ಮನರಂಜನೆ

ಪೋಸ್ಟರ್‌ನಿಂದ ಮಡೆನೂರು ಮನುನನ್ನು ಕೈಬಿಟ್ಟ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡ

ಕಳೆದ ವಾರ ಬಿಡುಗಡೆಯಾದ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಎರಡನೇ ವಾರಕ್ಕೆ ಕಾಲಿಟ್ಟಿದೆ. ಮನು ಅವರಿಂದ ಸಾಕಷ್ಟು ಮುಜುಗರ ಅನುಭವಿಸಿರುವ ಚಿತ್ರತಂಡವು, ಇದೀಗ ಪೋಸ್ಟರ್‌ನಿಂದ ಅವರನ್ನು ಕೈಬಿಟ್ಟಿದೆ. ನಾಯಕನೇ ಇಲ್ಲದೆ ಚಿತ್ರತಂಡ ಪೋಸ್ಟರ್‌ ಬಿಡುಗಡೆ ಮಾಡಿದೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಯಿತು. ಚಿತ್ರ ಬಿಡುಗಡೆಯ ಹಿಂದಿನ ದಿನ ನಾಯಕ ಮಡೆನೂರು ಮನು ಅವರನ್ನು ಪೊಲೀಸರು ಅತ್ಯಾಚಾರದ ಆರೋಪದ ಮೇಲೆ ಬಂಧಿಸಿದ್ದರು. ಅದಾಗಿ ಎರಡು ದಿನಗಳ ನಂತರ ಶಿವರಾಜಕುಮಾರ್, ‍ಧ್ರುವ ಸರ್ಜಾ ಮತ್ತು ದರ್ಶನ್‍ ಕುರಿತು ಮನು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಒಂದು ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಯಿತು. ಮನು ವಿರುದ್ಧ ಪ್ರತಿಭಟನೆಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಮನು ಅವರನ್ನು ಬ್ಯಾನ್‍ ಮಾಡಿತು. ಇದರಿಂದ ಸಾಕಷ್ಟು ಮುಜುಗರಕ್ಕೊಳಗಾದ ಚಿತ್ರತಂಡವರು ಮನು ಅವರಿಂದ ಅಂತರ ಕಾಯ್ದುಕೊಳ್ಳುವುದರ ಜೊತೆಗೆ, ಅವರನ್ನು ಪೋಸ್ಟರ್‍ನಿಂದಲೇ ಕೈಬಿಟ್ಟಿದೆ.

ಮನು ಮಾಡಿರುವ ತಪ್ಪಿಗೆ ನಮಗೆ ಶಿಕ್ಷೆ ಕೊಡಬೇಡಿ ಎಂದಿರುವ ನಿರ್ಮಾಪಕ ಸಂತೋಷ್‍ ಕುಮಾರ್, ‘ನಾವ್ಯಾರು ತಪ್ಪು ಮಾಡಿಲ್ಲ. ಇದು ನಮ್ಮ ಅಳಿವು ಉಳಿವಿನ ಪ್ರಶ್ನೆ. ನಾನು ಇಲ್ಲಿಗೆ ದುಡ್ಡು ಮಾಡಲು ಬಂದಿಲ್ಲ. ತುಂಬಾ ಕನಸು ಕಟ್ಟಿಕೊಂಡು ಚಿತ್ರರಂಗಕ್ಕೆ ಬಂದಿದ್ದೇನೆ. ಇದು ಕನ್ನಡಿಗರಿಗಾಗಿ ಮಾಡಿದ ಸಿನಿಮಾ. ಚಿತ್ರಕ್ಕೆ ನೂರಾರು ಜನ ಕೆಲಸ ಮಾಡಿದ್ದೇವೆ. ನಾವೆಲ್ಲಾ ಏನು ತಪ್ಪು ಮಾಡಿದ್ದೇವೆ? ಮನು ಒಬ್ಬ ಒಳ್ಳೆಯ ಪ್ರತಿಭೆ ಎಂದು ಅವಕಾಶಕೊಟ್ಟೆವೇ ಹೊರತು, ಅವನು ನನ್ನ ಅಣ್ಣ ಅಥವಾ ತಮ್ಮನಲ್ಲ. ಈ ತರಹ ಮಾಡುತ್ತಾನೆ ಎಂದು ಗೊತ್ತಿರಲಿಲ್ಲ. ಕಾನೂನು ಪ್ರಕಾರ ಅವನಿಗೆ ಶಿಕ್ಷೆಯಾಗಲಿ. ಶಿವಣ‍್ಣ, ಧ್ರುವ ಮತ್ತು ದರ್ಶನ್‍ ಅವರಿಗೆ ಸಾರಿ ಕೇಳುತ್ತೇನೆ. ಅವರು ಸಹ ಕಷ್ಟದ ದಿನಗಳನ್ನು ನೋಡಿದ್ದಾರೆ. ನಿರ್ಮಾಪಕರು ಎಷ್ಟು ಕಷ್ಟಪಡುತ್ತಾರೆ ಎಂದು ಅವರಿಗೆ ಗೊತ್ತಿದೆ. ಚಿತ್ರ ನೋಡಿದವರು ಚೆನ್ನಾಗಿದೆ ಎನ್ನುತ್ತಿದ್ದಾರೆ. ಎಲ್ಲರೂ ಪಾಸಿಟಿವ್‍ ಆಗಿ ಮಾತನಾಡುತ್ತಿದ್ದಾರೆ. ಆದರೆ, ಮನು ಹೇಳಿಕೆ ಎಫೆಕ್ಟ್ ಆಗುತ್ತಿದೆ’ ಎಂದರು.

ನಿರ್ಮಾಪಕರಿಗೆ ಶಿವರಾಜಕುಮಾರ್‍ ಅಭಿಮಾನಿಗಳು ಫೋನ್‍ ಮಾಡಿದ್ದರಂತೆ. ಮನು ಕಟೌಟ್‍ ತೆಗೆಯಿರಿ ಎಂದು ಹೇಳಿದರಂತೆ. ‘ಶಿವಣ್ಣ ಅವರಿಗೆ ಅವಮಾನ ಎಂದು ಗೊತ್ತಾದಾಗ, ನಾವೇ ತೆಗೆಯುತ್ತಿದ್ದೆವು. ನಮಗೆ ಶಿವರಾಜ್‌ಕುಮಾರ್ ಅವರ ಕಡೆಯಿಂದ ಯಾವುದೇ ಸಮಸ್ಯೆ ಆಗಿಲ್ಲ. ಸಿನಿಮಾಗೆ ತೊಂದರೆ ಕೊಡಬೇಡಿ ಎಂದು ಶಿವಣ್ಣ ಹೇಳಿದ್ದಾರಂತೆ. ಹಾಗಾಗಿಯೇ, ಸಿನಿಮಾ ಈಗಲೂ ಓಡುತ್ತಿದೆ. ಆದರೆ, ಪ್ರೇಕ್ಷಕರು ಕಡಿಮೆಯಾಗಿದ್ದಾರೆ. ಅದಕ್ಕೆ ಕಾರಣ ಮನು ಆಡಿರುವ ಮಾತುಗಳು. ಅದನ್ನು ಕೇಳಿ ಎಲ್ಲರಿಗೂ ಬೇಸರವಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನಮ್ಮ ಬಗ್ಗೆ ದ್ವೇಷ ಬೇಡ. ದಯಮಾಡಿ ಬಂದು ಸಿನಿಮಾ ನೋಡಿ’ ಎಂದು ಮನವಿ ಸಲ್ಲಿಸುತ್ತಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

13 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

18 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago