ಮನರಂಜನೆ

‘ದಿ ರಾಜಾಸಾಬ್’ ಟ್ರೈಲರ್ ಬಿಡುಗಡೆ: 2026ರ ಜನವರಿ 09ಕ್ಕೆ ಚಿತ್ರ

ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ದಿ ರಾಜಾಸಾಬ್‍’ ಚಿತ್ರವು ಮತ್ತೊಮ್ಮೆ ಮುಂದಕ್ಕೆ ಹೋಗಿದೆ. ಇದಕ್ಕೂ ಮೊದಲು ಚಿತ್ರವು ಡಿಸೆಂಬರ್‍.05ರಂದು ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಈಗ ಚಿತ್ರವು ಒಂದು ತಿಂಗಳು ಮುಂದಕ್ಕೆ ಹೋಗಿದ್ದು, 2026ರ ಜನವರಿ.09ರಂದು ಬಿಡುಗಡೆಯಾಗಲಿದೆ.

ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಭಾಸ್‌ ಕಾಣಿಸಿಕೊಂಡಿದ್ದಾರೆ. ಹಾರರ್‌ ಕಾಮಿಡಿ ಶೈಲಿಯ ಈ ಚಿತ್ರವು ಭಾರತದ ಅತಿದೊಡ್ಡ ಹಾರರ್ ಫ್ಯಾಂಟಸಿ ಡ್ರಾಮಾ ಎಂದು ಬಿಂಬಿತವಾಗಿದೆ. ‘ದಿ ರಾಜಸಾಬ್‍’ ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್‍ ಬಂಗಲೆಯ ಸೆಟ್‍ ನಿರ್ಮಿಸಲಾಗಿದ್ದು, ಆ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.

ಇದನ್ನು ಓದು: ಸೆಟ್ಟೇರಿತು ಶ್ರೀಮುರಳಿ ಅಭಿನಯದ ಹೊಸ ಚಿತ್ರ ‘ಪರಾಕ್‍’

ಸಿನಿಮಾ ಬಿಡುಗಡೆಗೆ ಸುಮಾರು ಮೂರು ತಿಂಗಳ ಮುಂಚೆಯೇ ಮೂರು ನಿಮಿಷಗಳಿಗಿಂತ ಹೆಚ್ಚಿನ ಅವಧಿಯ ಟ್ರೇಲರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದಲ್ಲೇನಿರಬಹುದು ಎಂದು ಹಿಂಟ್‍ ನೀಡಿದೆ. ಟ್ರೈಲರ್ ಬಿಡುಗಡೆಯನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದ 105 ಚಿತ್ರಮಂದಿರಗಳಲ್ಲಿ ಸಾಮೂಹಿಕ ಪ್ರದರ್ಶನಗಳೊಂದಿಗೆ ಬಿಡುಗಡೆ ಮಾಡಲಾಯಿತು.

‘ದಿ ರಾಜಾಸಾಬ್‍’ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಸಂಜಯ್ ದತ್, ಬೋಮನ್ ಇರಾನಿ, ಜರೀನಾ ವಹಾಬ್, ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿಧಿ ಕುಮಾರ್ ನಟಿಸಿದ್ದಾರೆ. ಟಿ.ಜಿ. ವಿಶ್ವ ಪ್ರಸಾದ್ ಮತ್ತು ಕೃತಿ ಪ್ರಸಾದ್, ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುವ ಈ ಚಿತ್ರಕ್ಕೆ ಥಮನ್ ಸಂಗೀತ ನೀಡಿದ್ದಾರೆ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago