ಮನರಂಜನೆ

ಟ್ರೇಲರ್‌ನಲ್ಲಿ ‘ಕೊತ್ತಲವಾಡಿ’ಯ ಹೋರಾಟದ ಕಥೆ …

ಯಶ್‌ ತಾಯಿ ಪುಷ್ಪ ಅರುಣ್‌ ಕುಮಾರ್‌, ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರವು ಆಗಸ್ಟ್.01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.

ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಎಂಬ ಗ್ರಾಮದಲ್ಲಿ ನಡೆಯುವ ಕಥೆ ಹೊಂದಿರುವ ಚಿತ್ರ ‘ಕೊತ್ತಲವಾಡಿ’. ಆ ಚಿತ್ರದಲ್ಲಿ ನಡೆಯುವ ಹೋರಾಟ, ರಾಜಕೀಯದ ಸುತ್ತ ಚಿತ್ರ ಸಾಗುತ್ತದೆ. ಪೃಥ್ವಿ ಅಂಬಾರ್ ಮೊದಲ ಬಾರಿಗೆ ಇಂಥದ್ದೊಂದು ಒರಟು ಗ್ರಾಮೀಣ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ಕಾವ್ಯಾ ಶೈವ ಅಭಿನಯಿಸಿದ್ದಾರೆ. ಮಿಕ್ಕಂತೆ ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್‍ ನಟರಂಗ, ಮಾನಸಿ ಸುಧೀರ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ.

ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ಪುಷ್ಪಾ, ‘ಆಗಸ್ಟ್‌.1ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜನ ಈ ಚಿತ್ರವನ್ನು ಹೇಗೆ ತೆಗೆದುಕೊಳ್ತಾರೋ ಎಂಬ ಭಯವಿದೆ. ಜನ ನಮ್ಮ ಕೈಬಿಡುವುದಿಲ್ಲ ಎಂಬ ನಂಬಿಕೆಯೂ ಇದೆ. ಭಯ-ಭಕ್ತಿಯಿಂದ ಸಿನಿಮಾ ಮಾಡಿದ್ದೇವೆ. ಯಶ್‌ಗೆ ಹೇಳದೇ ಏನನ್ನೂ ಮಾಡಿಲ್ಲ. ಅವನಿಂದ ಪ್ರೇರಣೆ ಪಡೆದು ಈ ಚಿತ್ರ ಮಾಡಿದ್ದೇವೆ. ಜನ ಒಪ್ಪಿಕೊಂಡರೆ ಅವರಿಗೂ ಖುಷಿ ನಮಗೂ ಖುಷಿ’ ಎಂದರು.

ನಿರ್ದೇಶಕ ಶ್ರೀರಾಜ್‌ ಮಾತನಾಡಿ, ‘ಕೊತ್ತಲವಾಡಿ ಗ್ರಾಮದಲ್ಲಿ ಚಿತ್ರೀಕರಣ ಮಾಡಿದ್ದರಿಂದ, ಚಿತ್ರಕ್ಕೆ ಅದೇ ಹೆಸರಿಟ್ಟಿದ್ದೇವೆ. ಕಥೆಗೂ, ಗ್ರಾಮಸ್ಥರಿಗೂ ಯಾವುದೇ ಸಂಬಬಂಧವಿಲ್ಲ. ಕೆಲವು ನೈಜ ಘಟನೆಗಳ ಜೊತೆಗೆ, ಒಂದಿಷ್ಟು ಕಾಲ್ಪನಿಕ ಅಂಶಗಳನ್ನು ಸೇರಿಸಿ ಚಿತ್ರ ಮಾಡಿದ್ದೇವೆ’ ಎಂದರು.

ನಾಯಕ ಪೃಥ್ವಿ ಅಂಬಾರ್ ಮಾತನಾಡಿ, ‘ಇದೊಂದು ತಂತ್ರಜ್ಞರ ಚಿತ್ರ. ಇದಕ್ಕೂ ಮುನ್ನ ಬೇರೆ ಚಿತ್ರಗಳಲ್ಲಿ ಹೆಚ್ಚಾಗಿ ಪ್ರೀತಿಸುವ ಯುವಕನ ಪಾತ್ರವೇ ಸಿಕ್ಕಿತ್ತು. ಇಲ್ಲಿ ಬೇರೆ ತರಹದ ಪಾತ್ರ ಸಿಕ್ಕಿದೆ. ಈ ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಅವರ ಜೊತೆಗೆ ನಟಿಸುವ ಅವಕಾಶ ಸಿಕ್ಕಿದೆ. ಅವರು ನಮ್ಮ ಚಿತ್ರರಂಗಕ್ಕೆ ದೊಡ್ಡ ಆಸ್ತಿ. ಚಿತ್ರೀಕರಣ ಮಾಡುವಾಗ ನನಗೆ ಈ ಚಿತ್ರದ ನಿರ್ಮಾಪಕರು ಯಾರು ಎಂದು ಗೊತ್ತಿರಲಿಲ್ಲ. ಎಲ್ಲಾ ಮುಗಿದ ಮೇಲೆ ನಿರ್ದೇಶಕರು ಕರೆದುಕೊಂಡು ಹೋಗಿ ಯಶ್‍ ಅವರ ತಾಯಿಯನ್ನು ಪರಿಚಯ ಮಾಡಿಸಿದರು. ಈ ಚಿತ್ರದಲ್ಲಿ ಮೋಹನ ಎಂಬ ಹಳ್ಳಿ ಯುವಕನ ಪಾತ್ರ ಮಾಡಿದ್ದೇನೆ. ಆಸೆ, ದುರಾಸೆ ಮಟ್ಟಕ್ಕೆ ಹೋದರೆ ಏನಾಗುತ್ತದೆ ಎಂಬುದೇ ಚಿತ್ರದ ಕಥೆ’ ಎಂದರು.

‘ಕೊತ್ತಲವಾಡಿ’ ಚಿತ್ರಕ್ಕೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದರೆ, ಶೀರ್ಷಿಕೆ ಗೀತೆ ಮತ್ತು ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಅಭಿನಂದನ್‍ ಕಶ್ಯಪ್‍ ಹೊತ್ತಿದ್ದಾರೆ. ಕಾರ್ತಿಕ್‍ ಛಾಯಾಗ್ರಾಹಣ ಮತ್ತು ರಘು ನಿಡುವಳ್ಳಿ ಸಂಭಾಷಣೆ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

9 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

9 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

10 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

10 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

10 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

11 hours ago