ಮನರಂಜನೆ

ಯಶ್‍ಗೆ ಮಾಡಿದ ಕಥೆ ಈಗ ಪುನೀತ್‍ ಹೆಸರಲ್ಲಿ ಪ್ರಾರಂಭ

ಪುನೀತ್‍ ರಾಜಕುಮಾರ್‍ ನೆನಪಲ್ಲಿ ಸೆಟ್ಟೇರುತ್ತಿರುವ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ‘ಅಪ್ಪು ಅಭಿಮಾನಿ’, ‘ಪುನೀತ್‍ ನಿವಾಸ’, ‘ಅಪ್ಪು ಟ್ಯಾಕ್ಸಿ’ ನಂತರ ಇದೀಗ ಇನ್ನೊಂದು ಚಿತ್ರ ಸದ್ದಿಲ್ಲದೆ ಸೋಮವಾರ ಪ್ರಾರಂಭವಾಗಿದೆ. ಅದೇ ‘ಪವರ್‍ ಸ್ಟಾರ್‍ ಧರೆಗೆ ದೊಡ್ಡವನು’. ಈ ಚಿತ್ರವನ್ನು ಸೂರ್ಯ ನಿರ್ದೇಶನ ಮಾಡುತ್ತಿದ್ದು, ಕಂಠೀರವ ಸ್ಟುಡಿಯೋದಲ್ಲಿ ಚಿತ್ರ ಸೆಟ್ಟೇರಿದೆ. ನಿರ್ದೇಶಕ ಶಶಾಂಕ್‍ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ಸೂರ್ಯ ಇದುವರೆಗೂ ಸುಮಾರು 15 ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದಾರಂತೆ. ಈ ಹಿಂದೆ 2014ರಲ್ಲಿ ಯಶ್‍ ಅವರಿಗೆ ಒಂದು ಕಥೆ ಮಾಡಿಕೊಂಡಿದ್ದರಂತೆ. 50 ಲಕ್ಷ ಖರ್ಚು ಮಾಡಿ ಗ್ರಾಫಿಕ್ಸ್ ಮೂಲಕ ಟೀಸರ್ ಸಹ ಮಾಡಿಸಿದ್ದರಂತೆ. ಆದರೆ, ಕಾರಣಾಂತರಗಳಿಂದ ಚಿತ್ರ ಆರಂಭಗೊಳ್ಳಲಿಲ್ಲ. ಆ ಕಥೆಯನ್ನು ಇಟ್ಟುಕೊಂಡು ಒಂದಷ್ಟು ಬದಲಾವಣೆ ಜೊತೆಗೆ ಈಗ ಚಿತ್ರ ಆರಂಭಿಸಿದ್ದಾರೆ.

ಈ ಚಿತ್ರದಲ್ಲಿ ವಿಶೇಷ ತಂತ್ರಜ್ಞಾನದ ಮೂಲಕ ಪುನೀತ್ ರಾಜಕುಮಾರ್ ಅವರನ್ನು ಪರದೆಯ ಮೇಲೆ ಸೃಷ್ಟಿ ಮಾಡಲಾಗುವುದಂತೆ. ಕಣ್ಣಿಲ್ಲದ ಮಗುವಿಗೆ ದೃಷ್ಟಿ ಬಂದಾಗ ಆಕೆಯ ಆಸೆ ನೆರವೇರಿಸಿಕೊಳ್ಳಲು ಏನೆಲ್ಲಾ ಮಾಡುತ್ತಾಳೆ ಎಂಬುದು ಚಿತ್ರದ ಕಥೆ.

’ಪವರ್ ಸ್ಟಾರ್ ಧರೆಗೆ ದೊಡ್ಡವನು’ ಚಿತ್ರದ ಕುರಿತು ಮಾತನಾಡುವ ಸೂರ್ಯ, ‘ಈಗಾಗಲೇ ಈ ಚಿತ್ರದ ಗ್ರಾಫಿಕ್ಸ್ ತಂತ್ರಜ್ಞಾನದ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಮಾತಿನ ಭಾಗ ಹಾಗೂ ಹಾಡಿನ ಭಾಗ ಚಿತ್ರೀಕರಣ ಮಾಡಬೇಕಿದೆ. ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದು, ನಮ್ಮ ಚಿತ್ರವನ್ನು ಇದೇ ವರ್ಷ ಅಕ್ಟೋಬರ್‍ 29ರಂದು ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.

‘ಸರಿಗಮಪ’ ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿರುವ ಬೇಬಿ ಜ್ಞಾನ ಗುರುರಾಜ್ ಈ ಚಿತ್ರದಲ್ಲಿ ಪುನೀತ್‍ ಅಭಿಮಾನಿಯ ಪಾತ್ರ ಮಾಡುತ್ತಿದ್ದಾರಂತೆ. ಹಿರಿಯ ನಟ ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ವಿಜಯ್ ಭಾಸ್ಕರ್ ಛಾಯಾಗ್ರಾಹಣ, ಅನುಶ್ರೀ ಶ್ರೀಧರ್ ಮೂರ್ತಿ ಸಂಗೀತವಿದೆ.

ಈ ಚಿತ್ರದಲ್ಲಿ ಶಿಲ್ಪಿಯ ಪಾತ್ರವೊಂದಿದ್ದು, ಅಯೋಧ್ಯೆಯ ಬಾಲರಾಮನ ವಿಗ್ರಹ ಕೆತ್ತಿದಂತಹ ಮೈಸೂರಿನ ಶಿಲ್ಪಿ ಯೋಗಿರಾಜ್ ಅವರನ್ನು ಭೇಟಿ ಮಾಡುವ ಪ್ರಯತ್ನ ನಡೆಯುತ್ತಿದೆಯಂತೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago