ಮನರಂಜನೆ

ಕಿರುಚಿತ್ರ ‘ಅಮೃತಾಂಜನ್’ ಈಗ ಸಿನಿಮಾ ಆಯ್ತು …

ನಾಲ್ಕು ವರ್ಷಗಳ ಹಿಂದೆ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿ ಅತಿ ಹೆಚ್ಚು ವೀಕ್ಷಣೆ ಪಡೆದ ಕಿರುಚಿತ್ರವೆಂದರೆ, ಅದು ‘ಅಮೃತಾಂಜನ್’. ‘ದಿ ಗ್ರೇಟ್‍ ಸ್ಟೋರಿ ಆಫ್‍ ಸೋಡಾಬುಡ್ಡಿ’ ಚಿತ್ರವನ್ನು ನಿರ್ದೇಶಿಸಿದ್ದ ಜ್ಯೋತಿ ರಾವ್‍ ಮೋಹಿತ್‍ ಅಲಿಯಾಸ್‍ ಜೆ.ಆರ್.ಎಂ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಕಿರುಚಿತ್ರ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿತ್ತು.

ಇದೀಗ ಅದೇ ಪರಿಕಲ್ಪನೆಯೊಂದಿಗೆ ಜೆ.ಆರ್.ಎಂ, ‘ಅಮೃತ -ಅಂಜನ್’ ಎಂಬ ಚಲನಚಿತ್ರ ನಿರ್ದೇಶನ ಮಾಡಿದ್ದಾರೆ. ಆ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಬಿಡುಗಡೆ ದಿನಾಂಕ ಘೋಷಣೆಗೆಂದೇ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಕಿರುಚಿತ್ರಗಳಲ್ಲಿ ಹೆಸರು ಮಾಡಿರುವ ಸುಧಾಕರ ಗೌಡ, ಗೌರವ್ ಶೆಟ್ಡಿ, ಕಾರ್ತೀಕ್ ರುವಾರಿ, ಪಾಯಲ್ ಚಂಗಪ್ಪ, ಪಲ್ಲವಿ ಪರ್ವ, ಚೇತನ್‍ ದುರ್ಗ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ‌.

ಇದನ್ನು ಓದಿ:‘ಮಹಾರಾಜ ಆಗೆಂದು…’ ವಿನಯ್‍ಗೆ ಹರಸಿದ ಅರುಣಾ ಬಾಲರಾಜ್‍

‘ಅಮೃತ -ಅಂಜನ್’ ಚಿತ್ರದ ಕುರಿತು ಮಾತನಾಡುವ ಜೆ.ಆರ್.ಎಂ, ‘ನಮ್ಮ ಮೋಹಿತೆ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಯಾಗಿದ್ದ ಕಿರುಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ಹಾಗಾಗಿ, ಅದೇ ಎಳೆ ಇಟ್ಟುಕೊಂಡು ಪಕ್ಕಾ ಕಮರ್ಷಿಯಲ್ ಚಿತ್ರ ಮಾಡಿದ್ದೇವೆ. ಈ ಹಿಂದೆ ನಾನು ನಿರ್ದೇಶಿಸಿದ್ದ ‘ಸೋಡಾಬುಡ್ಡಿ’ ಚಿತ್ರ ಸಾಧಾರಣ ಪ್ರತಿಕ್ರಿಯೆ ಪಡೆದಿತ್ತು. ಇದು ಎರಡನೇ ಚಿತ್ರ. ಇದೊಂದು ಮನರಂಜನಾತ್ಮಕ ಚಿತ್ರ. ತಂದೆ-ಮಗನ ಎಮೋಷನ್ಸ್ ಚಿತ್ರದಲ್ಲಿದ್ದು, ಸುಧಾಕರ್ ಹಾಗೂ ನವೀನ್ ಪಡೀಲ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಕಾಮಿಡಿ ಇದೆ. ನಮ್ಮ ಚಿತ್ರಕ್ಕೆ ಸುಧಾಮೂರ್ತಿ ಹಾಗೂ ಜಾಕಿ ಚಾನ್ ಸ್ಪೂರ್ತಿ. ಚಿತ್ರಕ್ಕೆ ಮಂಗಳೂರು, ಬೆಂಗಳೂರು, ತೀರ್ಥಳ್ಳಿ ಸುತ್ತಮುತ್ತ 68 ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ. ಈ ಚಿತ್ರಕ್ಕೆ ‘ಅಮೃತಾಂಜನ್’ ಎಂಬ ಟೈಟಲ್ ಸಿಗಲಿಲ್ಲ. ಹಾಗಾಗಿ ‘ಅಮೃತ -ಅಂಜನ್’ ಎಂದಿಟ್ಟಿದ್ದೇವೆ ಎಂದರು.

‘ಅಮೃತ -ಅಂಜನ್’ ಚಿತ್ರಕ್ಕೆ ಸುಮಂತ್ ಆಚಾರ್ಯ ಛಾಯಾಗ್ರಹಣ ಮತ್ತು ರಾಘವೇಂದ್ರ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

7 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

7 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

7 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

7 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

17 hours ago