ಮನರಂಜನೆ

ಇದು ‘ಪ್ರೀತಿಯ ಹುಚ್ಚ’ನ ಕಥೆ: ನೈಜ ಘಟನೆ ಆಧರಿಸಿದ ಚಿತ್ರ ಏಪ್ರಿಲ್.18ಕ್ಕೆ ತೆರೆಗೆ

‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್‍ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ ಗಣೇಶ್‍ ಪಾತ್ರ ಸಹ ಕಣ್ಣ ಮುಂದೆ ಬರುತ್ತದೆ. ಈಗ ಆ ಚಿತ್ರಗಳನ್ನು ಹೋಲುವ ಇನ್ನೊಂದು ಚಿತ್ರ ಸದ್ದಿಲ್ಲದೆ ತಯಾರಾಗಿದೆ. ಅದೇ ‘ಪ್ರೀತಿಯ ಹುಚ್ಚ’. ಹೆಸರೇ ಹೇಳುವಂತೆ ಪ್ರೀತಿಗಾಗಿ ಹುಚ್ಚನಾಗುವ ಯುವಕನ ಕಥೆ ಇದು.

ಈ ಚಿತ್ರವು ಏಪ್ರಿಲ್‍.18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಆಗಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ವಿ.ಕೃಷ್ಣೇಗೌಡ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

‌‌‌ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ವಿ.ಕುಮಾರ್ ‘ಪ್ರೀತಿಯ ಹುಚ್ಚ’ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಕುಮಾರ್‍, ‘ಈ ಕಥೆ ನೈಜ ಘಟನೆಯೊಂದನ್ನು ಆಧರಿಸಿದೆ. ನಾನು ಕೆಲಸದ ನಿಮಿತ್ತ ಮುಂಬೈಗೆ ಹೋದ ಸಂದರ್ಭದಲ್ಲಿ ಸ್ನೇಹಿತರ ಮೂಲಕ ವೃದ್ಧೆಯೊಬ್ಬರ ಪರಿಚಯವಾಯ್ತು. ಆಕೆ ಹೇಳಿದ ಒಂದು ಕಥೆ ಕೇಳಿ ನನ್ನನ್ನು ತುಂಬಾ ಕಾಡಿತು. ಆಕೆಯನ್ನು ಇಂದು ಕರೆದುಕೊಂಡು ಬಂದು ಪರಿಚಯಿಸೋಣ ಅಂದುಕೊಂಡಿದ್ದೆ. ಆದರೆ, ಆಕೆಗೆ ಸಮಸ್ಯೆ ಎದುರಾಗಬಹುದು ಎಂದು ಕರೆದುಕೊಂಡು ಬರಲಿಲ್ಲ’ ಎಂದರು.

ಇದು ಆಕೆಯ ಗೆಳತಿಯ ಜೀವನದಲ್ಲಿ ನಡೆದ ಕಥೆ ಎನ್ನುವ ಕುಮಾರ್, ‘ಅದನ್ನು ಕೇಳಿ ನನಗೆ ಕಣ್ಣೀರು ಬಂತು. ಅದನ್ನೇ ಸಿನಿಮಾಗೆ ತಕ್ಕ ಹಾಗೆ ಬದಲಿಸಿಕೊಂಡಿದ್ದೇನೆ. 90ರ ಕಾಲಘಟ್ಟದಲ್ಲಿ ಅರಸೀಕೆರೆ ಶ್ರವಣಬೆಳಗೊಳದ ಮಧ್ಯೆ ನಡೆದ ನೈಜಘಟನೆ ಇದು. ದಲಿತ ಯುವತಿಯನ್ನು ಗೌಡ್ರ ಮನೆಯವರು ಹೇಗೆ ನಡೆಸಿಕೊಳ್ತಿದ್ದರು ಅಂತ ತೋರಿಸಿದ್ದೇನೆ’ ಎಂದರು.

‘ಪ್ರೀತಿಯ ಹುಚ್ಚ’ ಚಿತ್ರದಲ್ಲಿ ವಿಜಯ್, ಕುಂಕುಮ್ ಹರಿಹರ, ಆಲಿಷಾ, ದುಬೈ ರಫೀಕ್, ನಾಗರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು. ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಸಲಾಗಿದೆ.

ಈ ಚಿತ್ರಕ್ಕೆ ತಶಿ ರಂಗರಾಜನ್ ಸಂಗೀತ ಸಂಯೋಜಿಸಿದ್ದು, ಯು.ಜಿ. ನಂದಕುಮಾರ್‍ ಸಹ ನಿರ್ಮಾಪಕರಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago