ಮನರಂಜನೆ

ಟ್ರೇಲರ್‌ನಲ್ಲಿ ‘ಕೊತ್ತಲವಾಡಿ’ಯ ಹೋರಾಟದ ಕಥೆ …

ಯಶ್‌ ತಾಯಿ ಪುಷ್ಪ ಅರುಣ್‌ ಕುಮಾರ್‌, ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರವು ಆಗಸ್ಟ್.01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.

ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಎಂಬ ಗ್ರಾಮದಲ್ಲಿ ನಡೆಯುವ ಕಥೆ ಹೊಂದಿರುವ ಚಿತ್ರ ‘ಕೊತ್ತಲವಾಡಿ’. ಆ ಚಿತ್ರದಲ್ಲಿ ನಡೆಯುವ ಹೋರಾಟ, ರಾಜಕೀಯದ ಸುತ್ತ ಚಿತ್ರ ಸಾಗುತ್ತದೆ. ಪೃಥ್ವಿ ಅಂಬಾರ್ ಮೊದಲ ಬಾರಿಗೆ ಇಂಥದ್ದೊಂದು ಒರಟು ಗ್ರಾಮೀಣ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ಕಾವ್ಯಾ ಶೈವ ಅಭಿನಯಿಸಿದ್ದಾರೆ. ಮಿಕ್ಕಂತೆ ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್‍ ನಟರಂಗ, ಮಾನಸಿ ಸುಧೀರ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ.

ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ಪುಷ್ಪಾ, ‘ಆಗಸ್ಟ್‌.1ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜನ ಈ ಚಿತ್ರವನ್ನು ಹೇಗೆ ತೆಗೆದುಕೊಳ್ತಾರೋ ಎಂಬ ಭಯವಿದೆ. ಜನ ನಮ್ಮ ಕೈಬಿಡುವುದಿಲ್ಲ ಎಂಬ ನಂಬಿಕೆಯೂ ಇದೆ. ಭಯ-ಭಕ್ತಿಯಿಂದ ಸಿನಿಮಾ ಮಾಡಿದ್ದೇವೆ. ಯಶ್‌ಗೆ ಹೇಳದೇ ಏನನ್ನೂ ಮಾಡಿಲ್ಲ. ಅವನಿಂದ ಪ್ರೇರಣೆ ಪಡೆದು ಈ ಚಿತ್ರ ಮಾಡಿದ್ದೇವೆ. ಜನ ಒಪ್ಪಿಕೊಂಡರೆ ಅವರಿಗೂ ಖುಷಿ ನಮಗೂ ಖುಷಿ’ ಎಂದರು.

ನಿರ್ದೇಶಕ ಶ್ರೀರಾಜ್‌ ಮಾತನಾಡಿ, ‘ಕೊತ್ತಲವಾಡಿ ಗ್ರಾಮದಲ್ಲಿ ಚಿತ್ರೀಕರಣ ಮಾಡಿದ್ದರಿಂದ, ಚಿತ್ರಕ್ಕೆ ಅದೇ ಹೆಸರಿಟ್ಟಿದ್ದೇವೆ. ಕಥೆಗೂ, ಗ್ರಾಮಸ್ಥರಿಗೂ ಯಾವುದೇ ಸಂಬಬಂಧವಿಲ್ಲ. ಕೆಲವು ನೈಜ ಘಟನೆಗಳ ಜೊತೆಗೆ, ಒಂದಿಷ್ಟು ಕಾಲ್ಪನಿಕ ಅಂಶಗಳನ್ನು ಸೇರಿಸಿ ಚಿತ್ರ ಮಾಡಿದ್ದೇವೆ’ ಎಂದರು.

ನಾಯಕ ಪೃಥ್ವಿ ಅಂಬಾರ್ ಮಾತನಾಡಿ, ‘ಇದೊಂದು ತಂತ್ರಜ್ಞರ ಚಿತ್ರ. ಇದಕ್ಕೂ ಮುನ್ನ ಬೇರೆ ಚಿತ್ರಗಳಲ್ಲಿ ಹೆಚ್ಚಾಗಿ ಪ್ರೀತಿಸುವ ಯುವಕನ ಪಾತ್ರವೇ ಸಿಕ್ಕಿತ್ತು. ಇಲ್ಲಿ ಬೇರೆ ತರಹದ ಪಾತ್ರ ಸಿಕ್ಕಿದೆ. ಈ ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಅವರ ಜೊತೆಗೆ ನಟಿಸುವ ಅವಕಾಶ ಸಿಕ್ಕಿದೆ. ಅವರು ನಮ್ಮ ಚಿತ್ರರಂಗಕ್ಕೆ ದೊಡ್ಡ ಆಸ್ತಿ. ಚಿತ್ರೀಕರಣ ಮಾಡುವಾಗ ನನಗೆ ಈ ಚಿತ್ರದ ನಿರ್ಮಾಪಕರು ಯಾರು ಎಂದು ಗೊತ್ತಿರಲಿಲ್ಲ. ಎಲ್ಲಾ ಮುಗಿದ ಮೇಲೆ ನಿರ್ದೇಶಕರು ಕರೆದುಕೊಂಡು ಹೋಗಿ ಯಶ್‍ ಅವರ ತಾಯಿಯನ್ನು ಪರಿಚಯ ಮಾಡಿಸಿದರು. ಈ ಚಿತ್ರದಲ್ಲಿ ಮೋಹನ ಎಂಬ ಹಳ್ಳಿ ಯುವಕನ ಪಾತ್ರ ಮಾಡಿದ್ದೇನೆ. ಆಸೆ, ದುರಾಸೆ ಮಟ್ಟಕ್ಕೆ ಹೋದರೆ ಏನಾಗುತ್ತದೆ ಎಂಬುದೇ ಚಿತ್ರದ ಕಥೆ’ ಎಂದರು.

‘ಕೊತ್ತಲವಾಡಿ’ ಚಿತ್ರಕ್ಕೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದರೆ, ಶೀರ್ಷಿಕೆ ಗೀತೆ ಮತ್ತು ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಅಭಿನಂದನ್‍ ಕಶ್ಯಪ್‍ ಹೊತ್ತಿದ್ದಾರೆ. ಕಾರ್ತಿಕ್‍ ಛಾಯಾಗ್ರಾಹಣ ಮತ್ತು ರಘು ನಿಡುವಳ್ಳಿ ಸಂಭಾಷಣೆ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

26 mins ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

3 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

5 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

5 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

5 hours ago