ಮನರಂಜನೆ

‘ದಿ ರಾಜಾಸಾಬ್’ ಟ್ರೈಲರ್ ಬಿಡುಗಡೆ: 2026ರ ಜನವರಿ 09ಕ್ಕೆ ಚಿತ್ರ

ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ದಿ ರಾಜಾಸಾಬ್‍’ ಚಿತ್ರವು ಮತ್ತೊಮ್ಮೆ ಮುಂದಕ್ಕೆ ಹೋಗಿದೆ. ಇದಕ್ಕೂ ಮೊದಲು ಚಿತ್ರವು ಡಿಸೆಂಬರ್‍.05ರಂದು ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಈಗ ಚಿತ್ರವು ಒಂದು ತಿಂಗಳು ಮುಂದಕ್ಕೆ ಹೋಗಿದ್ದು, 2026ರ ಜನವರಿ.09ರಂದು ಬಿಡುಗಡೆಯಾಗಲಿದೆ.

ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಭಾಸ್‌ ಕಾಣಿಸಿಕೊಂಡಿದ್ದಾರೆ. ಹಾರರ್‌ ಕಾಮಿಡಿ ಶೈಲಿಯ ಈ ಚಿತ್ರವು ಭಾರತದ ಅತಿದೊಡ್ಡ ಹಾರರ್ ಫ್ಯಾಂಟಸಿ ಡ್ರಾಮಾ ಎಂದು ಬಿಂಬಿತವಾಗಿದೆ. ‘ದಿ ರಾಜಸಾಬ್‍’ ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್‍ ಬಂಗಲೆಯ ಸೆಟ್‍ ನಿರ್ಮಿಸಲಾಗಿದ್ದು, ಆ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.

ಇದನ್ನು ಓದು: ಸೆಟ್ಟೇರಿತು ಶ್ರೀಮುರಳಿ ಅಭಿನಯದ ಹೊಸ ಚಿತ್ರ ‘ಪರಾಕ್‍’

ಸಿನಿಮಾ ಬಿಡುಗಡೆಗೆ ಸುಮಾರು ಮೂರು ತಿಂಗಳ ಮುಂಚೆಯೇ ಮೂರು ನಿಮಿಷಗಳಿಗಿಂತ ಹೆಚ್ಚಿನ ಅವಧಿಯ ಟ್ರೇಲರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದಲ್ಲೇನಿರಬಹುದು ಎಂದು ಹಿಂಟ್‍ ನೀಡಿದೆ. ಟ್ರೈಲರ್ ಬಿಡುಗಡೆಯನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದ 105 ಚಿತ್ರಮಂದಿರಗಳಲ್ಲಿ ಸಾಮೂಹಿಕ ಪ್ರದರ್ಶನಗಳೊಂದಿಗೆ ಬಿಡುಗಡೆ ಮಾಡಲಾಯಿತು.

‘ದಿ ರಾಜಾಸಾಬ್‍’ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಸಂಜಯ್ ದತ್, ಬೋಮನ್ ಇರಾನಿ, ಜರೀನಾ ವಹಾಬ್, ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿಧಿ ಕುಮಾರ್ ನಟಿಸಿದ್ದಾರೆ. ಟಿ.ಜಿ. ವಿಶ್ವ ಪ್ರಸಾದ್ ಮತ್ತು ಕೃತಿ ಪ್ರಸಾದ್, ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುವ ಈ ಚಿತ್ರಕ್ಕೆ ಥಮನ್ ಸಂಗೀತ ನೀಡಿದ್ದಾರೆ

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವೇಳೆ ಹೃದಯಾಘಾತ: ಆರೋಗ್ಯ ಇಲಾಖೆ ನೌಕರ ಸಾವು

ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್‌ ಎಂಬುವವರೇ ಮೃತಪಟ್ಟ…

11 mins ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…

36 mins ago

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

55 mins ago

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…

1 hour ago

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

1 hour ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

2 hours ago