ಮನರಂಜನೆ

ಯಶ್‍ಗೆ ಮಾಡಿದ ಕಥೆ ಈಗ ಪುನೀತ್‍ ಹೆಸರಲ್ಲಿ ಪ್ರಾರಂಭ

ಪುನೀತ್‍ ರಾಜಕುಮಾರ್‍ ನೆನಪಲ್ಲಿ ಸೆಟ್ಟೇರುತ್ತಿರುವ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ‘ಅಪ್ಪು ಅಭಿಮಾನಿ’, ‘ಪುನೀತ್‍ ನಿವಾಸ’, ‘ಅಪ್ಪು ಟ್ಯಾಕ್ಸಿ’ ನಂತರ ಇದೀಗ ಇನ್ನೊಂದು ಚಿತ್ರ ಸದ್ದಿಲ್ಲದೆ ಸೋಮವಾರ ಪ್ರಾರಂಭವಾಗಿದೆ. ಅದೇ ‘ಪವರ್‍ ಸ್ಟಾರ್‍ ಧರೆಗೆ ದೊಡ್ಡವನು’. ಈ ಚಿತ್ರವನ್ನು ಸೂರ್ಯ ನಿರ್ದೇಶನ ಮಾಡುತ್ತಿದ್ದು, ಕಂಠೀರವ ಸ್ಟುಡಿಯೋದಲ್ಲಿ ಚಿತ್ರ ಸೆಟ್ಟೇರಿದೆ. ನಿರ್ದೇಶಕ ಶಶಾಂಕ್‍ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ಸೂರ್ಯ ಇದುವರೆಗೂ ಸುಮಾರು 15 ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದಾರಂತೆ. ಈ ಹಿಂದೆ 2014ರಲ್ಲಿ ಯಶ್‍ ಅವರಿಗೆ ಒಂದು ಕಥೆ ಮಾಡಿಕೊಂಡಿದ್ದರಂತೆ. 50 ಲಕ್ಷ ಖರ್ಚು ಮಾಡಿ ಗ್ರಾಫಿಕ್ಸ್ ಮೂಲಕ ಟೀಸರ್ ಸಹ ಮಾಡಿಸಿದ್ದರಂತೆ. ಆದರೆ, ಕಾರಣಾಂತರಗಳಿಂದ ಚಿತ್ರ ಆರಂಭಗೊಳ್ಳಲಿಲ್ಲ. ಆ ಕಥೆಯನ್ನು ಇಟ್ಟುಕೊಂಡು ಒಂದಷ್ಟು ಬದಲಾವಣೆ ಜೊತೆಗೆ ಈಗ ಚಿತ್ರ ಆರಂಭಿಸಿದ್ದಾರೆ.

ಈ ಚಿತ್ರದಲ್ಲಿ ವಿಶೇಷ ತಂತ್ರಜ್ಞಾನದ ಮೂಲಕ ಪುನೀತ್ ರಾಜಕುಮಾರ್ ಅವರನ್ನು ಪರದೆಯ ಮೇಲೆ ಸೃಷ್ಟಿ ಮಾಡಲಾಗುವುದಂತೆ. ಕಣ್ಣಿಲ್ಲದ ಮಗುವಿಗೆ ದೃಷ್ಟಿ ಬಂದಾಗ ಆಕೆಯ ಆಸೆ ನೆರವೇರಿಸಿಕೊಳ್ಳಲು ಏನೆಲ್ಲಾ ಮಾಡುತ್ತಾಳೆ ಎಂಬುದು ಚಿತ್ರದ ಕಥೆ.

’ಪವರ್ ಸ್ಟಾರ್ ಧರೆಗೆ ದೊಡ್ಡವನು’ ಚಿತ್ರದ ಕುರಿತು ಮಾತನಾಡುವ ಸೂರ್ಯ, ‘ಈಗಾಗಲೇ ಈ ಚಿತ್ರದ ಗ್ರಾಫಿಕ್ಸ್ ತಂತ್ರಜ್ಞಾನದ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಮಾತಿನ ಭಾಗ ಹಾಗೂ ಹಾಡಿನ ಭಾಗ ಚಿತ್ರೀಕರಣ ಮಾಡಬೇಕಿದೆ. ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದು, ನಮ್ಮ ಚಿತ್ರವನ್ನು ಇದೇ ವರ್ಷ ಅಕ್ಟೋಬರ್‍ 29ರಂದು ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.

‘ಸರಿಗಮಪ’ ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿರುವ ಬೇಬಿ ಜ್ಞಾನ ಗುರುರಾಜ್ ಈ ಚಿತ್ರದಲ್ಲಿ ಪುನೀತ್‍ ಅಭಿಮಾನಿಯ ಪಾತ್ರ ಮಾಡುತ್ತಿದ್ದಾರಂತೆ. ಹಿರಿಯ ನಟ ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ವಿಜಯ್ ಭಾಸ್ಕರ್ ಛಾಯಾಗ್ರಾಹಣ, ಅನುಶ್ರೀ ಶ್ರೀಧರ್ ಮೂರ್ತಿ ಸಂಗೀತವಿದೆ.

ಈ ಚಿತ್ರದಲ್ಲಿ ಶಿಲ್ಪಿಯ ಪಾತ್ರವೊಂದಿದ್ದು, ಅಯೋಧ್ಯೆಯ ಬಾಲರಾಮನ ವಿಗ್ರಹ ಕೆತ್ತಿದಂತಹ ಮೈಸೂರಿನ ಶಿಲ್ಪಿ ಯೋಗಿರಾಜ್ ಅವರನ್ನು ಭೇಟಿ ಮಾಡುವ ಪ್ರಯತ್ನ ನಡೆಯುತ್ತಿದೆಯಂತೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

5 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago