ಮನರಂಜನೆ

ಯಶ್‍ಗೆ ಮಾಡಿದ ಕಥೆ ಈಗ ಪುನೀತ್‍ ಹೆಸರಲ್ಲಿ ಪ್ರಾರಂಭ

ಪುನೀತ್‍ ರಾಜಕುಮಾರ್‍ ನೆನಪಲ್ಲಿ ಸೆಟ್ಟೇರುತ್ತಿರುವ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ‘ಅಪ್ಪು ಅಭಿಮಾನಿ’, ‘ಪುನೀತ್‍ ನಿವಾಸ’, ‘ಅಪ್ಪು ಟ್ಯಾಕ್ಸಿ’ ನಂತರ ಇದೀಗ ಇನ್ನೊಂದು ಚಿತ್ರ ಸದ್ದಿಲ್ಲದೆ ಸೋಮವಾರ ಪ್ರಾರಂಭವಾಗಿದೆ. ಅದೇ ‘ಪವರ್‍ ಸ್ಟಾರ್‍ ಧರೆಗೆ ದೊಡ್ಡವನು’. ಈ ಚಿತ್ರವನ್ನು ಸೂರ್ಯ ನಿರ್ದೇಶನ ಮಾಡುತ್ತಿದ್ದು, ಕಂಠೀರವ ಸ್ಟುಡಿಯೋದಲ್ಲಿ ಚಿತ್ರ ಸೆಟ್ಟೇರಿದೆ. ನಿರ್ದೇಶಕ ಶಶಾಂಕ್‍ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ಸೂರ್ಯ ಇದುವರೆಗೂ ಸುಮಾರು 15 ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದಾರಂತೆ. ಈ ಹಿಂದೆ 2014ರಲ್ಲಿ ಯಶ್‍ ಅವರಿಗೆ ಒಂದು ಕಥೆ ಮಾಡಿಕೊಂಡಿದ್ದರಂತೆ. 50 ಲಕ್ಷ ಖರ್ಚು ಮಾಡಿ ಗ್ರಾಫಿಕ್ಸ್ ಮೂಲಕ ಟೀಸರ್ ಸಹ ಮಾಡಿಸಿದ್ದರಂತೆ. ಆದರೆ, ಕಾರಣಾಂತರಗಳಿಂದ ಚಿತ್ರ ಆರಂಭಗೊಳ್ಳಲಿಲ್ಲ. ಆ ಕಥೆಯನ್ನು ಇಟ್ಟುಕೊಂಡು ಒಂದಷ್ಟು ಬದಲಾವಣೆ ಜೊತೆಗೆ ಈಗ ಚಿತ್ರ ಆರಂಭಿಸಿದ್ದಾರೆ.

ಈ ಚಿತ್ರದಲ್ಲಿ ವಿಶೇಷ ತಂತ್ರಜ್ಞಾನದ ಮೂಲಕ ಪುನೀತ್ ರಾಜಕುಮಾರ್ ಅವರನ್ನು ಪರದೆಯ ಮೇಲೆ ಸೃಷ್ಟಿ ಮಾಡಲಾಗುವುದಂತೆ. ಕಣ್ಣಿಲ್ಲದ ಮಗುವಿಗೆ ದೃಷ್ಟಿ ಬಂದಾಗ ಆಕೆಯ ಆಸೆ ನೆರವೇರಿಸಿಕೊಳ್ಳಲು ಏನೆಲ್ಲಾ ಮಾಡುತ್ತಾಳೆ ಎಂಬುದು ಚಿತ್ರದ ಕಥೆ.

’ಪವರ್ ಸ್ಟಾರ್ ಧರೆಗೆ ದೊಡ್ಡವನು’ ಚಿತ್ರದ ಕುರಿತು ಮಾತನಾಡುವ ಸೂರ್ಯ, ‘ಈಗಾಗಲೇ ಈ ಚಿತ್ರದ ಗ್ರಾಫಿಕ್ಸ್ ತಂತ್ರಜ್ಞಾನದ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಮಾತಿನ ಭಾಗ ಹಾಗೂ ಹಾಡಿನ ಭಾಗ ಚಿತ್ರೀಕರಣ ಮಾಡಬೇಕಿದೆ. ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದು, ನಮ್ಮ ಚಿತ್ರವನ್ನು ಇದೇ ವರ್ಷ ಅಕ್ಟೋಬರ್‍ 29ರಂದು ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.

‘ಸರಿಗಮಪ’ ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿರುವ ಬೇಬಿ ಜ್ಞಾನ ಗುರುರಾಜ್ ಈ ಚಿತ್ರದಲ್ಲಿ ಪುನೀತ್‍ ಅಭಿಮಾನಿಯ ಪಾತ್ರ ಮಾಡುತ್ತಿದ್ದಾರಂತೆ. ಹಿರಿಯ ನಟ ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ವಿಜಯ್ ಭಾಸ್ಕರ್ ಛಾಯಾಗ್ರಾಹಣ, ಅನುಶ್ರೀ ಶ್ರೀಧರ್ ಮೂರ್ತಿ ಸಂಗೀತವಿದೆ.

ಈ ಚಿತ್ರದಲ್ಲಿ ಶಿಲ್ಪಿಯ ಪಾತ್ರವೊಂದಿದ್ದು, ಅಯೋಧ್ಯೆಯ ಬಾಲರಾಮನ ವಿಗ್ರಹ ಕೆತ್ತಿದಂತಹ ಮೈಸೂರಿನ ಶಿಲ್ಪಿ ಯೋಗಿರಾಜ್ ಅವರನ್ನು ಭೇಟಿ ಮಾಡುವ ಪ್ರಯತ್ನ ನಡೆಯುತ್ತಿದೆಯಂತೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

1 hour ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

1 hour ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

1 hour ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

2 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

3 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

3 hours ago