‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ ಗಣೇಶ್ ಪಾತ್ರ ಸಹ ಕಣ್ಣ ಮುಂದೆ ಬರುತ್ತದೆ. ಈಗ ಆ ಚಿತ್ರಗಳನ್ನು ಹೋಲುವ ಇನ್ನೊಂದು ಚಿತ್ರ ಸದ್ದಿಲ್ಲದೆ ತಯಾರಾಗಿದೆ. ಅದೇ ‘ಪ್ರೀತಿಯ ಹುಚ್ಚ’. ಹೆಸರೇ ಹೇಳುವಂತೆ ಪ್ರೀತಿಗಾಗಿ ಹುಚ್ಚನಾಗುವ ಯುವಕನ ಕಥೆ ಇದು.
ಈ ಚಿತ್ರವು ಏಪ್ರಿಲ್.18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಟ್ರೇಲರ್ ಬಿಡುಗಡೆ ಆಗಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ವಿ.ಕೃಷ್ಣೇಗೌಡ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ವಿ.ಕುಮಾರ್ ‘ಪ್ರೀತಿಯ ಹುಚ್ಚ’ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಕುಮಾರ್, ‘ಈ ಕಥೆ ನೈಜ ಘಟನೆಯೊಂದನ್ನು ಆಧರಿಸಿದೆ. ನಾನು ಕೆಲಸದ ನಿಮಿತ್ತ ಮುಂಬೈಗೆ ಹೋದ ಸಂದರ್ಭದಲ್ಲಿ ಸ್ನೇಹಿತರ ಮೂಲಕ ವೃದ್ಧೆಯೊಬ್ಬರ ಪರಿಚಯವಾಯ್ತು. ಆಕೆ ಹೇಳಿದ ಒಂದು ಕಥೆ ಕೇಳಿ ನನ್ನನ್ನು ತುಂಬಾ ಕಾಡಿತು. ಆಕೆಯನ್ನು ಇಂದು ಕರೆದುಕೊಂಡು ಬಂದು ಪರಿಚಯಿಸೋಣ ಅಂದುಕೊಂಡಿದ್ದೆ. ಆದರೆ, ಆಕೆಗೆ ಸಮಸ್ಯೆ ಎದುರಾಗಬಹುದು ಎಂದು ಕರೆದುಕೊಂಡು ಬರಲಿಲ್ಲ’ ಎಂದರು.
ಇದು ಆಕೆಯ ಗೆಳತಿಯ ಜೀವನದಲ್ಲಿ ನಡೆದ ಕಥೆ ಎನ್ನುವ ಕುಮಾರ್, ‘ಅದನ್ನು ಕೇಳಿ ನನಗೆ ಕಣ್ಣೀರು ಬಂತು. ಅದನ್ನೇ ಸಿನಿಮಾಗೆ ತಕ್ಕ ಹಾಗೆ ಬದಲಿಸಿಕೊಂಡಿದ್ದೇನೆ. 90ರ ಕಾಲಘಟ್ಟದಲ್ಲಿ ಅರಸೀಕೆರೆ ಶ್ರವಣಬೆಳಗೊಳದ ಮಧ್ಯೆ ನಡೆದ ನೈಜಘಟನೆ ಇದು. ದಲಿತ ಯುವತಿಯನ್ನು ಗೌಡ್ರ ಮನೆಯವರು ಹೇಗೆ ನಡೆಸಿಕೊಳ್ತಿದ್ದರು ಅಂತ ತೋರಿಸಿದ್ದೇನೆ’ ಎಂದರು.
‘ಪ್ರೀತಿಯ ಹುಚ್ಚ’ ಚಿತ್ರದಲ್ಲಿ ವಿಜಯ್, ಕುಂಕುಮ್ ಹರಿಹರ, ಆಲಿಷಾ, ದುಬೈ ರಫೀಕ್, ನಾಗರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು. ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಸಲಾಗಿದೆ.
ಈ ಚಿತ್ರಕ್ಕೆ ತಶಿ ರಂಗರಾಜನ್ ಸಂಗೀತ ಸಂಯೋಜಿಸಿದ್ದು, ಯು.ಜಿ. ನಂದಕುಮಾರ್ ಸಹ ನಿರ್ಮಾಪಕರಾಗಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…