ನಾಲ್ಕು ವರ್ಷಗಳ ಹಿಂದೆ ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿ ಅತಿ ಹೆಚ್ಚು ವೀಕ್ಷಣೆ ಪಡೆದ ಕಿರುಚಿತ್ರವೆಂದರೆ, ಅದು ‘ಅಮೃತಾಂಜನ್’. ‘ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ’ ಚಿತ್ರವನ್ನು ನಿರ್ದೇಶಿಸಿದ್ದ ಜ್ಯೋತಿ ರಾವ್ ಮೋಹಿತ್ ಅಲಿಯಾಸ್ ಜೆ.ಆರ್.ಎಂ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಕಿರುಚಿತ್ರ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿತ್ತು.
ಇದೀಗ ಅದೇ ಪರಿಕಲ್ಪನೆಯೊಂದಿಗೆ ಜೆ.ಆರ್.ಎಂ, ‘ಅಮೃತ -ಅಂಜನ್’ ಎಂಬ ಚಲನಚಿತ್ರ ನಿರ್ದೇಶನ ಮಾಡಿದ್ದಾರೆ. ಆ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಬಿಡುಗಡೆ ದಿನಾಂಕ ಘೋಷಣೆಗೆಂದೇ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಕಿರುಚಿತ್ರಗಳಲ್ಲಿ ಹೆಸರು ಮಾಡಿರುವ ಸುಧಾಕರ ಗೌಡ, ಗೌರವ್ ಶೆಟ್ಡಿ, ಕಾರ್ತೀಕ್ ರುವಾರಿ, ಪಾಯಲ್ ಚಂಗಪ್ಪ, ಪಲ್ಲವಿ ಪರ್ವ, ಚೇತನ್ ದುರ್ಗ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನು ಓದಿ:‘ಮಹಾರಾಜ ಆಗೆಂದು…’ ವಿನಯ್ಗೆ ಹರಸಿದ ಅರುಣಾ ಬಾಲರಾಜ್
‘ಅಮೃತ -ಅಂಜನ್’ ಚಿತ್ರದ ಕುರಿತು ಮಾತನಾಡುವ ಜೆ.ಆರ್.ಎಂ, ‘ನಮ್ಮ ಮೋಹಿತೆ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದ್ದ ಕಿರುಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ಹಾಗಾಗಿ, ಅದೇ ಎಳೆ ಇಟ್ಟುಕೊಂಡು ಪಕ್ಕಾ ಕಮರ್ಷಿಯಲ್ ಚಿತ್ರ ಮಾಡಿದ್ದೇವೆ. ಈ ಹಿಂದೆ ನಾನು ನಿರ್ದೇಶಿಸಿದ್ದ ‘ಸೋಡಾಬುಡ್ಡಿ’ ಚಿತ್ರ ಸಾಧಾರಣ ಪ್ರತಿಕ್ರಿಯೆ ಪಡೆದಿತ್ತು. ಇದು ಎರಡನೇ ಚಿತ್ರ. ಇದೊಂದು ಮನರಂಜನಾತ್ಮಕ ಚಿತ್ರ. ತಂದೆ-ಮಗನ ಎಮೋಷನ್ಸ್ ಚಿತ್ರದಲ್ಲಿದ್ದು, ಸುಧಾಕರ್ ಹಾಗೂ ನವೀನ್ ಪಡೀಲ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಕಾಮಿಡಿ ಇದೆ. ನಮ್ಮ ಚಿತ್ರಕ್ಕೆ ಸುಧಾಮೂರ್ತಿ ಹಾಗೂ ಜಾಕಿ ಚಾನ್ ಸ್ಪೂರ್ತಿ. ಚಿತ್ರಕ್ಕೆ ಮಂಗಳೂರು, ಬೆಂಗಳೂರು, ತೀರ್ಥಳ್ಳಿ ಸುತ್ತಮುತ್ತ 68 ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ. ಈ ಚಿತ್ರಕ್ಕೆ ‘ಅಮೃತಾಂಜನ್’ ಎಂಬ ಟೈಟಲ್ ಸಿಗಲಿಲ್ಲ. ಹಾಗಾಗಿ ‘ಅಮೃತ -ಅಂಜನ್’ ಎಂದಿಟ್ಟಿದ್ದೇವೆ ಎಂದರು.
‘ಅಮೃತ -ಅಂಜನ್’ ಚಿತ್ರಕ್ಕೆ ಸುಮಂತ್ ಆಚಾರ್ಯ ಛಾಯಾಗ್ರಹಣ ಮತ್ತು ರಾಘವೇಂದ್ರ ಸಂಗೀತ ಸಂಯೋಜಿಸಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…