ಮನರಂಜನೆ

ಕಿರುಚಿತ್ರ ‘ಅಮೃತಾಂಜನ್’ ಈಗ ಸಿನಿಮಾ ಆಯ್ತು …

ನಾಲ್ಕು ವರ್ಷಗಳ ಹಿಂದೆ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿ ಅತಿ ಹೆಚ್ಚು ವೀಕ್ಷಣೆ ಪಡೆದ ಕಿರುಚಿತ್ರವೆಂದರೆ, ಅದು ‘ಅಮೃತಾಂಜನ್’. ‘ದಿ ಗ್ರೇಟ್‍ ಸ್ಟೋರಿ ಆಫ್‍ ಸೋಡಾಬುಡ್ಡಿ’ ಚಿತ್ರವನ್ನು ನಿರ್ದೇಶಿಸಿದ್ದ ಜ್ಯೋತಿ ರಾವ್‍ ಮೋಹಿತ್‍ ಅಲಿಯಾಸ್‍ ಜೆ.ಆರ್.ಎಂ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಕಿರುಚಿತ್ರ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿತ್ತು.

ಇದೀಗ ಅದೇ ಪರಿಕಲ್ಪನೆಯೊಂದಿಗೆ ಜೆ.ಆರ್.ಎಂ, ‘ಅಮೃತ -ಅಂಜನ್’ ಎಂಬ ಚಲನಚಿತ್ರ ನಿರ್ದೇಶನ ಮಾಡಿದ್ದಾರೆ. ಆ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಬಿಡುಗಡೆ ದಿನಾಂಕ ಘೋಷಣೆಗೆಂದೇ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಕಿರುಚಿತ್ರಗಳಲ್ಲಿ ಹೆಸರು ಮಾಡಿರುವ ಸುಧಾಕರ ಗೌಡ, ಗೌರವ್ ಶೆಟ್ಡಿ, ಕಾರ್ತೀಕ್ ರುವಾರಿ, ಪಾಯಲ್ ಚಂಗಪ್ಪ, ಪಲ್ಲವಿ ಪರ್ವ, ಚೇತನ್‍ ದುರ್ಗ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ‌.

ಇದನ್ನು ಓದಿ:‘ಮಹಾರಾಜ ಆಗೆಂದು…’ ವಿನಯ್‍ಗೆ ಹರಸಿದ ಅರುಣಾ ಬಾಲರಾಜ್‍

‘ಅಮೃತ -ಅಂಜನ್’ ಚಿತ್ರದ ಕುರಿತು ಮಾತನಾಡುವ ಜೆ.ಆರ್.ಎಂ, ‘ನಮ್ಮ ಮೋಹಿತೆ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಯಾಗಿದ್ದ ಕಿರುಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ಹಾಗಾಗಿ, ಅದೇ ಎಳೆ ಇಟ್ಟುಕೊಂಡು ಪಕ್ಕಾ ಕಮರ್ಷಿಯಲ್ ಚಿತ್ರ ಮಾಡಿದ್ದೇವೆ. ಈ ಹಿಂದೆ ನಾನು ನಿರ್ದೇಶಿಸಿದ್ದ ‘ಸೋಡಾಬುಡ್ಡಿ’ ಚಿತ್ರ ಸಾಧಾರಣ ಪ್ರತಿಕ್ರಿಯೆ ಪಡೆದಿತ್ತು. ಇದು ಎರಡನೇ ಚಿತ್ರ. ಇದೊಂದು ಮನರಂಜನಾತ್ಮಕ ಚಿತ್ರ. ತಂದೆ-ಮಗನ ಎಮೋಷನ್ಸ್ ಚಿತ್ರದಲ್ಲಿದ್ದು, ಸುಧಾಕರ್ ಹಾಗೂ ನವೀನ್ ಪಡೀಲ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಕಾಮಿಡಿ ಇದೆ. ನಮ್ಮ ಚಿತ್ರಕ್ಕೆ ಸುಧಾಮೂರ್ತಿ ಹಾಗೂ ಜಾಕಿ ಚಾನ್ ಸ್ಪೂರ್ತಿ. ಚಿತ್ರಕ್ಕೆ ಮಂಗಳೂರು, ಬೆಂಗಳೂರು, ತೀರ್ಥಳ್ಳಿ ಸುತ್ತಮುತ್ತ 68 ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ. ಈ ಚಿತ್ರಕ್ಕೆ ‘ಅಮೃತಾಂಜನ್’ ಎಂಬ ಟೈಟಲ್ ಸಿಗಲಿಲ್ಲ. ಹಾಗಾಗಿ ‘ಅಮೃತ -ಅಂಜನ್’ ಎಂದಿಟ್ಟಿದ್ದೇವೆ ಎಂದರು.

‘ಅಮೃತ -ಅಂಜನ್’ ಚಿತ್ರಕ್ಕೆ ಸುಮಂತ್ ಆಚಾರ್ಯ ಛಾಯಾಗ್ರಹಣ ಮತ್ತು ರಾಘವೇಂದ್ರ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago