ನಾಲ್ಕು ವರ್ಷಗಳ ಹಿಂದೆ ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿ ಅತಿ ಹೆಚ್ಚು ವೀಕ್ಷಣೆ ಪಡೆದ ಕಿರುಚಿತ್ರವೆಂದರೆ, ಅದು ‘ಅಮೃತಾಂಜನ್’. ‘ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ’ ಚಿತ್ರವನ್ನು ನಿರ್ದೇಶಿಸಿದ್ದ ಜ್ಯೋತಿ ರಾವ್ ಮೋಹಿತ್ ಅಲಿಯಾಸ್ ಜೆ.ಆರ್.ಎಂ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಕಿರುಚಿತ್ರ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿತ್ತು.
ಇದೀಗ ಅದೇ ಪರಿಕಲ್ಪನೆಯೊಂದಿಗೆ ಜೆ.ಆರ್.ಎಂ, ‘ಅಮೃತ -ಅಂಜನ್’ ಎಂಬ ಚಲನಚಿತ್ರ ನಿರ್ದೇಶನ ಮಾಡಿದ್ದಾರೆ. ಆ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಬಿಡುಗಡೆ ದಿನಾಂಕ ಘೋಷಣೆಗೆಂದೇ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಕಿರುಚಿತ್ರಗಳಲ್ಲಿ ಹೆಸರು ಮಾಡಿರುವ ಸುಧಾಕರ ಗೌಡ, ಗೌರವ್ ಶೆಟ್ಡಿ, ಕಾರ್ತೀಕ್ ರುವಾರಿ, ಪಾಯಲ್ ಚಂಗಪ್ಪ, ಪಲ್ಲವಿ ಪರ್ವ, ಚೇತನ್ ದುರ್ಗ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನು ಓದಿ:‘ಮಹಾರಾಜ ಆಗೆಂದು…’ ವಿನಯ್ಗೆ ಹರಸಿದ ಅರುಣಾ ಬಾಲರಾಜ್
‘ಅಮೃತ -ಅಂಜನ್’ ಚಿತ್ರದ ಕುರಿತು ಮಾತನಾಡುವ ಜೆ.ಆರ್.ಎಂ, ‘ನಮ್ಮ ಮೋಹಿತೆ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದ್ದ ಕಿರುಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ಹಾಗಾಗಿ, ಅದೇ ಎಳೆ ಇಟ್ಟುಕೊಂಡು ಪಕ್ಕಾ ಕಮರ್ಷಿಯಲ್ ಚಿತ್ರ ಮಾಡಿದ್ದೇವೆ. ಈ ಹಿಂದೆ ನಾನು ನಿರ್ದೇಶಿಸಿದ್ದ ‘ಸೋಡಾಬುಡ್ಡಿ’ ಚಿತ್ರ ಸಾಧಾರಣ ಪ್ರತಿಕ್ರಿಯೆ ಪಡೆದಿತ್ತು. ಇದು ಎರಡನೇ ಚಿತ್ರ. ಇದೊಂದು ಮನರಂಜನಾತ್ಮಕ ಚಿತ್ರ. ತಂದೆ-ಮಗನ ಎಮೋಷನ್ಸ್ ಚಿತ್ರದಲ್ಲಿದ್ದು, ಸುಧಾಕರ್ ಹಾಗೂ ನವೀನ್ ಪಡೀಲ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಕಾಮಿಡಿ ಇದೆ. ನಮ್ಮ ಚಿತ್ರಕ್ಕೆ ಸುಧಾಮೂರ್ತಿ ಹಾಗೂ ಜಾಕಿ ಚಾನ್ ಸ್ಪೂರ್ತಿ. ಚಿತ್ರಕ್ಕೆ ಮಂಗಳೂರು, ಬೆಂಗಳೂರು, ತೀರ್ಥಳ್ಳಿ ಸುತ್ತಮುತ್ತ 68 ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ. ಈ ಚಿತ್ರಕ್ಕೆ ‘ಅಮೃತಾಂಜನ್’ ಎಂಬ ಟೈಟಲ್ ಸಿಗಲಿಲ್ಲ. ಹಾಗಾಗಿ ‘ಅಮೃತ -ಅಂಜನ್’ ಎಂದಿಟ್ಟಿದ್ದೇವೆ ಎಂದರು.
‘ಅಮೃತ -ಅಂಜನ್’ ಚಿತ್ರಕ್ಕೆ ಸುಮಂತ್ ಆಚಾರ್ಯ ಛಾಯಾಗ್ರಹಣ ಮತ್ತು ರಾಘವೇಂದ್ರ ಸಂಗೀತ ಸಂಯೋಜಿಸಿದ್ದಾರೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…