ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್ …’ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಈಗ ಚಿತ್ರದ ‘ಒಂದೇ ಒಂದು ಸಲ … ಎಂಬ ಸುಮಧುರ ಯುಗಳ ಗೀತೆ ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ.
ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು ಕಪಿಲ್ ಕಪಿಲನ್ ಹಾಗೂ ಚಿನ್ಮಯಿ ಶ್ರೀಪಾದ ಅವರು ಹಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಸಂತು ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ದರ್ಶನ್ ಹಾಗೂ ರಚನ ರೈ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಇದನ್ನು ಓದಿ : ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್
ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರ ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ. ದರ್ಶನ್ಗೆ ನಾಯಕಿಯಾಗಿ ರಚನ ರೈ ಅಭಿನಯಿಸಿದ್ದು, ಮಿಕ್ಕಂತೆ ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭರಾಜ್ ಮುಂತಾದವರು ಅಭಿನಯಿಸಿದ್ದಾರೆ.
‘ದಿ ಡೆವಿಲ್’ ಚಿತ್ರಕ್ಕೆ ಸುಧಾಕರ್ ಎಸ್. ರಾಜ್ ಛಾಯಾಗ್ರಹಣ ಮತ್ತ ಅಜನೀಶ್ ಲೋಕನಾಥ್ ಸಂಗೀತವಿದೆ
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…