ಪುನೀತ್ ರಾಜಕುಮಾರ್ ನೆನಪಲ್ಲಿ ಸೆಟ್ಟೇರುತ್ತಿರುವ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ‘ಅಪ್ಪು ಅಭಿಮಾನಿ’, ‘ಪುನೀತ್ ನಿವಾಸ’, ‘ಅಪ್ಪು ಟ್ಯಾಕ್ಸಿ’ ನಂತರ ಇದೀಗ ಇನ್ನೊಂದು ಚಿತ್ರ ಸದ್ದಿಲ್ಲದೆ ಸೋಮವಾರ ಪ್ರಾರಂಭವಾಗಿದೆ. ಅದೇ ‘ಪವರ್ ಸ್ಟಾರ್ ಧರೆಗೆ ದೊಡ್ಡವನು’. ಈ ಚಿತ್ರವನ್ನು ಸೂರ್ಯ ನಿರ್ದೇಶನ ಮಾಡುತ್ತಿದ್ದು, ಕಂಠೀರವ ಸ್ಟುಡಿಯೋದಲ್ಲಿ ಚಿತ್ರ ಸೆಟ್ಟೇರಿದೆ. ನಿರ್ದೇಶಕ ಶಶಾಂಕ್ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.
ಸೂರ್ಯ ಇದುವರೆಗೂ ಸುಮಾರು 15 ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದಾರಂತೆ. ಈ ಹಿಂದೆ 2014ರಲ್ಲಿ ಯಶ್ ಅವರಿಗೆ ಒಂದು ಕಥೆ ಮಾಡಿಕೊಂಡಿದ್ದರಂತೆ. 50 ಲಕ್ಷ ಖರ್ಚು ಮಾಡಿ ಗ್ರಾಫಿಕ್ಸ್ ಮೂಲಕ ಟೀಸರ್ ಸಹ ಮಾಡಿಸಿದ್ದರಂತೆ. ಆದರೆ, ಕಾರಣಾಂತರಗಳಿಂದ ಚಿತ್ರ ಆರಂಭಗೊಳ್ಳಲಿಲ್ಲ. ಆ ಕಥೆಯನ್ನು ಇಟ್ಟುಕೊಂಡು ಒಂದಷ್ಟು ಬದಲಾವಣೆ ಜೊತೆಗೆ ಈಗ ಚಿತ್ರ ಆರಂಭಿಸಿದ್ದಾರೆ.
ಈ ಚಿತ್ರದಲ್ಲಿ ವಿಶೇಷ ತಂತ್ರಜ್ಞಾನದ ಮೂಲಕ ಪುನೀತ್ ರಾಜಕುಮಾರ್ ಅವರನ್ನು ಪರದೆಯ ಮೇಲೆ ಸೃಷ್ಟಿ ಮಾಡಲಾಗುವುದಂತೆ. ಕಣ್ಣಿಲ್ಲದ ಮಗುವಿಗೆ ದೃಷ್ಟಿ ಬಂದಾಗ ಆಕೆಯ ಆಸೆ ನೆರವೇರಿಸಿಕೊಳ್ಳಲು ಏನೆಲ್ಲಾ ಮಾಡುತ್ತಾಳೆ ಎಂಬುದು ಚಿತ್ರದ ಕಥೆ.
’ಪವರ್ ಸ್ಟಾರ್ ಧರೆಗೆ ದೊಡ್ಡವನು’ ಚಿತ್ರದ ಕುರಿತು ಮಾತನಾಡುವ ಸೂರ್ಯ, ‘ಈಗಾಗಲೇ ಈ ಚಿತ್ರದ ಗ್ರಾಫಿಕ್ಸ್ ತಂತ್ರಜ್ಞಾನದ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಮಾತಿನ ಭಾಗ ಹಾಗೂ ಹಾಡಿನ ಭಾಗ ಚಿತ್ರೀಕರಣ ಮಾಡಬೇಕಿದೆ. ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದು, ನಮ್ಮ ಚಿತ್ರವನ್ನು ಇದೇ ವರ್ಷ ಅಕ್ಟೋಬರ್ 29ರಂದು ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.
‘ಸರಿಗಮಪ’ ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿರುವ ಬೇಬಿ ಜ್ಞಾನ ಗುರುರಾಜ್ ಈ ಚಿತ್ರದಲ್ಲಿ ಪುನೀತ್ ಅಭಿಮಾನಿಯ ಪಾತ್ರ ಮಾಡುತ್ತಿದ್ದಾರಂತೆ. ಹಿರಿಯ ನಟ ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ವಿಜಯ್ ಭಾಸ್ಕರ್ ಛಾಯಾಗ್ರಾಹಣ, ಅನುಶ್ರೀ ಶ್ರೀಧರ್ ಮೂರ್ತಿ ಸಂಗೀತವಿದೆ.
ಈ ಚಿತ್ರದಲ್ಲಿ ಶಿಲ್ಪಿಯ ಪಾತ್ರವೊಂದಿದ್ದು, ಅಯೋಧ್ಯೆಯ ಬಾಲರಾಮನ ವಿಗ್ರಹ ಕೆತ್ತಿದಂತಹ ಮೈಸೂರಿನ ಶಿಲ್ಪಿ ಯೋಗಿರಾಜ್ ಅವರನ್ನು ಭೇಟಿ ಮಾಡುವ ಪ್ರಯತ್ನ ನಡೆಯುತ್ತಿದೆಯಂತೆ.
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…