ನಡದವರು. ನನ್ನ ತಾಯಿ ಚೆನ್ನಾಗಿ ಕನ್ನಡ ಮಾತಾಡುತ್ತಾರೆ. ಕನ್ನಡದವರ ಪ್ರೀತಿಯಿಂದ ಇವತ್ತು ನಾನು ನಿಮ್ಮ ಎದುರು ಇಲ್ಲಿ ಬಂದು ನಿಂತಿದ್ದೇನೆ. ಇದಕ್ಕೂ ಮೊದಲು ರಘು ದೀಕ್ಷಿತ್‍ ಸಂಗೀತ ನಿರ್ದೇಶನದಲ್ಲಿ ಒಂದು ಚಿತ್ರಕ್ಕೆ ಪ್ರೋಗ್ರಾಮಿಂಗ್ ಮಾಡಿದ್ದೆ. ಈಗ ಮೊದಲ ಬಾರಿಗೆ ಕನ್ನಡ ಚಿತ್ರವೊಂದಕ್ಕೆ ಸಂಗೀತ ಸಂಯೋಜಿಸುತ್ತಿದ್ದೇನೆ. ಚಿತ್ರದ ಸಂಗೀತ ಎಲ್ಲರಿಗೂ ಇಷ್ಟವಾಗುತ್ತದೆ ಎಂದು ನಂಬಿದ್ದೇನೆ’ ಎಂದರು.

ವಿನೋದ್‍ ಪ್ರಭಾಕರ್‍ ಮಾತನಾಡಿ, ‘ಸಂತೋಷ್‍ ನಾರಾಯಣ್‍ ಯಾರು ಎಂದು ಬಹಳಷ್ಟು ಜನರಿಗೆ ಗೊತ್ತಿಲ್ಲದಿರಬಹುದು, ಜನ ಅವರ ಮುಖ ನೋಡದಿರಬಹುದು. ಆದರೆ, ಗ್ಯಾಂಗ್‍ಸ್ಟರ್‍ ಸಿನಿಮಾ ಅಂತ ಬಂದರೆ, ಅವರು ನೆನಪಾಗ್ತಾರೆ. ಅವರ ಸಂಗೀತ ನೆನಪಿಗೆ ಬರುತ್ತದೆ. ಸಂತೋಷ್‍ ಅವರನ್ನು ಕರೆತರುವುದು ಅಷ್ಟು ಸುಲಭವಾಗಿರಲಿಲ್ಲ. ಬಹಳ ಕಷ್ಟಪಟ್ಟು ಅವರನ್ನು ಕರೆದುಕೊಂಡು ಬಂದಿದ್ದೇವೆ. ‘ಕಲ್ಕಿ’ ಬಿಡುಗಡೆಗೂ ಮೊದಲೇ, ಮೇ ತಿಂಗಳಲ್ಲಿ ಅವರನ್ನು ಮಾತನಾಡಿಸಿದ್ದೆವು. ಅವರಿಗೆ ಚಿತ್ರಕಥೆ ರೀಡಿಂಗ್‍ ಕೊಡುತ್ತಿದ್ದಂತೆಯೇ ಒಪ್ಪಿಕೊಂಡರು’ ಎಂದರು.

ಇದು ನೈಜ ಘಟನೆಯನ್ನಾಧರಿಸಿದ ಚಿತ್ರವಲ್ಲ ಎನ್ನುವ ಚೈತನ್ಯ, ‘ಇದು 80-90ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಇದೊಂದು ಕಾಲ್ಪನಿಕ ಕಥೆ. ವಿನೋದ್‍ ಪ್ರಭಾಕರ್‍ ಅವರ ಜೊತೆಗೆ ಕೆಲಸ ಮಾಡುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ’ ಎಂದರು.

‘ಬಲರಾಮನ ದಿನಗಳು’ ಚಿತ್ರವನ್ನು ಪದ್ಮಾವತಿ ಫಿಲಂಸ್ ಬ್ಯಾನರ್‍ನಡಿ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

1 hour ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

1 hour ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

1 hour ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

2 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

2 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

2 hours ago