ಮನರಂಜನೆ

ಕನ್ನಡಕ್ಕೆ ‘ಕಲ್ಕಿ 2898 AD’ ಚಿತ್ರದ ಸಂಗೀತ ನಿರ್ದೇಶಕ…

ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್‍ ನಾರಾಯಣ್‍ ಇದೀಗ ಕನ್ನಡಕ್ಕೆ ಬಂದಿದ್ದಾರೆ. ವಿನೋದ್‍ ಪ್ರಭಾಕರ್ ಅಭಿನಯದಲ್ಲಿ ಕೆ.ಎಂ. ಚೈತನ್ಯ ನಿರ್ದೇಶಿಸುತ್ತಿರುವ ‘ಬಲರಾಮನ ದಿನಗಳು’ ಚಿತ್ರಕ್ಕೆ ಅವರು ಸಂಗೀತ ಸಂಯೋಜಿಸುತ್ತಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ‘ಬಲರಾಮನ ದಿನಗಳು’ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿತ್ತು. ಈಗ ಅಕ್ಟೋಬರ್ನಲ್ಲಿ ಚಿತ್ರೀಕರಣ ಶುರುವಾಗಲಿದೆ. ಅದಕ್ಕೂ ಮುನ್ನ ಚಿತ್ರತಂಡಕ್ಕೆ ಸಂತೋಷ್‍ ನಾರಾಯಣ್‍ ಸೇರ್ಪಡೆಯಾಗಿದ್ದು, ಇತ್ತೀಚೆಗೆ ಅವರನ್ನು ಅಧಿಕೃತವಾಗಿ ಚಿತ್ರತಂಡಕ್ಕೆ ಬರಮಾಡಿಕೊಳ್ಳಲಾಗಿದೆ.

ಇದುವರೆಗೂ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 50 ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಸಂತೋಷ್‍ ನಾರಾಯಣ್‍ ಅವರಿಗೆ ಸಂಗೀತ ನಿರ್ದೇಶಕರಾಗಿ ‘ಬಲರಾಮನ ದಿನಗಳು’ 51ನೇ ಚಿತ್ರವಾಗಿದೆ. ಈ ಚಿತ್ರದ ಕುರಿತು ಮಾತನಾಡಿದ ಅವರು, ‘ನನ್ನ ತಾಯಿ ಬಡಕುಟುಂಬದಿಂದ ಬಂದವರು. ಅವರನ್ನು ಪೋಷಿಸಿ, ಬೆಳೆಸಿದ್ದು ಅವರ ಪಕ್ಕದ ಮನೆಯಲ್ಲಿದ್ದ ಕನ್ನಡದವರು. ನನ್ನ ತಾಯಿ ಚೆನ್ನಾಗಿ ಕನ್ನಡ ಮಾತಾಡುತ್ತಾರೆ. ಕನ್ನಡದವರ ಪ್ರೀತಿಯಿಂದ ಇವತ್ತು ನಾನು ನಿಮ್ಮ ಎದುರು ಇಲ್ಲಿ ಬಂದು ನಿಂತಿದ್ದೇನೆ. ಇದಕ್ಕೂ ಮೊದಲು ರಘು ದೀಕ್ಷಿತ್‍ ಸಂಗೀತ ನಿರ್ದೇಶನದಲ್ಲಿ ಒಂದು ಚಿತ್ರಕ್ಕೆ ಪ್ರೋಗ್ರಾಮಿಂಗ್ ಮಾಡಿದ್ದೆ. ಈಗ ಮೊದಲ ಬಾರಿಗೆ ಕನ್ನಡ ಚಿತ್ರವೊಂದಕ್ಕೆ ಸಂಗೀತ ಸಂಯೋಜಿಸುತ್ತಿದ್ದೇನೆ. ಚಿತ್ರದ ಸಂಗೀತ ಎಲ್ಲರಿಗೂ ಇಷ್ಟವಾಗುತ್ತದೆ ಎಂದು ನಂಬಿದ್ದೇನೆ’ ಎಂದರು.

ವಿನೋದ್‍ ಪ್ರಭಾಕರ್‍ ಮಾತನಾಡಿ, ‘ಸಂತೋಷ್‍ ನಾರಾಯಣ್‍ ಯಾರು ಎಂದು ಬಹಳಷ್ಟು ಜನರಿಗೆ ಗೊತ್ತಿಲ್ಲದಿರಬಹುದು, ಜನ ಅವರ ಮುಖ ನೋಡದಿರಬಹುದು. ಆದರೆ, ಗ್ಯಾಂಗ್‍ಸ್ಟರ್‍ ಸಿನಿಮಾ ಅಂತ ಬಂದರೆ, ಅವರು ನೆನಪಾಗ್ತಾರೆ. ಅವರ ಸಂಗೀತ ನೆನಪಿಗೆ ಬರುತ್ತದೆ. ಸಂತೋಷ್‍ ಅವರನ್ನು ಕರೆತರುವುದು ಅಷ್ಟು ಸುಲಭವಾಗಿರಲಿಲ್ಲ. ಬಹಳ ಕಷ್ಟಪಟ್ಟು ಅವರನ್ನು ಕರೆದುಕೊಂಡು ಬಂದಿದ್ದೇವೆ. ‘ಕಲ್ಕಿ’ ಬಿಡುಗಡೆಗೂ ಮೊದಲೇ, ಮೇ ತಿಂಗಳಲ್ಲಿ ಅವರನ್ನು ಮಾತನಾಡಿಸಿದ್ದೆವು. ಅವರಿಗೆ ಚಿತ್ರಕಥೆ ರೀಡಿಂಗ್‍ ಕೊಡುತ್ತಿದ್ದಂತೆಯೇ ಒಪ್ಪಿಕೊಂಡರು’ ಎಂದರು.

ಇದು ನೈಜ ಘಟನೆಯನ್ನಾಧರಿಸಿದ ಚಿತ್ರವಲ್ಲ ಎನ್ನುವ ಚೈತನ್ಯ, ‘ಇದು 80-90ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಇದೊಂದು ಕಾಲ್ಪನಿಕ ಕಥೆ. ವಿನೋದ್‍ ಪ್ರಭಾಕರ್‍ ಅವರ ಜೊತೆಗೆ ಕೆಲಸ ಮಾಡುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ’ ಎಂದರು.

‘ಬಲರಾಮನ ದಿನಗಳು’ ಚಿತ್ರವನ್ನು ಪದ್ಮಾವತಿ ಫಿಲಂಸ್ ಬ್ಯಾನರ್‍ನಡಿ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

45 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago