ಮನರಂಜನೆ

ಕಾಡಿನ ಕಥೆಗೆ ನಾಡಿನ ಜನರ ಮೆಚ್ಚುಗೆ: ಸಂಭ್ರಮಿಸಿದ ‘ಜಂಗಲ್ ಮಂಗಲ್’ ಚಿತ್ರತಂಡ

ಒಂದು ಚಿತ್ರಕ್ಕೆ ಹಾಕಿದ ದುಡ್ಡು ಬಂದಿದೆ, ಮೇಲೆ ಸಾಕಷ್ಟು ಲಾಭವೂ ಸಿಕ್ಕಿದೆ ಎಂದರೆ ಅದು ಯಶಸ್ಸು ಎಂದು ಪರಿಗಣಿಸಲಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ಹಾಕಿದ ಹಣ ಮರಳಿ ಪಡೆಯುವಲ್ಲಿ ವಿಫಲವಾಗಿವೆ. ಕಳೆದ ವಾರ ಬಿಡುಗಡೆಯಾದ ‘ಜಂಗಲ್‍ ಮಂಗಲ್‍’ ಇನ್ನೂ ಹಾಕಿದ ಬಂಡವಾಳವನ್ನು ವಾಪಸ್ಸು ಪಡೆದಿಲ್ಲ. ಆದರೆ, ಚಿತ್ರತಂಡದವರಿಗೆ ಚಿತ್ರಗೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಖುಷಿ ಇದೆಯಂತೆ.

ಈ ಚಿತ್ರದ ಕುರಿತು ಮಾತನಾಡುವ ಚಿತ್ರದ ನಾಯಕ ಯಶ್‍ ಶೆಟ್ಟಿ, ‘ನಮ್ಮ ಚಿತ್ರ ಕಮರ್ಷಿಯಲ್ ಆಗಿ ಗೆದ್ದಿದೆ ಎಂದು ಹೇಳಲು ಪತ್ರಿಕಾಗೋಷ್ಠಿ ಆಯೋಜಿಸಿಲ್ಲ. ಆದರೆ, ಇಲ್ಲಿಯವರೆಗೂ ನೋಡಿರುವವರ ಮನ ಗೆದ್ದಿದೆ ಎಂದು ಹೇಳಲು ಪತ್ರಿಕಾಗೋಷ್ಠಿ ಆಯೋಜಿಸಿದ್ದೇವೆ. ಚಿತ್ರ ಬಿಡುಗಡೆಯಾದಾಗಿನಿಂದ ಇದುವರೆಗೂ ನಮ್ಮ ಚಿತ್ರ ನೋಡಿದ ಯಾರೊಬ್ಬರೂ ಕೂಡ ಚಿತ್ರ ಚೆನ್ನಾಗಿಲ್ಲ ಎಂದು ಹೇಳಿಲ್ಲ‌. ಅದು ನಮಗೆ ಬಹಳ ಖುಷಿಯಾದ ವಿಚಾರ. ನಮ್ಮ ಚಿತ್ರ ವೀಕ್ಷಿಸಿದ ನಿರ್ದೇಶಕ ಗುರು ದೇಶಪಾಂಡೆ, ತಾವೇ ಸ್ವತಃ ಶರಣ್ ಹಾಗೂ ಧ್ರುವ ಸರ್ಜಾ ಅವರಿಗೆ ಕರೆ ಮಾಡಿ ಚಿತ್ರ ನೋಡುವುದಕ್ಕೆ ಹೇಳಿದರು. ಶರಣ್ ಹಾಗೂ ಧ್ರುವ ಸರ್ಜಾ ಅವರು ನಮ್ಮ ಚಿತ್ರ ನೋಡಿ ಮೆಚ್ಚುಗೆಯ ಮಾತುಗಳಾಡಿದರು. ಅದರಿಂದ ನಮಗೆ ಬಹಳ ಅನುಕೂಲವಾಯಿತು‌. ಇನ್ನು, ಚಿತ್ರ ನೋಡಿದ ಕೆಲವರು ತಮ್ಮ ಸ್ನೇಹಿತರಿಗೆ ನೋಡಿ ಅಂತ ಹೇಳುತ್ತಿರುವುದು, ಕೆಲವು ಕಡೆ ತಾವೇ ಶೋಗಳನ್ನು ಆಯೋಜಿಸುತ್ತಿರುವುದು … ಇದೆಲ್ಲಾ ನೋಡಿ ಮನ ತುಂಬಿ ಬಂದಿದೆ’ ಎಂದರು.

ಚಿತ್ರ ನೋಡಿದ ಕೆಲವರು ಮಲಯಾಳಂ ಚಿತ್ರ ಇದ್ದ ಹಾಗೆ ಇದೆ ಎಂದರಂತೆ, ಈ ಕುರಿತು ಮಾತನಾಡುವ ನಿರ್ದೇಶಕ ರಕ್ಷಿತ್‍ ಕುಮಾರ್, ‘ಇದರಿಂದ ಒಂದು ಕಡೆ ಖುಷಿ. ಮತ್ತೊಂದು ಕಡೆ ಬೇರೆ ಭಾಷೆಯವರು ಈ ಚಿತ್ರ ನೋಡಿ ಕನ್ನಡದಲ್ಲಿ ಒಂದೊಳ್ಳೆ ಸಿನಿಮಾ ಬಂದಿದೆ ಎಂದು ಹೇಳಬೇಕು.‌ ಮುಂದೊಂದು ದಿನ ಆ ದಿನ ಬರುತ್ತದೆ ಎಂಬ ವಿಶ್ವಾಸವಿದೆ. ಎರಡನೇ ವಾರಕ್ಕೆ ಅಡಿ ಇಡುತ್ತಿರುವ ಈ ಸಂದರ್ಭದಲ್ಲೂ ಅನೇಕ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಪ್ರದರ್ಶನ ಕಾಣುತ್ತಿದೆ’ ಎಂದರು.

ತಮ್ಮ ಪಾತ್ರಕ್ಕೆ ಹಾಗೂ ಚಿತ್ರಕ್ಕೆ ಸಿಗುತ್ತಿರುವ ಪ್ರಶಂಸೆಗೆ ಬಹಳ ಸಂತೋಷವಾಗಿದೆ ಎಂದು ‘ಉಗ್ರಂ’ ಮಂಜು ಹೇಳಿದರೆ, ತಮ್ಮ ಅಭಿನಯದ ಮೊದಲ ಚಿತ್ರಕ್ಕೆ ಜನರು ತೋರುತ್ತಿರುವ ಒಲವಿಗೆ ನಾಯಕಿ ಹರ್ಷಿಕ ರಾಮಚಂದ್ರ ಧನ್ಯವಾದ ಹೇಳಿದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago